• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ನಿಷ್ಠೆ ಮರೆತ ಬಳಿಕ ಚೀನಾ ಭಾರತದೆದುರು ಮಂಡಿಯೂರಿದ್ದು ಏಕೆ ಗೊತ್ತಾ?

TNN Correspondent Posted On November 24, 2017
0


0
Shares
  • Share On Facebook
  • Tweet It

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಡೈಮರ್ ಭಾಷಾ ಅಣೆಕಟ್ಟು ಸ್ಥಾಪಿಸಲು ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಅನ್ವಯ 14 ಶತಕೋಟಿ ಡಾಲರ್ ನೀಡುವುದಾಗಿ ಮುಂದೆ ಬಂದಿದ್ದ ಚೀನಾಕ್ಕೆ ಪಾಕಿಸ್ತಾನ ತಿರಸ್ಕಾರದ ಟಾಂಗ್ ನೀಡಿದ ಬಳಿಕ ಈಗ ಚೀನಾ ಭಾರತದೆದುರು ಮಂಡಿಯೂರಿದೆ.

ಚೀನಾ ವಿದೇಶಾಂಗ ಸಚಿವಾಲಯ ಭಾರತದಲ್ಲಿರುವ ರಾಯಭಾರಿ ಲುವೋ ಜಾವೋಹಿ ಮೂಲಕ ಹೇಳಿಕೆಯೊಂದನ್ನು ನೀಡಿದ್ದು, ಭಾರತ ಒಂದು ಪ್ರದೇಶ ಒಂದು ರಸ್ತೆ (ಒಬಿಒಆರ್) ಯೋಜನೆಗೆ ಭಾರತ ಕೈ ಜೋಡಿಸಿದರೆ ಸಿಪಿಇಸಿ ಯೋಜನೆಯ ಹೆಸರನ್ನೇ ಬದಲಾಯಿಸುವುದಾಗಿ ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಸಿಪಿಇಸಿ ಅನ್ವಯ ಕಾಮಗಾರಿ ಆರಂಭಿಸಲು ಹಾಗೂ ಒಬಿಒಆರ್ ಗೆ ಭಾರತ ಕೈ ಜೋಡಿಸಿದರೆ ನಾವು ಸಿಪಿಇಸಿ ಯೋಜನೆಯ ಹೆಸರನ್ನೇ ಬದಲಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಚೀನಾದ 5 ಲಕ್ಷಕೋಟಿ ಬೃಹತ್ ಬಂಡವಾಳದ ಮಹತ್ತರ ಒಬಿಒಆರ್ ಯೋಜನೆಗೆ ಭಾರತ ಪ್ರತಿರೋಧ ವ್ಯಕ್ತಪಡಿಸಿತ್ತಲ್ಲದೆ, ಚೀನಾದಲ್ಲಿ ನಡೆದ ಸಭೆ ಬಹಿಷ್ಕರಿಸಿತ್ತು. ಬಳಿಕ ನೇಪಾಳ್ ಹಾಗೂ ಮ್ಯಾನ್ಮಾರ್ ಸಹ ಯೋಜನೆಗೆ ಕೈಜೋಡಿಸುವಂತೆ ಭಾರತಕ್ಕೆ ಮನವಿ ಮಾಡಿದ್ದವು.

ಈಗ ಚೀನಾ ಭಾರತದೆದುರು ಮಂಡಿಯೂರಿ ಒಂದು ವಾರವಾದರೂ ಭಾರತ ಇದುವರೆಗೆ ಯಾವುದೇ ಪ್ರತಿಕ್ರಿಯೆ ಸಹ ನೀಡಿಲ್ಲ.

ಒಟ್ಟಿನಲ್ಲಿ ಸಿಪಿಇಸಿ ಮೂಲ ಪಾಕಿಸ್ತಾನವನ್ನು ಬುಟ್ಟಿಗೆ ಹಾಕಿಕೊಳ್ಳಲು ಹೊರಟಿದ್ದ ಚೀನಾಕ್ಕೆ ಗೆಳೆಯ ಪಾಕಿಸ್ತಾನವೇ ಸಾಲ ತಿರಸ್ಕರಿಸಿ ಟಾಂಗ್ ನೀಡಿದ ಬಳಿಕ ಚೀನಾ ಭಾರತದೆದುರು ಅಂಗಲಾಚುವಂತಾಗಿರುವುದಂತೂ ಸುಳ್ಳಲ್ಲ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search