• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ

ಬಸುರಿಯ ದೈಹಿಕ ಆರೋಗ್ಯ ರಕ್ಷಣೆ

TNN Correspondent Posted On July 3, 2017
0


0
Shares
  • Share On Facebook
  • Tweet It

ಗರ್ಭಾವಸ್ಥೆಯು ಪ್ರತಿಯೊಬ್ಬ ಸ್ತ್ರೀಗೆ ಅತಿ ಅಪ್ಯಾಯಮಾನವಾದ ಸಮಯ.ಆರೋಗ್ಯಯುತವಾದ ಮಗುವಿಗೆ ಜನ್ಮ ನೀಡುವಲ್ಲಿ ಬಸುರಿಯ ಆರೋಗ್ಯ ಮಹತ್ತರವಾದ ಪಾತ್ರ ವಹಿಸುತ್ತದೆ.ಆರೋಗ್ಯವಂತ ಸ್ತ್ರೀ ಆರೋಗ್ಯವಂತ ಮಗುವಿಗೆ ಜನ್ಮ ನೀಡಬಲ್ಲಳು.ಇದರಿಂದ ಈ ಸಂದರ್ಭದಲ್ಲಿ ಮಹಿಳೆಯರು ತಮಗೆ ಪ್ರಿಯವಾದ ಕೆಲವು ತಿನಿಸುಗಳನ್ನು ತ್ಯಾಗ ಮಾಡಲೇಬೇಕು.ಇಲ್ಲದಿದ್ದರೆ ಮುಂದೆ ಔಷಧಿಗಳನ್ನೇ ಆಹಾರವಾಗಿಸಿಕೊಳ್ಳುವಂಥಹ ಸಂದರ್ಭ ತಾಯಿ ,ಮಗು ಇಬ್ಬರಿಗೂ ಬರಬಹುದು.

ಮೊದಲಾಗಿ ಬಸುರಿಗೆ ಯಾವ ಆಹಾರ ಪದಾರ್ಥಗಳು ಒಳ್ಳೆಯದು ಎಂದು ತಿಳಿಯೋಣ.

ನೀರು ಜೀವಜಲ.ಕಾದಾರಿದ ನೀರು ದಿನಕ್ಕೆ ಕನಿಷ್ಠ ಆರು ಲೋಟವಾದರೂ ಕುಡಿಯಬೇಕು.ಬಸುರಿಗೆ ಮೂತ್ರಶಂಕೆ ಜಾಸ್ತಿಯಿರುವುದರಿಂದ ದೇಹದಲ್ಲಿ ನೀರು ಆರಲು ಬಿಡಬಾರದು.

ಕ್ಯಾಲ್ಸಿಯಂ,ಪ್ರೊಟೀನ್ ಇರುವ ಆಹಾರಗಳು ಹೆಚ್ಚಿರಲಿ.ಮೊಳಕೆ ಬರಿಸಿದ ಹೆಸರುಕಾಳು ,ಹುರುಳಿಕಾಳು ಹೀಗೆ ಕಾಳುಗಳನ್ನು ಸ್ವಲ್ಪ ಉಪ್ಪು ಮೆಣಸಿನ ಹುಡಿ ,ನಿಂಬೆ ರಸ ಸೇರಿಸಿ ತಿಂದರೆ ಬಾಯಿಗೂ ರುಚಿ ,ಆರೋಗ್ಯಕ್ಕೂ ಒಳ್ಳೆಯದು.ಇಲ್ಲವೇ ಬೇಯಿಸಿ ಉಸಲಿ ಕೂಡ ಮಾಡಿಕೊಳ್ಳಬಹುದು.

ಹಾಲು ಕುಡಿಯುವುದು ಬಹಳ ಒಳ್ಳೆಯದು.ಬೆಳಗ್ಗೆ ಒಂದು ಮತ್ತು ಸಂಜೆ ಒಂದು ಲೋಟ ಹಾಲು ಕುಡಿಯುವುದು ಕ್ಯಾಲ್ಸಿಯಂ ನ್ನು ಪೂರೈಸುತ್ತದೆ. ಕೆಲವರು ಇದಕ್ಕೆ ಕೇಸರಿ ದಳಗಳನ್ನು ಹಾಕಿ ಕುಡಿಯುತ್ತಾರೆ,ಇದರಿಂದ ಹುಟ್ಟುವ ಮಗು ಬೆಳ್ಳಗಾಗುತ್ತದೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ .ಮಗುವಿನ ಮೈ ಬಣ್ಣ ನಿರ್ಧಾರವಾಗುವುದು ವಂಶವಾಹಿಗಳಿಂದ ಮಾತ್ರ.ಆದ್ರೂ ಕೇಸರಿ ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು.ಕುದಿಯುವ ಒಂದು ಲೋಟ ಹಾಲಿಗೆ ಒಂದು ಕೇಸರಿ ದಳ ಮಾತ್ರ ಹಾಕ್ಬೇಕು ,ತಣ್ಣಗಾದ ಮೇಲೆ ಕುಡಿಯಬಹುದು .ಜಾಸ್ತಿ ದಳಗಳನ್ನು ಹಾಕಬೇಡಿ ಯಾಕೆಂದ್ರೆ ಇದು ತುಂಬ ಉಷ್ಣಕಾರಕ ಕೂಡ ಹೌದು.ಗರ್ಭಕೋಶ ಸಂಕುಚಿತವಾಗೋ ಸನ್ನಿವೇಶ ಕೂಡ ಬರಬಹುದು.

ಆದಷ್ಟು ಜಂಕ್ ಆಹಾರಗಳಿಂದ ದೂರವಿರಿ.ತುಂಬಾ ಆಸೆಯಾದಾಗ ಮನೆಯಲ್ಲೇ ಶುಚಿಯಾಗಿ ಪಾನಿಪುರಿ ,ಮಸಾಲಾಪುರಿಗಳನ್ನು ತಯಾರಿಸಿಕೊಂಡು ತಿನ್ನಿ.ಜಾಸ್ತಿ ಖಾರ ದೂರ ಇಡಿ.

ಮೈದಾ ಹಿಟ್ಟಿನಿಂದ ಮಾಡಿದ ಬಿಸ್ಕಸ್ತ್ತುಗಳನ್ನು ತಿನ್ನದಿರಿ .ಚಪಾತಿ ಮಾಡುವಾಗ ಮೈದಾ ಸೇರಿಸಬೇಡಿ .ಆದಷ್ಟು ತುಪ್ಪ ಬಳಸಿ ಒಗ್ಗರಣೆ ಕೊಡಿ.ದೋಸೆ ಮಾಡುವಾಗ ತುಪ್ಪ ಬಳಸಿ.ಇದು ರಿಫೈನ್ಡ್ ಎಣ್ಣೆಗಿಂತ ಒಳ್ಳೆಯದು.

ಐಸ್ಕ್ರೀಮ್ ,ತಂಪುಪಾನೀಯಗಳನ್ನು ಖಂಡಿತಾ ಸೇವಿಸಬೇಡಿ .ಇದರಿಂದ ಮಗು ಮತ್ತು ತಾಯಿ ಇಬ್ಬರಿಗೂ ಶೀತ ,ಕಫ ಆಗೋ ಸಾಧ್ಯತೆ ಇದೆ.ಇವು ಹಾಳಾಗದಂತೆ ಕೆಮಿಕಲ್ ಗಳನ್ನೂ ಸೇರಿಸೋದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.ಆಗ ತಾನೇ ತೆಗೆದ ಶುಚಿಯಾದ ಹಣ್ಣಿನ ರಸವನ್ನು ಬೆಲ್ಲ ಸೇರಿಸಿ ಕುಡಿಯುವುದು ಉತ್ತಮ.ಕಪ್ಪು ಬೆಲ್ಲ ಸೇರಿಸಿದರೆ ಇನ್ನೂ ಒಳ್ಳೆಯದು.

ಆರೋಗ್ಯಯುತವಾದ ಗರ್ಭವಸ್ಥೆ ನಿಮ್ಮದಾಗಲಿ ,ಆರೋಗ್ಯಯುತವಾದ ಮಗು ನಿಮ್ಮ ಕುಟುಂಬಕ್ಕೆ ಬರಲಿ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search