• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೋಟು ನಿಷೇಧ, ಜಿಎಸ್ಟಿ ಬಳಿಕ ಮೋದಿ ಬಳಸುತ್ತಿರುವ ಮತ್ತೊಂದು ಬ್ರಹ್ಮಾಸ್ತ್ರವಾದರೂ ಯಾವುದು?

ಜಾಹ್ನವಿ ಜೋಷಿ, ಪೆಲ್ಲತ್ತಡ್ಕ Posted On November 24, 2017
0


0
Shares
  • Share On Facebook
  • Tweet It

ನೋಟು ನಿಷೇಧಗೊಳಿಸಿ ಕಾಳಧನಿಕರ ಹೆಡೆಮುರಿಕಟ್ಟಿದ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿ ತೆರಿಗೆ ಸುಧಾರಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶೀಘ್ರದಲ್ಲೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಳ್ಳಲಿದೆ.

ಹೌದು, ಜಿಎಸ್ಟಿ ಮೂಲಕ ಪರೋಕ್ಷ ತೆರಿಗೆ ಸುಧಾರಿಸಿದ ಕೇಂದ್ರ ಸರ್ಕಾರದ ಕಣ್ಣು ಈಗ ನೇರ ತೆರಿಗೆ ಮೇಲೆ ನೆಟ್ಟಿದ್ದು, ಮತ್ತೊಂದು ಮಹತ್ತರ ನಿರ್ಧಾರ ಕೈಗೊಳ್ಳುವ ಇರಾದೆ ವ್ಯಕ್ತಪಡಿಸಿದೆ.

ಅದಕ್ಕಾಗಿ ಭಾರತೀಯ ಆದಾಯ ತೆರಿಗೆ ಕಾಯಿದೆ-1961 ಪುನರ್ರಚಿಸಲು ಮುಂದಾಗಿದ್ದು, ಪುನರ್ರಚಿಸುವ ಮುನ್ನ ನೂತನ ಅಂಶಗಳ ಅಳವಡಿಕೆಗೆ ಕಾರ್ಯಪಡೆಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ.

ಸೆಪ್ಟೆಂಬರ್ ನಲ್ಲೇ ಹೇಳಿದ್ದರು ಮೋದಿ!

ಕಳೆದ ಸೆಪ್ಟೆಂಬರ್ ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು 1961ರ 50ಕ್ಕೂ ಹೆಚ್ಚು ವರ್ಷಗಳ ಹಳೆಯ ಕಾನೂನನ್ನೇ ಮುಂದುವರಿಸುವ ಬದಲು, ಸುಧಾರಣೆ ತಂದು ಪುನರ್ರಚಿಸಬೇಕು ಎಂದು ಆದಾಯ ತೆರಿಗೆ ಅಧಿಕಾರಿಗಳ ಜತೆ ನಡೆಸಿದ ಕಾನ್ಫರೆನ್ಸ್ ನಲ್ಲಿ ತಿಳಿಸಿದ್ದರು.

ಹಾಗಾದರೆ ಕಾರ್ಯಪಡೆಯ ಕಾರ್ಯವೇನು?

ಪರೋಕ್ಷ ತೆರಿಗೆಗಾಗಿ 1961ರ ಕಾಯಿದೆ ಪುನರ್ರಚಿಸಲು ರಚಿಸಿರುವ ಕಾರ್ಯಪಡೆ ಹಲವು ಸುಧಾರಣೆ ಅಂಶಗಳನ್ನು ಗಮನಿಸಲಿದೆ. ಅಲ್ಲದೆ ವಿದೇಶದಲ್ಲಿ ಪ್ರಸ್ತುತ ಇರುವ ತೆರಿಗೆ ಕಾಯಿದೆ, ಹಲವು ಮಾದರಿ ಪ್ರಯೋಗ, ಎಂಥ ತೆರಿಗೆ ಪದ್ಧತಿಯಿಂದ ದೇಶದ ಆರ್ಥಿಕತೆಗೆ ಅನುಕೂಲ ಸೇರಿ ಹಲವು ಅಂಶಗಳನ್ನು ಪರಿಗಣಿಸಿ ಆರು ತಿಂಗಳೊಳಗೆ ಕೇಂದ್ರ ಸರ್ಕಾರಕ್ಕೆ ಈ ಕಾರ್ಯಪಡೆ ವರದಿ ಸಲ್ಲಿಸಲಿದೆ. ಈ ವರದಿ ಅನ್ವಯ ಕೇಂದ್ರ ಸರ್ಕಾರ ಕಾಯಿದೆ ಪುನರ್ರಚಿಸಲಿದೆ.

ಕಾರ್ಯಪಡೆಯಲ್ಲಿ ಇರುವವರು ಯಾರು?

ಸರ್ಕಾರದ ಈ ಕಾರ್ಯಪಡೆಯಲ್ಲಿ ಸದಸ್ಯರಾಗಿ ಪ್ರಧಾನಿ ಮೋದಿ, ಪರೋಕ್ಷ ತೆರಿಗೆ ಕೇಂದ್ರ ಮಂಡಳಿ (ಸಿಬಿಡಿಟಿ)ಯ ಆರು ಸದಸ್ಯರ ತಂಡ, ವಿಶೇಷ ಕಾಯಂ ಆಹ್ವಾನಿತರಾಗಿ ಆರ್ಥಿಕ ಮುಖ್ಯ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ಇತರ ಸದಸ್ಯರಾಗಿ ಸಿಎ ಗಿರೀಶ್ ಆಹುಜಾ, ರಾಜೀವ್ ಮೆಮಾನಿ, ಮುಖೇಶ್ ಪಟೇಲ್, ಮಾನ್ಸಿ ಕೇಡಿಯಾ ಸೇರಿ ಹಲವರು ಇರಲಿದ್ದಾರೆ.

ಒಟ್ಟಿನಲ್ಲಿ ಕೇಂದ್ರದ ಈ ಹೊಸ ತೆರಿಗೆ ಕಾಯಿದೆ ಪುನರ್ರಚನೆಯಿಂದ ಪ್ರತ್ಯಕ್ಷ ತೆರಿಗೆಗೆ ನೂತನ ಭಾಷ್ಯ ಬರೆಯುವ ಜತೆಗೆ, ತೆರಿಗೆ ವಂಚಿಸುವ, ಕಾಳಧನಿಕರಿಗೆ ಒಳ್ಳೆಯ ಪಾಠವಾಗಲಿದೆ ಎಂದು ಹೇಳಲಾಗುತ್ತಿದೆ. ನೋಟು ನಿಷೇಧ ಹಾಗೂ ಜಿಎಸ್ಟಿಯಂತೆಯೇ ಈ ಕಾಯಿದೆ ಪುನರ್ರಚನೆ ಮೋದಿ ಅವರ ಖ್ಯಾತಿ ಹೆಚ್ಚಿಸಲಿ ಹಾಗೂ ಇದರಿಂದ ದೇಶಕ್ಕೆ ಒಳ್ಳೆಯದಾಗಲಿ ಎಂಬುದು ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
ಜಾಹ್ನವಿ ಜೋಷಿ, ಪೆಲ್ಲತ್ತಡ್ಕ July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
ಜಾಹ್ನವಿ ಜೋಷಿ, ಪೆಲ್ಲತ್ತಡ್ಕ July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search