• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬೋದ್ ಗಯಾ ದಾಳಿಗೆ ಮ್ಯಾನ್ಮಾರಿನಲ್ಲಿ ಮುಸ್ಲಿಮರ ಮೇಲಿನ ದಾಳಿ ಕಾರಣ ಎಂದ ಉಗ್ರರು!

TNN Correspondent Posted On November 21, 2017
0


0
Shares
  • Share On Facebook
  • Tweet It

ದೆಹಲಿ: ಬಿಹಾರದ ಬೋದ್ ಗಯಾದ ಬುದ್ಧ ದೇವಾಲಯದ ಮೇಲೆ 2013ರಲ್ಲಿ ನಡೆದಿದ್ದ ಬಾಂಬ್ ದಾಳಿಗೆ ಕಾರಣ ಮಯನ್ಮಾರ್ ನಲ್ಲಿ ಮುಸ್ಲಿಮರ ಮೇಲೆ ನಡೆದ ದೌರ್ಜನ್ಯದ ಪ್ರತಿರೋಧವೇ ಕಾರಣ ಎಂದು ಆರೋಪಿ ಉಗ್ರರು ತಿಳಿಸಿದ್ದಾರೆ. ಬಾಂಬ್ ದಾಳಿ ಆರೋಪಿ 18 ವರ್ಷದ ಬಾಲಾಪರಾಧಿ ಈ ಮಾಹಿತಿ ನೀಡಿದ್ದು, ರಾಷ್ಟ್ರೀಯ ತನಿಖಾ ದಳ ನಡೆಸಿದ ವಿಚಾರಣ ವೇಳೆ ಬಾಯಿ ಬಿಟ್ಟಿದ್ದಾನೆ.

2013ರಲ್ಲಿ ಬಾಲಾಪರಾಧಿಯಾಗಿದ್ದ ಸದ್ಯ 18 ವರ್ಷದ ಉಗ್ರ ಸೇರಿ ಐದು ಜನರ ತಂಡ ಬೋದ್ ಗಯಾದಲ್ಲಿನ ಬುದ್ಧನ ಮೂರ್ತಿಯಿರುವ 80 ಅಡಿ ದೂರದಲ್ಲೇ ಬಾಂಬ್ ದಾಳಿ ನಡೆಸಿದ್ದ. ಬಾಂಬ್ ದಾಳಿ ನಡೆಸುವ ಮೂಲಕ ವಿಶ್ವಕ್ಕೆ ಮುಸ್ಲಿಮರ ತಾಕತ್ತನ್ನು ತೋರಿಸುವ ಸಂದೇಶ ನೀಡಲಾಗಿದೆ ಎಂದು ಬಾಲಾಪರಾಧಿ ತಿಳಿಸಿದ್ದಾನೆ. ಬಾಂಬ್ ದಾಳಿ ನಡೆಸಿದ್ದ ಆರೋಪದ ಮೇಲೆ ಬಾಲಕನನ್ನು ಬಾಲಗೃಹಕ್ಕೆ ಕಳುಹಿಸಲಾಗಿತ್ತು.

ರಾಷ್ಟ್ರೀಯ ತನಿಖಾ ದಳದ ಮಾಹಿತಿ ಪ್ರಕಾರ ‘ಬೋದ್ ಗಯಾದ ದೇವಾಲಯದಲ್ಲಿ ಐದು ಉಗ್ರರ ತಂಡ 13 ಬಾಂಬ್ ಗಳನ್ನು ಇಟ್ಟಿತ್ತು. ಅದರಲ್ಲಿ ಕೇವಲ ಎರಡು ಬಾಂಬ್ ಗಳು ಬ್ಲಾಸ್ಟ್ ಆಗಿದ್ದವು. ಇಬ್ಬರು ಬೌದ್ಧ ಭಿಕ್ಷುಗಳು ಗಾಯಗೊಂಡಿದ್ದರು. ಉಳಿದ ಬಾಂಬ್ ಗಳನ್ನು ಪೊಲೀಸರು ನಿಷ್ಕೃಯಗೊಳಿಸಿದ್ದರು. ಆರೋಪಿಗಳಾದ ಹೈದರ್ ಅಲಿ, ಮುಜಿಬುಲ್ಹಾ, ಇಮ್ತಿಯಾಜ್, ತಾರಿಖ್ ಅನ್ಸಾರಿ ಮತ್ತು ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ಎಲ್ಲ ಉಗ್ರರು ಇಡೀ ಬಾಂಬ್ ದಾಳಿಯ ಕುರಿತು ಮಾಹಿತಿ ನೀಡಿದ್ದಾರೆ. ಉಗ್ರ ಹೈದರ್ ನಿಷೇಧಿತ ಸ್ಟುಡೆಂಟ್ ಇಸ್ಲಾಮಿಕ್ ಮೂವಮೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆಯ ಸದಸ್ಯನಾಗಿದ್ದ ಎಂಬ ಮಾಹಿತಿ ಹೊರಬಿದಿದೆ.

ಬೋದ್ ಗಯಾದ ಮೇಲೆ ಬಾಂಬ್ ದಾಳಿ ನಡೆಸಿರುವ ಉಗ್ರ ಯುವಕನ ಹೇಳಿಕೆಯಿಂದ ರೋಹಿಂಗ್ಯಾ ಮುಸ್ಲಿಮರ ಮೇಲಿನ ವಿಶ್ವಾಸ ಮತ್ತಷ್ಟು ಕುಗ್ಗಿದೆ. ಭಾರತದಲ್ಲಿ ರೋಹಿಂಗ್ಯಾಗಳಿಗೆ ಆಶ್ರಯ ನೀಡಬೇಕು ಎನ್ನುವವರಿಗೆ ತಕ್ಕ ಉತ್ತರ ನೀಡಿದಂತಾಗಿದೆ.

ದೇಶಕ್ಕೆ ಕಂಟಕವಾಗಿದ್ದಾರೆ ಎಂದು ಮಯನ್ಮಾರ್ ನಲ್ಲಿನ ಮುಸ್ಲಿಮರನ್ನು ದೇಶದಿಂದ ಗಡಿಪಾರು ಮಾಡಲು ಅಲ್ಲಿನ ಸರ್ಕಾರ ನಿರ್ಧರಿಸಿತ್ತು. ಅಲ್ಲದೇ ರೋಹಿಂಗ್ಯಾ ಮುಸ್ಲಿರು ವಿಧ್ವಸಂಕ ಕೃತ್ಯ ಮಾಡುತ್ತಿದ್ದಾರೆ. ದೇಶದ ರಕ್ಷಣೆಗೆ ಸವಾಲಾಗಿದ್ದಾರೆ ಎಂಬ ಆರೋಪಗಳು ಅವರ ವಿರುದ್ಧ ಕೇಳಿ ಬಂದಿದ್ದವು.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search