• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾ ಬಿಟ್ಟರೆ ನೀವೇ ನಮ್ಮ ಕೊನೆಯ ನಂಬಿಕೆ ಎಂದ ಪಾಕಿಸ್ತಾನಿಗೆ ಸುಷ್ಮಾ ಸ್ವರಾಜ್ ನೆರವು

TNN Correspondent Posted On November 26, 2017
0


0
Shares
  • Share On Facebook
  • Tweet It

ದೆಹಲಿ: ದಶಕಗಳಿಂದಲೂ ಪಾಕಿಸ್ತಾನ ಶತ್ರು ರಾಷ್ಟ್ರ ಎಂದು ಗೊತ್ತಿದ್ದರೂ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಮಾನವೀಯ ನೆಲೆಗಟ್ಟಿನ ಮೇಲೆ ಸಂಕಷ್ಟದಲ್ಲಿರುವ ಪಾಕಿಸ್ತಾನಿಯರಿಗೆ ವೈದ್ಯಕೀಯ ವೀಸಾ ನೀಡುತ್ತಿದ್ದಾರೆ.

ಈಗ ಮತ್ತೆ ನಾಲ್ವರು ಪಾಕಿಸ್ತಾನಿಯರಿಗೆ ವೈದ್ಯಕೀಯ ವೀಸಾ ಒದಗಿಸುವ ಭರವಸೆ ನೀಡಿರುವ ಸ್ವರಾಜ್ ಮಾನವೀಯತೆ ಮೆರೆದಿದ್ದಾರೆ.

ಶಹಜೈಬ್ ಇಕ್ಬಾಲ್ ಎಂಬುವವರು ಸಂಬಂಧಿಯೊಬ್ಬರಿಗೆ ಲಿವರ್ ಸಮಸ್ಯೆಯಿದ್ದು, ಭಾರತದಲ್ಲಿ ಚಿಕಿತ್ಸೆ ನೀಡಬೇಕು. ಅದಕ್ಕಾಗಿ ಭಾರತೀಯ ರಾಯಭಾರಿಗಳಿಂದ ವೀಸಾ ಒದಗಿಸಬೇಕು. ಅಲ್ಲಾನ ಬಿಟ್ಟರೆ ನೀವೇ ನಮ್ಮ ಕೊನೆಯ ನಂಬಿಕೆ ಎಂದು ಟ್ವಿಟರ್ ನಲ್ಲಿ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿರುವ ಸುಷ್ಮಾ ಸ್ವರಾಜ್, ನಿಮ್ಮ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ, ವೀಸಾ ನೀಡಲಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಅಲ್ಲದೆ, ಶಹಜೈಬ್ ಹೊರತುಪಡಿಸಿ ಮೂವರು ಪಾಕಿಸ್ತಾನಿಯರು ಸಹ ವೈದ್ಯಕೀಯ ವೀಸಾಕ್ಕೆ ಮನವಿ ಮಾಡಿದ್ದು, ಅವರಿಗೂ ಸುಷ್ಮಾ ಸ್ವರಾಜ್ ವೀಸಾ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ, ಭಾರತ ಮಾನವೀಯ ವಿಷಯಗಳಲ್ಲೂ ರಾಜಕೀಯ ಮಾಡುತ್ತಿದ್ದು, ಪಾಕಿಸ್ತಾನಿ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡುತ್ತಿಲ್ಲ ಎಂದು ಆರೋಪಿಸಿದ ಬೆನ್ನಲ್ಲೇ, ಸುಷ್ಮಾ ಸ್ವರಾಜ್ ಮಾನವೀಯ ಆಧಾರದ ಮೇಲೆ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಇನ್ನಾದರೂ ಪಾಕಿಸ್ತಾನ ಬುದ್ಧಿ ಕಲಿಯಲಿ ಎಂಬುದು ಆಶಯವೂ ಆಗಿದೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search