• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಪತಿ ರಾಮನಾಥ ಕೋವಿಂದ ಅರುಣಾಚಲ ಭೇಟಿ, ಖ್ಯಾತೆ ತೆಗೆದ ಚೀನಾ

TNN Correspondent Posted On November 21, 2017
0


0
Shares
  • Share On Facebook
  • Tweet It

ಬೀಜಿಂಗ್: ಅರುಣಾಚಲ ಪ್ರದೇಶಕ್ಕೆ ಭಾನುವಾರ ರಾಷ್ಟ್ರಪತಿ ಕೋವಿಂದ ಭೇಟಿ ನೀಡಿರುವುದಕ್ಕೆ ಚೀನಾ ಕೊಂಕು ತೆಗೆದಿದ್ದು, ಭಾರತ ಗಡಿ ವಿಚಾರದಲ್ಲಿ ಬಿಕ್ಕಟ್ಟು ಸೃಷ್ಟಿಸುತ್ತಿದೆ ಎಂದು ಚೀನಾ ಸರಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎನ್ನುವ ಚೀನಾ ಸರಕಾರ ಅರುಣಾಚಲ ಪ್ರದೇಶದಲ್ಲಿ ಗಡಿ ವಿವಾದವಿದ್ದು, ಅದನ್ನು ಬಗೆಹರಿಸುವ ಮುನ್ನ ಭಾರತ ಯಾವುದೇ ಮಹತ್ತರ ಚಟುವಟಿಕೆಗಳನ್ನು ಮಾಡಬಾರದು ಎಂದು ಚೀನಾ ವಿದೇಶಾಂಗ ಕಾರ್ಯಾಲಯದ ವಕ್ತಾರ ಲು ಕಾಂಗ್ ಹೇಳಿದ್ದಾರೆ.

ಎರಡು ದೇಶಗಳ ಮಧ್ಯೆ ಇರುವ ವಿವಾದವನ್ನು ಬಗೆಹರಿಸಬೇಕು. ಸೂಕ್ತ ಪರಿಹಾರವನ್ನು ಹುಡಕಬೇಕಿದೆ. ಎರಡು ಕಡೆಯಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂದು ಲು ಮನವಿ ಮಾಡಿದ್ದಾರೆ. ಭಾರತ ನಮ್ಮ ಮನವಿಯನ್ನು ಅರ್ಥ ಮಾಡಿಕೊಳ್ಳಬೇಕು. ಗಡಿಯಲ್ಲಿ ವಿನಾಕಾರಣ ವಿವಾದ ಸೃಷ್ಟಿಸಬಾರದು. ದೂರದೃಷ್ಟಿಯ ಹಿತಾಸಕ್ತಿ ಕಾಯ್ದುಕೊಳ್ಳಬೇಕು. ಗಡಿಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು ಎಲ್ಲರಿಗೂ ಉತ್ತಮ ಎಂದು ಆಗ್ರಹದ ರೀತಿಯಲ್ಲಿ ಮನವಿ ಮಾಡಿದ್ದಾರೆ.

ಭಾರತ ಯಾವುದೇ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಅರುಣಾಚಲಕ್ಕೆ ಭೇಟಿ ನೀಡಿದ್ದರೂ ಚೀನಾ ಈ ರೀತಿಯ ಪ್ರತಿಕ್ರಿಯೆ ನೀಡುತ್ತದೆ. ಆದರೆ ಈ ಭಾರಿ ರಾಷ್ಟ್ರಪತಿಯವರ ಭೇಟಿಯನ್ನೇ ಪ್ರಶ್ನಿಸಿದೆ. ಚೀನಾ ಆಕ್ಷೇಪವನ್ನು ತಿರಸ್ಕರಿಸಿರುವ ಭಾರತ ‘ಭಾರತದ ಎಲ್ಲ ಪ್ರದೇಶಗಳಿಗೆ ಭೇಟಿ ನೀಡುವ ಸ್ವಾತಂತ್ರ್ಯ ದೇಶದ ಮುಖಂಡರು ಹೊಂದಿದ್ದಾರೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ತಿಳಿಸಿದೆ.

ಭಾರತ ಚೀನಾದೊಂದಿಗೆ 3,488 ಕಿ.ಮೀ . ಗಡಿಯನ್ನು ಹಂಚಿಕೊಂಡಿದೆ. ನವೆಂಬರ್ 6ರಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅರುಣಾಚಲ ಪ್ರದೇಶದಲ್ಲಿ ಚೀನಾ ಗಡಿ ಹತ್ತಿರದ ಸೈನಿಕ ನೆಲೆಗೆ ಭೇಟಿ ನೀಡಿದ್ದಾಗಲೂ ಚೀನಾ ಸರಕಾರ ಆಕ್ಷೇಪ ವ್ಯಕ್ತಪಡಿಸಿತ್ತು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search