• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಲಾ ಬಿಟ್ಟರೆ ನೀವೇ ನಮ್ಮ ಕೊನೆಯ ನಂಬಿಕೆ ಎಂದ ಪಾಕಿಸ್ತಾನಿಗೆ ಸುಷ್ಮಾ ಸ್ವರಾಜ್ ನೆರವು

TNN Correspondent Posted On November 26, 2017
0


0
Shares
  • Share On Facebook
  • Tweet It

ದೆಹಲಿ: ದಶಕಗಳಿಂದಲೂ ಪಾಕಿಸ್ತಾನ ಶತ್ರು ರಾಷ್ಟ್ರ ಎಂದು ಗೊತ್ತಿದ್ದರೂ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಮಾನವೀಯ ನೆಲೆಗಟ್ಟಿನ ಮೇಲೆ ಸಂಕಷ್ಟದಲ್ಲಿರುವ ಪಾಕಿಸ್ತಾನಿಯರಿಗೆ ವೈದ್ಯಕೀಯ ವೀಸಾ ನೀಡುತ್ತಿದ್ದಾರೆ.

ಈಗ ಮತ್ತೆ ನಾಲ್ವರು ಪಾಕಿಸ್ತಾನಿಯರಿಗೆ ವೈದ್ಯಕೀಯ ವೀಸಾ ಒದಗಿಸುವ ಭರವಸೆ ನೀಡಿರುವ ಸ್ವರಾಜ್ ಮಾನವೀಯತೆ ಮೆರೆದಿದ್ದಾರೆ.

ಶಹಜೈಬ್ ಇಕ್ಬಾಲ್ ಎಂಬುವವರು ಸಂಬಂಧಿಯೊಬ್ಬರಿಗೆ ಲಿವರ್ ಸಮಸ್ಯೆಯಿದ್ದು, ಭಾರತದಲ್ಲಿ ಚಿಕಿತ್ಸೆ ನೀಡಬೇಕು. ಅದಕ್ಕಾಗಿ ಭಾರತೀಯ ರಾಯಭಾರಿಗಳಿಂದ ವೀಸಾ ಒದಗಿಸಬೇಕು. ಅಲ್ಲಾನ ಬಿಟ್ಟರೆ ನೀವೇ ನಮ್ಮ ಕೊನೆಯ ನಂಬಿಕೆ ಎಂದು ಟ್ವಿಟರ್ ನಲ್ಲಿ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿರುವ ಸುಷ್ಮಾ ಸ್ವರಾಜ್, ನಿಮ್ಮ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ, ವೀಸಾ ನೀಡಲಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಅಲ್ಲದೆ, ಶಹಜೈಬ್ ಹೊರತುಪಡಿಸಿ ಮೂವರು ಪಾಕಿಸ್ತಾನಿಯರು ಸಹ ವೈದ್ಯಕೀಯ ವೀಸಾಕ್ಕೆ ಮನವಿ ಮಾಡಿದ್ದು, ಅವರಿಗೂ ಸುಷ್ಮಾ ಸ್ವರಾಜ್ ವೀಸಾ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ, ಭಾರತ ಮಾನವೀಯ ವಿಷಯಗಳಲ್ಲೂ ರಾಜಕೀಯ ಮಾಡುತ್ತಿದ್ದು, ಪಾಕಿಸ್ತಾನಿ ಪ್ರಜೆಗಳಿಗೆ ವೈದ್ಯಕೀಯ ವೀಸಾ ನೀಡುತ್ತಿಲ್ಲ ಎಂದು ಆರೋಪಿಸಿದ ಬೆನ್ನಲ್ಲೇ, ಸುಷ್ಮಾ ಸ್ವರಾಜ್ ಮಾನವೀಯ ಆಧಾರದ ಮೇಲೆ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಇನ್ನಾದರೂ ಪಾಕಿಸ್ತಾನ ಬುದ್ಧಿ ಕಲಿಯಲಿ ಎಂಬುದು ಆಶಯವೂ ಆಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search