• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೂರ್ಖನ ಸೂತ್ರಕ್ಕೆ ಮತ್ತೊಬ್ಬ ಮೂರ್ಖ ಒಪ್ಪಿಗೆ, ಕಾಂಗ್ರೆಸ್-ಹಾರ್ದಿಕ್ ಒಪ್ಪಂದಕ್ಕೆ ನಿತಿನ್ ಪಟೇಲ್ ವ್ಯಂಗ್ಯ

TNN Correspondent Posted On November 23, 2017


  • Share On Facebook
  • Tweet It

ಗಾಂಧಿನಗರ: ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡಲು ಕಾಂಗ್ರೆಸ್ ಒಪ್ಪಿದಕ್ಕೆ, ಆ ಪಕ್ಷವನ್ನು ಬೆಂಬಲಿಸಿರುವ ಪಾಟೀದಾರ್ ಅನಾಮನ್ ಆಂದೋಲನ್ ಸಮಿತಿ (ಪಿಎಎಎಸ್) ಮುಖ್ಯಸ್ಥ ಹಾರ್ದಿಕ್ ಪಟೇಲ್ ನಡೆಯನ್ನು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಟೀಕಿಸಿದ್ದಾರೆ.

ಇದು ಒಬ್ಬ ಮೂರ್ಖನ ಸೂತ್ರಕ್ಕೆ ಮತ್ತೊಬ್ಬ ಮೂರ್ಖ ಒಪ್ಪಿದ ಹಾಗೆ ಎಂದು ಪಟೇಲ್ ವ್ಯಂಗ್ಯವಾಡಿದ್ದು, ಒಂದೇ ಹೇಳಿಕೆಯಿಂದ ಇಬ್ಬರಿಗೂ ಟಾಂಗ್ ನೀಡಿದಂತಾಗಿದೆ.

ನಾನು ಹಾರ್ದಿಕ್ ಪಟೇಲ್ ಅವರಂಥ ಮೂರ್ಖರನ್ನು ನೋಡಿಲ್ಲ. ಈ ಯುವಕ ಪಟೇಲ್ ಸಮುದಾಯದವರಿಂದ ಪ್ರೀತಿ, ಮಮಕಾರ ಪಡೆಯಬಹುದಿತ್ತು. ಆದರೆ ತನ್ನ ನಡೆಯಿಂದ ಶೀಘ್ರದಲ್ಲೇ ಸಮುದಾಯದವರಿಂದಲೇ ನಾಶವಾಗುತ್ತಾರೆ ಎಂದಿದ್ದಾರೆ.

ಪಟೇಲ್ ಸಮುದಾಯಕ್ಕೆ ಕಾಂಗ್ರೆಸ್ ಶೇ.50ರಷ್ಟು ಮೀಸಲಾತಿ ನೀಡುತ್ತೇನೆ ಎಂದು ನೀಡಿದ ಭರವಸೆಯೇ ದೊಡ್ಡ ಜೋಕ್. ವಾಸ್ತವದಲ್ಲಿ, ಪಟೇಲ್ ಸಮುದಾಯಕ್ಕೆ ಶೇ.50ರಷ್ಟು ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂಬುದನ್ನು ಅರಿಯಬೇಕು. ಕಾಂಗ್ರೆಸ್ ಹಾರ್ದಿಕ್ ಪಟೇಲ್ ಗೆ ಮೀಸಲಾತಿ ಬದಲು ಲಾಲಿಪಾಪ್ ಕೊಡಿಸುತ್ತದೆ ಅಷ್ಟೇ ಎಂದು ವ್ಯಂಗವಾಡಿದ್ದಾರೆ.

ಪಟೇಲ್ ಸಮುದಾಯಕ್ಕೆ ಶೇ.50ರಷ್ಟು ಮೀಸಲಾತಿ ನೀಡಿದರೆ ಮಾತ್ರ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಬೆಂಬಲಿಸುವೆ ಎಂದು ಹಾರ್ದಿಕ್ ಪಟೇಲ್ ಇಟ್ಟಿದ್ದ ಬೇಡಿಕೆಗೆ ಕಾಂಗ್ರೆಸ್  ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ನಿತಿನ್ ಪಟೇಲ್ ಟೀಕೆ ಮಾಡಿದ್ದಾರೆ. ಅಲ್ಲದೆ, ಈಗಾಗಲೇ ಟಿಕೆಟ್ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಹಾಗೂ ಪಿಎಎಎಸ್ ಕಾರ್ಯಕರ್ತರ ನಡುವೆ ಒಂದು ಸುತ್ತಿನ ಜಗಳವಾಗಿದ್ದು, ಈ ಮೈತ್ರಿ ಬಹಳ ದಿನ ಬದುಕುವುದಿಲ್ಲ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search