• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಭಯೋತ್ಪಾದನೆ ಇದೆ ಎಂದ ಕಮಲ್ ಹಾಸನ್ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ನಿರ್ದೇಶನ!

TNN Correspondent Posted On November 25, 2017
0


0
Shares
  • Share On Facebook
  • Tweet It

ಚೆನ್ನೈ: ಹಿಂದೂ ಭಯೋತ್ಪಾದನೆ ಅಸ್ತಿತ್ವ ಅಲ್ಲಗಳೆಯುವಂತಿಲ್ಲ ಎಂದು ವಿವಾದ ಸೃಷ್ಟಿಸಿದ್ದ ತಮಿಳು ನಟ ಕಮಲ್ ಹಾಸನ್ ಗೆ ಸಂಕಷ್ಟ ಎದುರಾಗಿದ್ದು, ಎಫ್ಐಆರ್ ದಾಖಲಿಸುವಂತೆ ಮದ್ರಾಸ್ ಹೈಕೋರ್ಟ್ ತಿಳಿಸಿದೆ.

ಕಮಲ್ ಹಾಸನ್ ವಿರುದ್ಧ ಮಾಡಲಾಗಿರುವ ಆರೋಪ ಹಾಗೂ ಆತ ನೀಡಿದ ಹೇಳಿಕೆ ತಪ್ಪನಿಂದ ಕೂಡಿದ್ದರೆ ಎಫ್ಐಆರ್ ದಾಖಲಿಸಿ ಎಂದು ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ.

ಮದ್ರಾಸ್ ಹೈಕೋರ್ಟಿನಲ್ಲೇ ವಕೀಲರಾಗಿರುವ ಜಿ.ದೇವರಾಜ್ ಎಂಬುವವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಸ್.ರಮೇಶ್, ತಪ್ಪಿತಸ್ಥ ಎಂದು ಮೇಲ್ನೋಟಕ್ಕೆ ಸಾಬೀತಾದರೆ ಪ್ರಕರಣ ದಾಖಲಿಸಿ ಎಂದು ತೀರ್ಪು ನೀಡಿದ್ದು, ಕಮಲ್ ಹಾಸನ್ ಗೆ ಸಂಕಷ್ಟ ಎದುರಾದಂತಾಗಿದೆ.

ದೇಶದಲ್ಲಿ ಹಿಂದೂ ಭಯೋತ್ಪಾದನೆ ಇದೆ ಎಂದು ಬಿಂಬಿಸಲು ಹೊರಟಿದ್ದಾರೆ. ಆದರೆ ಯಾವ ಧರ್ಮವೂ ಹಿಂಸೆಯನ್ನು ಬೋಧಿಸುವುದಿಲ್ಲ ಎಂಬುದನ್ನು ಅವರು ಅರಿಯಬೇಕು ಹಾಗೂ ಪ್ರತಿ ಧರ್ಮವೂ ಶಾಂತಿಯನ್ನು ಬೋಧಿಸುತ್ತದೆ ಎಂಬುದನ್ನು ಮನಗಾಣಬೇಕು. ಆದರೆ ಅವರು ಮಾಡಿರುವ ಹೇಳಿಕೆಗಳು ಸಮುದಾಯದ ನಡುವೆ ಬಿರುಕು ಹುಟ್ಟಿಸುತ್ತವೆ ಎಂದು ದೇವರಾಜ್ ವಾದ ಮಂಡಿಸಿದ್ದರು.

ನ.8ರಂದು ನಿಯತಕಾಲಿಕೆಯೊಂದಕ್ಕೆ ಲೇಖನ ಬರೆದಿದ್ದ ಕಮಲ್ ಹಾಸನ್, ದೇಶದಲ್ಲಿ ಹಿಂದೂ ಭಯೋತ್ಪಾದನೆ ಅಸ್ತಿತ್ವ ಅಲ್ಲಗಳೆಯುವಂತಿಲ್ಲ ಎಂದು ಬರೆದಿದ್ದು, ವಿವಾದಕ್ಕೆ ಕಾರಣವಾಗಿತ್ತು.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search