• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾ ಬಿಟ್ಟರೆ ನೀವೇ ನಮ್ಮ ಕೊನೆಯ ನಂಬಿಕೆ ಎಂದ ಪಾಕಿಸ್ತಾನಿಗೆ ಸುಷ್ಮಾ ಸ್ವರಾಜ್ ನೆರವು

TNN Correspondent Posted On November 26, 2017
0


0
Shares
  • Share On Facebook
  • Tweet It

ದೆಹಲಿ: ದಶಕಗಳಿಂದಲೂ ಪಾಕಿಸ್ತಾನ ಶತ್ರು ರಾಷ್ಟ್ರ ಎಂದು ಗೊತ್ತಿದ್ದರೂ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಮಾನವೀಯ ನೆಲೆಗಟ್ಟಿನ ಮೇಲೆ ಸಂಕಷ್ಟದಲ್ಲಿರುವ ಪಾಕಿಸ್ತಾನಿಯರಿಗೆ ವೈದ್ಯಕೀಯ ವೀಸಾ ನೀಡುತ್ತಿದ್ದಾರೆ.

ಈಗ ಮತ್ತೆ ನಾಲ್ವರು ಪಾಕಿಸ್ತಾನಿಯರಿಗೆ ವೈದ್ಯಕೀಯ ವೀಸಾ ಒದಗಿಸುವ ಭರವಸೆ ನೀಡಿರುವ ಸ್ವರಾಜ್ ಮಾನವೀಯತೆ ಮೆರೆದಿದ್ದಾರೆ.

ಶಹಜೈಬ್ ಇಕ್ಬಾಲ್ ಎಂಬುವವರು ಸಂಬಂಧಿಯೊಬ್ಬರಿಗೆ ಲಿವರ್ ಸಮಸ್ಯೆಯಿದ್ದು, ಭಾರತದಲ್ಲಿ ಚಿಕಿತ್ಸೆ ನೀಡಬೇಕು. ಅದಕ್ಕಾಗಿ ಭಾರತೀಯ ರಾಯಭಾರಿಗಳಿಂದ ವೀಸಾ ಒದಗಿಸಬೇಕು. ಅಲ್ಲಾನ ಬಿಟ್ಟರೆ ನೀವೇ ನಮ್ಮ ಕೊನೆಯ ನಂಬಿಕೆ ಎಂದು ಟ್ವಿಟರ್ ನಲ್ಲಿ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿರುವ ಸುಷ್ಮಾ ಸ್ವರಾಜ್, ನಿಮ್ಮ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ, ವೀಸಾ ನೀಡಲಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಅಲ್ಲದೆ, ಶಹಜೈಬ್ ಹೊರತುಪಡಿಸಿ ಮೂವರು ಪಾಕಿಸ್ತಾನಿಯರು ಸಹ ವೈದ್ಯಕೀಯ ವೀಸಾಕ್ಕೆ ಮನವಿ ಮಾಡಿದ್ದು, ಅವರಿಗೂ ಸುಷ್ಮಾ ಸ್ವರಾಜ್ ವೀಸಾ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ, ಭಾರತ ಮಾನವೀಯ ವಿಷಯಗಳಲ್ಲೂ ರಾಜಕೀಯ ಮಾಡುತ್ತಿದ್ದು, ಪಾಕಿಸ್ತಾನಿ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡುತ್ತಿಲ್ಲ ಎಂದು ಆರೋಪಿಸಿದ ಬೆನ್ನಲ್ಲೇ, ಸುಷ್ಮಾ ಸ್ವರಾಜ್ ಮಾನವೀಯ ಆಧಾರದ ಮೇಲೆ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಇನ್ನಾದರೂ ಪಾಕಿಸ್ತಾನ ಬುದ್ಧಿ ಕಲಿಯಲಿ ಎಂಬುದು ಆಶಯವೂ ಆಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search