• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಪತಿ ರಾಮನಾಥ ಕೋವಿಂದ ಅರುಣಾಚಲ ಭೇಟಿ, ಖ್ಯಾತೆ ತೆಗೆದ ಚೀನಾ

TNN Correspondent Posted On November 21, 2017
0


0
Shares
  • Share On Facebook
  • Tweet It

ಬೀಜಿಂಗ್: ಅರುಣಾಚಲ ಪ್ರದೇಶಕ್ಕೆ ಭಾನುವಾರ ರಾಷ್ಟ್ರಪತಿ ಕೋವಿಂದ ಭೇಟಿ ನೀಡಿರುವುದಕ್ಕೆ ಚೀನಾ ಕೊಂಕು ತೆಗೆದಿದ್ದು, ಭಾರತ ಗಡಿ ವಿಚಾರದಲ್ಲಿ ಬಿಕ್ಕಟ್ಟು ಸೃಷ್ಟಿಸುತ್ತಿದೆ ಎಂದು ಚೀನಾ ಸರಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎನ್ನುವ ಚೀನಾ ಸರಕಾರ ಅರುಣಾಚಲ ಪ್ರದೇಶದಲ್ಲಿ ಗಡಿ ವಿವಾದವಿದ್ದು, ಅದನ್ನು ಬಗೆಹರಿಸುವ ಮುನ್ನ ಭಾರತ ಯಾವುದೇ ಮಹತ್ತರ ಚಟುವಟಿಕೆಗಳನ್ನು ಮಾಡಬಾರದು ಎಂದು ಚೀನಾ ವಿದೇಶಾಂಗ ಕಾರ್ಯಾಲಯದ ವಕ್ತಾರ ಲು ಕಾಂಗ್ ಹೇಳಿದ್ದಾರೆ.

ಎರಡು ದೇಶಗಳ ಮಧ್ಯೆ ಇರುವ ವಿವಾದವನ್ನು ಬಗೆಹರಿಸಬೇಕು. ಸೂಕ್ತ ಪರಿಹಾರವನ್ನು ಹುಡಕಬೇಕಿದೆ. ಎರಡು ಕಡೆಯಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂದು ಲು ಮನವಿ ಮಾಡಿದ್ದಾರೆ. ಭಾರತ ನಮ್ಮ ಮನವಿಯನ್ನು ಅರ್ಥ ಮಾಡಿಕೊಳ್ಳಬೇಕು. ಗಡಿಯಲ್ಲಿ ವಿನಾಕಾರಣ ವಿವಾದ ಸೃಷ್ಟಿಸಬಾರದು. ದೂರದೃಷ್ಟಿಯ ಹಿತಾಸಕ್ತಿ ಕಾಯ್ದುಕೊಳ್ಳಬೇಕು. ಗಡಿಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು ಎಲ್ಲರಿಗೂ ಉತ್ತಮ ಎಂದು ಆಗ್ರಹದ ರೀತಿಯಲ್ಲಿ ಮನವಿ ಮಾಡಿದ್ದಾರೆ.

ಭಾರತ ಯಾವುದೇ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಅರುಣಾಚಲಕ್ಕೆ ಭೇಟಿ ನೀಡಿದ್ದರೂ ಚೀನಾ ಈ ರೀತಿಯ ಪ್ರತಿಕ್ರಿಯೆ ನೀಡುತ್ತದೆ. ಆದರೆ ಈ ಭಾರಿ ರಾಷ್ಟ್ರಪತಿಯವರ ಭೇಟಿಯನ್ನೇ ಪ್ರಶ್ನಿಸಿದೆ. ಚೀನಾ ಆಕ್ಷೇಪವನ್ನು ತಿರಸ್ಕರಿಸಿರುವ ಭಾರತ ‘ಭಾರತದ ಎಲ್ಲ ಪ್ರದೇಶಗಳಿಗೆ ಭೇಟಿ ನೀಡುವ ಸ್ವಾತಂತ್ರ್ಯ ದೇಶದ ಮುಖಂಡರು ಹೊಂದಿದ್ದಾರೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ತಿಳಿಸಿದೆ.

ಭಾರತ ಚೀನಾದೊಂದಿಗೆ 3,488 ಕಿ.ಮೀ . ಗಡಿಯನ್ನು ಹಂಚಿಕೊಂಡಿದೆ. ನವೆಂಬರ್ 6ರಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅರುಣಾಚಲ ಪ್ರದೇಶದಲ್ಲಿ ಚೀನಾ ಗಡಿ ಹತ್ತಿರದ ಸೈನಿಕ ನೆಲೆಗೆ ಭೇಟಿ ನೀಡಿದ್ದಾಗಲೂ ಚೀನಾ ಸರಕಾರ ಆಕ್ಷೇಪ ವ್ಯಕ್ತಪಡಿಸಿತ್ತು.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search