• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಳನಿಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ, ಶಶಿಕಲಾಗೆ ಮತ್ತೊಂದು ಹಿನ್ನಡೆ

TNN Correspondent Posted On November 23, 2017


  • Share On Facebook
  • Tweet It

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಗೆ ಮತ್ತೊಂದು ಹಿನ್ನಡೆಯಾಗಿದ್ದು, ಎಐಎಡಿಎಂಕೆ ಪಳನಿಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ ಸಿಕ್ಕಿದೆ.

ಪಳನಿ ಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ ನೀಡಲು ಚುನಾವಣೆ ಆಯೋಗ ತೀರ್ಮಾನಿಸಿದ್ದು, ವಿವಾದಕ್ಕೆ ತೆರೆ ಎಳೆದಿದೆ. ಜಯಲಲಿತಾ ನಿಧರಾದ ಬಳಿಕ ಶಶಿಕಲಾ ಹಾಗೂ ಪಳನಿಸ್ವಾಮಿ ಬಣಗಳು ಎಐಎಡಿಎಂಕೆ ಪಕ್ಷದ ಚಿಹ್ನೆಗಾಗಿ ಕದನ ಶುರುವಿಟ್ಟುಕೊಂಡಿದ್ದವು. ಅಲ್ಲದೆ ವಿವಾದ ಬಗೆಹರಿಸುವಂತೆ ಇದೇ ತಿಂಗಳ ಆರಂಭದಲ್ಲಿ ಚುನಾವಣೆ ಆಯೋಗಕ್ಕೆ ಲಿಖಿತ ಮನವಿ ಮಾಡಿದ್ದವು. ಈ  ಹಿನ್ನೆಲೆಯಲ್ಲಿ ನಿರ್ಧಾರ ಪ್ರಕಟಿಸಿರುವ ಚುನಾವಣೆ ಆಯೋಗ ಎರಡೆಲೆ ಚಿಹ್ನೆಯನ್ನು ಪಳನಿಸ್ವಾಮಿ ಬಣಕ್ಕೆ ನೀಡಲು ನಿರ್ಧಿರಿಸಿದೆ.

ಎರಡೆಲೆ ಚಿಹ್ನೆಯನ್ನು ಶಶಿಕಲಾ ಬಣಕ್ಕೆ ನೀಡಬೇಕು ಎಂದು ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಚುನಾವಣೆ ಆಯೋಗಕ್ಕೆ ಮನವಿ ಮಾಡಿದ್ದರಾದರೂ ಫಲಿಸಿಲ್ಲ. ಅಲ್ಲದೆ, ಟಿಟಿವಿ ದಿನಕರನ್ ಎರಡೆಲೆ ಚಿಹ್ನೆ ಪಡೆಯಲು ಚುನಾವಣೆ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ಜೈಲು ಸಹ ಸೇರಿದ್ದರು. ಆದಾಗ್ಯೂ ಪ್ರಸ್ತುತ ಶಶಿಕಲಾ ನಟರಾಜನ್ ಸಹ ಅಕ್ರಮ ಆಸ್ತಿ ಗಳಿಕೆ ಹಗರಣದಲ್ಲಿ ಜೈಲುಪಾಲಾಗಿದ್ದಾರೆ.

ಇತ್ತೀಚೆಗಷ್ಟೇ ಜಯಲಲಿತಾ ವಾಸಿಸುತ್ತಿದ್ದ ಪೋಯೆಸ್ ಗಾರ್ಡನ್ ನಿವಾಸದ ಮೇಲೆ ಐಟಿ ದಾಳಿ ಮಾಡಿ ಅಪಾರ ಹಣ ವಶಪಡಿಸಿಕೊಂಡಿತ್ತು.

 

 

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search