• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಲ್ಲಾ ಬಿಟ್ಟರೆ ನೀವೇ ನಮ್ಮ ಕೊನೆಯ ನಂಬಿಕೆ ಎಂದ ಪಾಕಿಸ್ತಾನಿಗೆ ಸುಷ್ಮಾ ಸ್ವರಾಜ್ ನೆರವು

TNN Correspondent Posted On November 26, 2017


  • Share On Facebook
  • Tweet It

ದೆಹಲಿ: ದಶಕಗಳಿಂದಲೂ ಪಾಕಿಸ್ತಾನ ಶತ್ರು ರಾಷ್ಟ್ರ ಎಂದು ಗೊತ್ತಿದ್ದರೂ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಮಾನವೀಯ ನೆಲೆಗಟ್ಟಿನ ಮೇಲೆ ಸಂಕಷ್ಟದಲ್ಲಿರುವ ಪಾಕಿಸ್ತಾನಿಯರಿಗೆ ವೈದ್ಯಕೀಯ ವೀಸಾ ನೀಡುತ್ತಿದ್ದಾರೆ.

ಈಗ ಮತ್ತೆ ನಾಲ್ವರು ಪಾಕಿಸ್ತಾನಿಯರಿಗೆ ವೈದ್ಯಕೀಯ ವೀಸಾ ಒದಗಿಸುವ ಭರವಸೆ ನೀಡಿರುವ ಸ್ವರಾಜ್ ಮಾನವೀಯತೆ ಮೆರೆದಿದ್ದಾರೆ.

ಶಹಜೈಬ್ ಇಕ್ಬಾಲ್ ಎಂಬುವವರು ಸಂಬಂಧಿಯೊಬ್ಬರಿಗೆ ಲಿವರ್ ಸಮಸ್ಯೆಯಿದ್ದು, ಭಾರತದಲ್ಲಿ ಚಿಕಿತ್ಸೆ ನೀಡಬೇಕು. ಅದಕ್ಕಾಗಿ ಭಾರತೀಯ ರಾಯಭಾರಿಗಳಿಂದ ವೀಸಾ ಒದಗಿಸಬೇಕು. ಅಲ್ಲಾನ ಬಿಟ್ಟರೆ ನೀವೇ ನಮ್ಮ ಕೊನೆಯ ನಂಬಿಕೆ ಎಂದು ಟ್ವಿಟರ್ ನಲ್ಲಿ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿರುವ ಸುಷ್ಮಾ ಸ್ವರಾಜ್, ನಿಮ್ಮ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ, ವೀಸಾ ನೀಡಲಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಅಲ್ಲದೆ, ಶಹಜೈಬ್ ಹೊರತುಪಡಿಸಿ ಮೂವರು ಪಾಕಿಸ್ತಾನಿಯರು ಸಹ ವೈದ್ಯಕೀಯ ವೀಸಾಕ್ಕೆ ಮನವಿ ಮಾಡಿದ್ದು, ಅವರಿಗೂ ಸುಷ್ಮಾ ಸ್ವರಾಜ್ ವೀಸಾ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ, ಭಾರತ ಮಾನವೀಯ ವಿಷಯಗಳಲ್ಲೂ ರಾಜಕೀಯ ಮಾಡುತ್ತಿದ್ದು, ಪಾಕಿಸ್ತಾನಿ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡುತ್ತಿಲ್ಲ ಎಂದು ಆರೋಪಿಸಿದ ಬೆನ್ನಲ್ಲೇ, ಸುಷ್ಮಾ ಸ್ವರಾಜ್ ಮಾನವೀಯ ಆಧಾರದ ಮೇಲೆ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಇನ್ನಾದರೂ ಪಾಕಿಸ್ತಾನ ಬುದ್ಧಿ ಕಲಿಯಲಿ ಎಂಬುದು ಆಶಯವೂ ಆಗಿದೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search