• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೋಟು ನಿಷೇಧ, ಜಿಎಸ್ಟಿ ಬಳಿಕ ಮೋದಿ ಬಳಸುತ್ತಿರುವ ಮತ್ತೊಂದು ಬ್ರಹ್ಮಾಸ್ತ್ರವಾದರೂ ಯಾವುದು?

ಜಾಹ್ನವಿ ಜೋಷಿ, ಪೆಲ್ಲತ್ತಡ್ಕ Posted On November 24, 2017


  • Share On Facebook
  • Tweet It

ನೋಟು ನಿಷೇಧಗೊಳಿಸಿ ಕಾಳಧನಿಕರ ಹೆಡೆಮುರಿಕಟ್ಟಿದ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿ ತೆರಿಗೆ ಸುಧಾರಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶೀಘ್ರದಲ್ಲೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಳ್ಳಲಿದೆ.

ಹೌದು, ಜಿಎಸ್ಟಿ ಮೂಲಕ ಪರೋಕ್ಷ ತೆರಿಗೆ ಸುಧಾರಿಸಿದ ಕೇಂದ್ರ ಸರ್ಕಾರದ ಕಣ್ಣು ಈಗ ನೇರ ತೆರಿಗೆ ಮೇಲೆ ನೆಟ್ಟಿದ್ದು, ಮತ್ತೊಂದು ಮಹತ್ತರ ನಿರ್ಧಾರ ಕೈಗೊಳ್ಳುವ ಇರಾದೆ ವ್ಯಕ್ತಪಡಿಸಿದೆ.

ಅದಕ್ಕಾಗಿ ಭಾರತೀಯ ಆದಾಯ ತೆರಿಗೆ ಕಾಯಿದೆ-1961 ಪುನರ್ರಚಿಸಲು ಮುಂದಾಗಿದ್ದು, ಪುನರ್ರಚಿಸುವ ಮುನ್ನ ನೂತನ ಅಂಶಗಳ ಅಳವಡಿಕೆಗೆ ಕಾರ್ಯಪಡೆಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ.

ಸೆಪ್ಟೆಂಬರ್ ನಲ್ಲೇ ಹೇಳಿದ್ದರು ಮೋದಿ!

ಕಳೆದ ಸೆಪ್ಟೆಂಬರ್ ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು 1961ರ 50ಕ್ಕೂ ಹೆಚ್ಚು ವರ್ಷಗಳ ಹಳೆಯ ಕಾನೂನನ್ನೇ ಮುಂದುವರಿಸುವ ಬದಲು, ಸುಧಾರಣೆ ತಂದು ಪುನರ್ರಚಿಸಬೇಕು ಎಂದು ಆದಾಯ ತೆರಿಗೆ ಅಧಿಕಾರಿಗಳ ಜತೆ ನಡೆಸಿದ ಕಾನ್ಫರೆನ್ಸ್ ನಲ್ಲಿ ತಿಳಿಸಿದ್ದರು.

ಹಾಗಾದರೆ ಕಾರ್ಯಪಡೆಯ ಕಾರ್ಯವೇನು?

ಪರೋಕ್ಷ ತೆರಿಗೆಗಾಗಿ 1961ರ ಕಾಯಿದೆ ಪುನರ್ರಚಿಸಲು ರಚಿಸಿರುವ ಕಾರ್ಯಪಡೆ ಹಲವು ಸುಧಾರಣೆ ಅಂಶಗಳನ್ನು ಗಮನಿಸಲಿದೆ. ಅಲ್ಲದೆ ವಿದೇಶದಲ್ಲಿ ಪ್ರಸ್ತುತ ಇರುವ ತೆರಿಗೆ ಕಾಯಿದೆ, ಹಲವು ಮಾದರಿ ಪ್ರಯೋಗ, ಎಂಥ ತೆರಿಗೆ ಪದ್ಧತಿಯಿಂದ ದೇಶದ ಆರ್ಥಿಕತೆಗೆ ಅನುಕೂಲ ಸೇರಿ ಹಲವು ಅಂಶಗಳನ್ನು ಪರಿಗಣಿಸಿ ಆರು ತಿಂಗಳೊಳಗೆ ಕೇಂದ್ರ ಸರ್ಕಾರಕ್ಕೆ ಈ ಕಾರ್ಯಪಡೆ ವರದಿ ಸಲ್ಲಿಸಲಿದೆ. ಈ ವರದಿ ಅನ್ವಯ ಕೇಂದ್ರ ಸರ್ಕಾರ ಕಾಯಿದೆ ಪುನರ್ರಚಿಸಲಿದೆ.

ಕಾರ್ಯಪಡೆಯಲ್ಲಿ ಇರುವವರು ಯಾರು?

ಸರ್ಕಾರದ ಈ ಕಾರ್ಯಪಡೆಯಲ್ಲಿ ಸದಸ್ಯರಾಗಿ ಪ್ರಧಾನಿ ಮೋದಿ, ಪರೋಕ್ಷ ತೆರಿಗೆ ಕೇಂದ್ರ ಮಂಡಳಿ (ಸಿಬಿಡಿಟಿ)ಯ ಆರು ಸದಸ್ಯರ ತಂಡ, ವಿಶೇಷ ಕಾಯಂ ಆಹ್ವಾನಿತರಾಗಿ ಆರ್ಥಿಕ ಮುಖ್ಯ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ಇತರ ಸದಸ್ಯರಾಗಿ ಸಿಎ ಗಿರೀಶ್ ಆಹುಜಾ, ರಾಜೀವ್ ಮೆಮಾನಿ, ಮುಖೇಶ್ ಪಟೇಲ್, ಮಾನ್ಸಿ ಕೇಡಿಯಾ ಸೇರಿ ಹಲವರು ಇರಲಿದ್ದಾರೆ.

ಒಟ್ಟಿನಲ್ಲಿ ಕೇಂದ್ರದ ಈ ಹೊಸ ತೆರಿಗೆ ಕಾಯಿದೆ ಪುನರ್ರಚನೆಯಿಂದ ಪ್ರತ್ಯಕ್ಷ ತೆರಿಗೆಗೆ ನೂತನ ಭಾಷ್ಯ ಬರೆಯುವ ಜತೆಗೆ, ತೆರಿಗೆ ವಂಚಿಸುವ, ಕಾಳಧನಿಕರಿಗೆ ಒಳ್ಳೆಯ ಪಾಠವಾಗಲಿದೆ ಎಂದು ಹೇಳಲಾಗುತ್ತಿದೆ. ನೋಟು ನಿಷೇಧ ಹಾಗೂ ಜಿಎಸ್ಟಿಯಂತೆಯೇ ಈ ಕಾಯಿದೆ ಪುನರ್ರಚನೆ ಮೋದಿ ಅವರ ಖ್ಯಾತಿ ಹೆಚ್ಚಿಸಲಿ ಹಾಗೂ ಇದರಿಂದ ದೇಶಕ್ಕೆ ಒಳ್ಳೆಯದಾಗಲಿ ಎಂಬುದು ನಮ್ಮ ಆಶಯ.

 

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
ಜಾಹ್ನವಿ ಜೋಷಿ, ಪೆಲ್ಲತ್ತಡ್ಕ February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
ಜಾಹ್ನವಿ ಜೋಷಿ, ಪೆಲ್ಲತ್ತಡ್ಕ February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search