• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಳನಿಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ, ಶಶಿಕಲಾಗೆ ಮತ್ತೊಂದು ಹಿನ್ನಡೆ

TNN Correspondent Posted On November 23, 2017


  • Share On Facebook
  • Tweet It

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಗೆ ಮತ್ತೊಂದು ಹಿನ್ನಡೆಯಾಗಿದ್ದು, ಎಐಎಡಿಎಂಕೆ ಪಳನಿಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ ಸಿಕ್ಕಿದೆ.

ಪಳನಿ ಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ ನೀಡಲು ಚುನಾವಣೆ ಆಯೋಗ ತೀರ್ಮಾನಿಸಿದ್ದು, ವಿವಾದಕ್ಕೆ ತೆರೆ ಎಳೆದಿದೆ. ಜಯಲಲಿತಾ ನಿಧರಾದ ಬಳಿಕ ಶಶಿಕಲಾ ಹಾಗೂ ಪಳನಿಸ್ವಾಮಿ ಬಣಗಳು ಎಐಎಡಿಎಂಕೆ ಪಕ್ಷದ ಚಿಹ್ನೆಗಾಗಿ ಕದನ ಶುರುವಿಟ್ಟುಕೊಂಡಿದ್ದವು. ಅಲ್ಲದೆ ವಿವಾದ ಬಗೆಹರಿಸುವಂತೆ ಇದೇ ತಿಂಗಳ ಆರಂಭದಲ್ಲಿ ಚುನಾವಣೆ ಆಯೋಗಕ್ಕೆ ಲಿಖಿತ ಮನವಿ ಮಾಡಿದ್ದವು. ಈ  ಹಿನ್ನೆಲೆಯಲ್ಲಿ ನಿರ್ಧಾರ ಪ್ರಕಟಿಸಿರುವ ಚುನಾವಣೆ ಆಯೋಗ ಎರಡೆಲೆ ಚಿಹ್ನೆಯನ್ನು ಪಳನಿಸ್ವಾಮಿ ಬಣಕ್ಕೆ ನೀಡಲು ನಿರ್ಧಿರಿಸಿದೆ.

ಎರಡೆಲೆ ಚಿಹ್ನೆಯನ್ನು ಶಶಿಕಲಾ ಬಣಕ್ಕೆ ನೀಡಬೇಕು ಎಂದು ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಚುನಾವಣೆ ಆಯೋಗಕ್ಕೆ ಮನವಿ ಮಾಡಿದ್ದರಾದರೂ ಫಲಿಸಿಲ್ಲ. ಅಲ್ಲದೆ, ಟಿಟಿವಿ ದಿನಕರನ್ ಎರಡೆಲೆ ಚಿಹ್ನೆ ಪಡೆಯಲು ಚುನಾವಣೆ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ಜೈಲು ಸಹ ಸೇರಿದ್ದರು. ಆದಾಗ್ಯೂ ಪ್ರಸ್ತುತ ಶಶಿಕಲಾ ನಟರಾಜನ್ ಸಹ ಅಕ್ರಮ ಆಸ್ತಿ ಗಳಿಕೆ ಹಗರಣದಲ್ಲಿ ಜೈಲುಪಾಲಾಗಿದ್ದಾರೆ.

ಇತ್ತೀಚೆಗಷ್ಟೇ ಜಯಲಲಿತಾ ವಾಸಿಸುತ್ತಿದ್ದ ಪೋಯೆಸ್ ಗಾರ್ಡನ್ ನಿವಾಸದ ಮೇಲೆ ಐಟಿ ದಾಳಿ ಮಾಡಿ ಅಪಾರ ಹಣ ವಶಪಡಿಸಿಕೊಂಡಿತ್ತು.

 

 

  • Share On Facebook
  • Tweet It


- Advertisement -


Trending Now
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
Tulunadu News November 28, 2023
ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
Tulunadu News November 28, 2023
Leave A Reply

  • Recent Posts

    • 42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!
    • ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜೋರು ಮಾಡಬಾರದಾ?
    • ಸರಕಾರಕ್ಕೆ ಶಾಲೆಯಲ್ಲಿ ಶಿಕ್ಷಣಕ್ಕಿಂತ ಆಹಾರವೇ ಮುಖ್ಯವಾಯಿತೇ!
    • ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು
    • ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ
    • ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ - ಅಸ್ಸಾಂ ಸಿಎಂ
  • Popular Posts

    • 1
      42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • 2
      ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • 3
      ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • 4
      ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • 5
      ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search