• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕ್ ನಿಷ್ಠೆ ಮರೆತ ಬಳಿಕ ಚೀನಾ ಭಾರತದೆದುರು ಮಂಡಿಯೂರಿದ್ದು ಏಕೆ ಗೊತ್ತಾ?

TNN Correspondent Posted On November 24, 2017


  • Share On Facebook
  • Tweet It

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಡೈಮರ್ ಭಾಷಾ ಅಣೆಕಟ್ಟು ಸ್ಥಾಪಿಸಲು ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಅನ್ವಯ 14 ಶತಕೋಟಿ ಡಾಲರ್ ನೀಡುವುದಾಗಿ ಮುಂದೆ ಬಂದಿದ್ದ ಚೀನಾಕ್ಕೆ ಪಾಕಿಸ್ತಾನ ತಿರಸ್ಕಾರದ ಟಾಂಗ್ ನೀಡಿದ ಬಳಿಕ ಈಗ ಚೀನಾ ಭಾರತದೆದುರು ಮಂಡಿಯೂರಿದೆ.

ಚೀನಾ ವಿದೇಶಾಂಗ ಸಚಿವಾಲಯ ಭಾರತದಲ್ಲಿರುವ ರಾಯಭಾರಿ ಲುವೋ ಜಾವೋಹಿ ಮೂಲಕ ಹೇಳಿಕೆಯೊಂದನ್ನು ನೀಡಿದ್ದು, ಭಾರತ ಒಂದು ಪ್ರದೇಶ ಒಂದು ರಸ್ತೆ (ಒಬಿಒಆರ್) ಯೋಜನೆಗೆ ಭಾರತ ಕೈ ಜೋಡಿಸಿದರೆ ಸಿಪಿಇಸಿ ಯೋಜನೆಯ ಹೆಸರನ್ನೇ ಬದಲಾಯಿಸುವುದಾಗಿ ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಸಿಪಿಇಸಿ ಅನ್ವಯ ಕಾಮಗಾರಿ ಆರಂಭಿಸಲು ಹಾಗೂ ಒಬಿಒಆರ್ ಗೆ ಭಾರತ ಕೈ ಜೋಡಿಸಿದರೆ ನಾವು ಸಿಪಿಇಸಿ ಯೋಜನೆಯ ಹೆಸರನ್ನೇ ಬದಲಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಚೀನಾದ 5 ಲಕ್ಷಕೋಟಿ ಬೃಹತ್ ಬಂಡವಾಳದ ಮಹತ್ತರ ಒಬಿಒಆರ್ ಯೋಜನೆಗೆ ಭಾರತ ಪ್ರತಿರೋಧ ವ್ಯಕ್ತಪಡಿಸಿತ್ತಲ್ಲದೆ, ಚೀನಾದಲ್ಲಿ ನಡೆದ ಸಭೆ ಬಹಿಷ್ಕರಿಸಿತ್ತು. ಬಳಿಕ ನೇಪಾಳ್ ಹಾಗೂ ಮ್ಯಾನ್ಮಾರ್ ಸಹ ಯೋಜನೆಗೆ ಕೈಜೋಡಿಸುವಂತೆ ಭಾರತಕ್ಕೆ ಮನವಿ ಮಾಡಿದ್ದವು.

ಈಗ ಚೀನಾ ಭಾರತದೆದುರು ಮಂಡಿಯೂರಿ ಒಂದು ವಾರವಾದರೂ ಭಾರತ ಇದುವರೆಗೆ ಯಾವುದೇ ಪ್ರತಿಕ್ರಿಯೆ ಸಹ ನೀಡಿಲ್ಲ.

ಒಟ್ಟಿನಲ್ಲಿ ಸಿಪಿಇಸಿ ಮೂಲ ಪಾಕಿಸ್ತಾನವನ್ನು ಬುಟ್ಟಿಗೆ ಹಾಕಿಕೊಳ್ಳಲು ಹೊರಟಿದ್ದ ಚೀನಾಕ್ಕೆ ಗೆಳೆಯ ಪಾಕಿಸ್ತಾನವೇ ಸಾಲ ತಿರಸ್ಕರಿಸಿ ಟಾಂಗ್ ನೀಡಿದ ಬಳಿಕ ಚೀನಾ ಭಾರತದೆದುರು ಅಂಗಲಾಚುವಂತಾಗಿರುವುದಂತೂ ಸುಳ್ಳಲ್ಲ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search