• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರದಲ್ಲಿ ಉಗ್ರರ ಶರಣಾಗತಿಗೆ ಸಿಆರ್ ಪಿಎಫ್ ನಿಂದ ಹೆಲ್ಪ್ ಲೈನ್

TNN Correspondent Posted On November 21, 2017
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿನ ಭಯೋತ್ಪಾದನೆಯನ್ನು ಬೇರು ಮಟ್ಟದಿಂದ ತೊಡೆದು ಹಾಕಲು ಪಣ ತೊಟ್ಟಿರುವ ಭಾರತೀಯ ಸೇನೆ ಉಗ್ರರನ್ನು ಶರಣಾಗತಿಗೆ ಹೊಸ ಯೋಜನೆ ರೂಪಿಸಿದೆ. ಶರಣಾಗಲು ಭಯಸುವ ಉಗ್ರರು ಸೇನೆ ನೇತೃತ್ವದಲ್ಲಿ ಮರಳಿ ಸಮಾಜದ ಮುನ್ನಲೆಗೆ ಬರಲು ಹೆಲ್ಪ್ ಲೈನ್ ಆರಂಭಿಸಲಾಗಿದೆ.

ಶರಣಾಗಲು ಭಯಸುವ ಉಗ್ರರಿಗೆ 14411 ಸಂಖ್ಯೆ ಹೊಂದಿರುವ ಬ್ಯಾನರ್ ಗಳನ್ನು ಕಾಶ್ಮೀರ ಮತ್ತು ಶ್ರೀನಗರದಲ್ಲಿ ಅಳವಡಿಸಲಾಗುತ್ತಿದೆ. ಕಾಶ್ಮೀರ ಕಣಿವೆಯ ಸ್ಥಳೀಯ ಯುವಕರೂ ಕೂಡ ಈ ಹೆಲ್ಪ್ ಲೈನ್ ಗೆ ಕರೆ ಮಾಡಿ ಉಗ್ರರ ಬಗ್ಗೆ ಮಾಹಿತಿ ನೀಡಬಹುದು. ಈ ಯೋಜನೆಗೆ ‘ಮದದಗರ’ ಎಂದು ಹೆಸರಿಡಲಾಗಿದೆ.  ಬಂದೂಕು ತೊರೆದು ಶರಣಾಗಲು ಬಯಸುವ ಉಗ್ರರಿಗೆ ನಾವು ಸದಾ ಸ್ವಾಗತಿಸುತ್ತೇವೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ಭಾನುವಾರ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಸಿಆರ್ ಪಿಎಫ್ ನ ಹೆಲ್ಪ್ ಲೈನ್ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ಯಾವುದೇ ಸಮಯದಲ್ಲು ಸಂಪರ್ಕಿಸಬಹುದು. ಹೆಲ್ಪ್ ಲೈನ್ ಹೊಂದಿರುವ ಮದದ್ ಗರ ಯೋಜನೆಯ 1000 ಪೋಸ್ಟ್ ರ್ ಗಳನ್ನು ಸಿದ್ಧಪಡಿಸಲಾಗಿದೆ. ದೆಹಲಿಯಲ್ಲೂ ಈ ಪೋಸ್ಟ್ ರ್ ಗಳನ್ನು ಕಾಶ್ಮೀರಿಗಳು ಹೆಚ್ಚು ಇರುವ ಪ್ರದೇಶದಲ್ಲಿ ಅಂಟಿಸಲಾಗುತ್ತಿದೆ.

ಕೇವಲ ಉಗ್ರರಷ್ಟೇ ಅಲ್ಲದೇ ಅಪಘಾತ ಸಂಭವಿಸಿದಾಗ, ವ್ಯಕ್ತಿ ಸಂಕಷ್ಟದಲ್ಲಿದ್ದಾಗ, ಜನರು ಸಂಕಷ್ಟದಲ್ಲಿದ್ದಾಗಲೂ ಈ ಹೆಲ್ಪ್ ಲೈನ್ ಗೆ ಕರೆ ಮಾಡಬಹುದು ಎಂದು ಸೈನ್ಯದ ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕ ನಡು ಮುರಿಯಲು ಪಣ ತೊಟ್ಟಿರುವ ಸೇನೆ ‘ಆಪರೇಷನ್ ಆಲೌಟ್’ ಜಾರಿಯಲ್ಲಿಟ್ಟಿದೆ. 2017ರಲ್ಲೇ 197 ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಂದೆಡೆ ಗುಂಡಿನ ಮೊರೆತ ಮತ್ತೊಂದೆಡೆ ಸಾರ್ವಜನಿಕರಿಗೆ ಸಹಾಯ ಮಾಡುವ ಮೂಲಕ ಸೇನೆ ಎಲ್ಲ ಪ್ರಯೋಗಗಳನ್ನು ಮಾಡಿ, ಭಯೋತ್ಪಾದನೆಯನ್ನು ನಿಯಂತ್ರಣಕ್ಕೆ ತರುತ್ತಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search