• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಮತಾ ಬ್ಯಾನರ್ಜಿ ನಾಡಿನಲ್ಲಿ ಬಾಂಗ್ಲಾದೇಶದ ಇಬ್ಬರು ಶಂಕಿತ ಉಗ್ರರ ಬಂಧನ

TNN Correspondent Posted On November 22, 2017


  • Share On Facebook
  • Tweet It

ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕೃಪಾಕಟಾಕ್ಷದಿಂದ ಪ್ರಸ್ತುತ ಪಶ್ಚಿಮ ಬಂಗಾಳ ಬಾಂಗ್ಲಾದೇಶಿಯರ ಬೀಡಾಗುತ್ತಿದ್ದು, ಇಬ್ಬರು ಬಾಂಗ್ಲಾ ಶಂಕಿತ ಉಗ್ರರನ್ನು ಕೋಲ್ಕತ್ತಾ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಅಲ್ ಖೈದ್ ಪೋಷಿತ ಬಾಂಗ್ಲಾದೇಶದ ಉಗ್ರ ಸಂಘಟನೆ ಅನ್ಸಾರುಲ್ಲಾ ಬಾಂಗ್ಲಾ ತಂಡದ ಒಬ್ಬ ಹಾಗೂ ಮತ್ತೊಬ್ಬ ಶಸ್ತ್ರಾಸ್ತ್ರ ದಲ್ಲಾಳಿಯನ್ನು ಪೊಲೀಸರು ಬಂಧಿಸಿದ್ದು, ಒಬ್ಬನ ಬಳಿ ನಕಲಿ ಆಧಾರ್ ಕಾರ್ಡ್ ಇರುವುದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

ರೈಲು ನಿಲ್ದಾಣದಲ್ಲಿ ಸೋಮವಾರ ಬೆಳಗಿನ ಜಾವ ಷಂಷಾದ್ ಮಿಯಾ (26), ರಿಜಾವುಲ್ ಇಸ್ಲಾಂ (25) ಎಂಬುವವರನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯಿಂದ ಇಬ್ಬರೂ ಬಾಂಗ್ಲಾದೇಶೀಯರಾಗಿದ್ದು, ನಿಷೇಧಿತ ಅನ್ಸಾರುಲ್ಲ ಬಾಂಗ್ಲಾ ತಂಡದ ಸದಸ್ಯರಾಗಿದ್ದಾರೆ ಎಂದು ತಿಳಿದುಬಂದಿದೆ ಎಂದು ವಿಶೇಷ ಕಾರ್ಯ ಪಡೆ ಉಪ ಆಯುಕ್ತ ಮುರಳೀಧರ್ ಶರ್ಮಾ ತಿಳಿಸಿದ್ದಾರೆ.

ಇಬ್ಬರೂ ಭಾರತಕ್ಕೆ ಬಾಂಬ್ ತಯಾರಿಸಲು ಕೆಮಿಕಲ್ ಖರೀದಿಗಾಗಿ ಬಂದಿದ್ದು, ಬಾಂಗ್ಲಾ ಉಗ್ರ ಸಂಘಟನೆಯಲ್ಲಿ ಶಂಷಾದ್ ಉನ್ನತ ಹುದ್ದೆ ಹೊಂದಿದ್ದಾನೆ.ಅಲ್ಲದೆ ಈತ ಭಾರತದ ನಕಲಿ ಆಧಾರ್ ಕಾರ್ಡ್ ಸಹ ಹೊಂದಿದ್ದಾನೆ. ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಉಗ್ರರ ಚಲವಲನ ಆಧರಿಸಿ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳದಿರುವುದೇ ಇಷ್ಟಕ್ಕೆಲ್ಲ ಕಾರಣ ಎಂಬ ಆರೋಪ ಸಹ ಕೇಳಿಬಂದಿವೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search