• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಸ್ರೇಲ್ ದೇಶದಿಂದ ಶಸ್ತ್ರಾಸ್ತ್ರ ಖರೀದಿ ರದ್ದು, ಇದು ಮೇಕ್ ಇಂಡಿಯಾ ಮೇನಿಯಾ!

TNN Correspondent Posted On November 21, 2017


  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮೇಕ್ ಇನ್ ಇಂಡಿಯಾ ಯೋಜನೆಗೆ ಹೆಚ್ಚು ನೀಡುತ್ತಿದ್ದು, ಅದು ಶಸ್ತ್ರಾಸ್ತ್ರ ವಿಷಯದಲ್ಲೂ ಮುಂದುವರಿದೆ. ಇದರ ಭಾಗವಾಗ ಭಾರತ ಇಸ್ರೇಲಿನಿಂದ ಖರೀದಿಸಲು ಮುಂದಾಗಿದ್ದ ಮಾನವ ಸಹಿತ ಟ್ಯಾಂಕರ್ ರಹಿತ ಕ್ಷಿಪಣಿ ಆಮದಿನ 500 ದಶಲಕ್ಷ ಡಾಲರ್ ಮೊತ್ತದ ಖರೀದಿ ಒಪ್ಪಂದ ರದ್ದುಗೊಳಿಸಿದೆ.

ಅಲ್ಲದೆ, ಈ ಎಂಪಿಎಟಿಜಿಎಂ ಕ್ಷಿಪಣಿಗಳನ್ನು ದೇಶದಲ್ಲೇ ತಯಾರಿಸಬೇಕು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ಗೆ ಕೇಂದ್ರ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಆ ಮೂಲಕ ಭಾರತ ರಕ್ಷಣಾ ವ್ಯವಸ್ಥೆಯಲ್ಲೂ ಮೇಕ್ ಇನ್ ಇಂಡಿಯಾಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ.

500 ದಶಲಕ್ಷ ಮಿಲಿಯನ್ ಡಾಲರ್ ವೆಚ್ಚದಲ್ಲಿ ಕಳೆದ ವರ್ಷ ಭಾರತ ಇಸ್ರೇಲ್ ಜತೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಿತ್ತು. ಈ ಒಪ್ಪಂದ ಪ್ರಸ್ತುತ ಪ್ರಸ್ತಾಪದ ಹಂತ ತಲುಪಿತ್ತು. ಆದರೆ ಭಾರತ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲು ಒಪ್ಪಂದ ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.

ಮೂರನೇ ಜನರೇಷನ್ ನ ಈ ಟ್ಯಾಂಕ್ ರಹಿತ ಕ್ಷಿಪಣಿಗಳು 2.5 ಕಿಲೋ ಮೀಟರ್ ಚಲಿಸಿ, ಶತೃವಿನ ಯುದ್ಧ ಟ್ಯಾಂಕರ್ ಧ್ವಂಸಗೊಳಿಸುವ ಸಾಮರ್ಥ್ಯ ಹೊಂದಿದ್ದು, ಹಗಲು ಹಾಗೂ ರಾತ್ರಿ ಕೆಲಸ ಮಾಡುತ್ತವೆ.

ಮೂರು ಅಥವಾ ನಾಲ್ಕು ವರ್ಷಗಳಲ್ಲಿ ಭಾರತವೇ ಈ ಕ್ಷಿಪಣಿ ತಯಾರಿಸಲು ಯೋಜನೆ ರೂಪಿಸಿದೆ ಎನ್ನಲಾಗಿದೆ. ಪ್ರಸ್ತುತ ಸೈನ್ಯದ ದಾಸ್ತಾನಿನಲ್ಲಿ ಇಂಥ 68 ಸಾವಿರ ಕ್ಷಿಪಣಿಗಳಿವೆ.

  • Share On Facebook
  • Tweet It


- Advertisement -


Trending Now
ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
Tulunadu News June 9, 2023
ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
Tulunadu News June 9, 2023
Leave A Reply

  • Recent Posts

    • ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
  • Popular Posts

    • 1
      ದಿನೇಶ್ ಗುಂಡುರಾವ್ ದಕ್ಷಿಣ ಕನ್ನಡ, ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ!
    • 2
      ಸತ್ಯನಾರಾಯಣ ಆಲಿಯಾಸ್ ಸ್ಯಾಮ್ ಏನಿದು ಅವಸ್ಥೆ!
    • 3
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 4
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 5
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search