• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ವೈದ್ಯ ದಂಪತಿಗಳಿಂದ ಯಶಸ್ವಿ ಹೈನುಗಾರಿಕೆ!

TNN Correspondent Posted On July 4, 2017
0


0
Shares
  • Share On Facebook
  • Tweet It

ದನಗಳನ್ನು ಸಾಕುವುದರಿಂದ ಏನು ಸಿಗುತ್ತದೆ ಮಹಾ? ಅದರಿಂದ ಖರ್ಚು ವಿನ: ಬೇರೆ ಏನೂ ಲಾಭ ಇಲ್ಲ ಎಂದು ಅಂದುಕೊಳ್ಳುವವರೇ ಹೆಚ್ಚು. ದನಗಳನ್ನು ಸಾಕುವುದಕ್ಕಿಂತ ಎಲ್ಲಿಯಾದರೂ ಕೆಲಸಕ್ಕೆ ನಿಂತರೆ ಸಂಬಳವಾದರೂ ಸಿಗುತ್ತದೆ ಎಂದು ಹಲವಾರು ಜನ ಯುವಕರು ತಮ್ಮ ಹಳ್ಳಿಗಳಲ್ಲಿರುವ ಮನೆಗಳನ್ನು ಬಿಟ್ಟು ಪೇಟೆಗೆ ವಲಸೆ ಬರುತ್ತಾರೆ. ಕೃಷಿಯನ್ನು ಬಿಟ್ಟು ಬೇರೆ ವೃತ್ತಿಗೆ ವಲಸೆ ಹೋಗುವುದು ಇಂದಿನ ದಿನಗಳಲ್ಲಿ ಸಾಮಾನ್ಯ. ಆದರೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಮತ್ತೊಂದೆಡೆ ಪೂರ್ಣ ಪ್ರಮಾಣದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಎರಡೂ ಕ್ಷೇತ್ರಗಳಲ್ಲಿಯೂ ಯಶಸ್ವಿಯಾದ ದಂಪತಿಗಳು ಮಂಗಳೂರಿನಲ್ಲಿದ್ದಾರೆ.
ಸುರತ್ಕಲ್ ನ ಎಲಿಫಾಡರ್್ ಜಾರ್ಜ ಅವರು ಮೂಲತ: ಕೃಷಿ ಕುಟುಂಬದಿಂದ ಬಂದವರು. ಆದರೆ ನಂತರ ವಿದ್ಯಾಭ್ಯಾಸದ ದೃಷ್ಟಿಯಿಂದ ವೈದ್ಯ ಡಿಗ್ರಿಯನ್ನು ಪಡೆದರು. ಅದರ ಬಳಿಕ ಅವರಿಗೆ ತಮ್ಮ ಮೂಲ ಕಸುಬು ನೆನಪಾಯಿತು. ಅದಕ್ಕೆ ಸರಿಯಾಗಿ ಹೈನುಗಾರಿಕೆಯಲ್ಲಿಯೂ ಏನಾದರೂ ಸಾಧಿಸಬೇಕೆಂಬ ಅವರ ಅದಮ್ಯ ಉತ್ಸಾಹಕ್ಕೆ ಅವರ ಪತ್ನಿ ಸಾಥ್ ನೀಡಿದರು. ಅವರ ಮಡದಿ ಡಾ|ರಚನಾ ಎನಾಟಿಮಿಕ್ ನಲ್ಲಿ ಪಿಎಚ್ ಡಿ ಮಾಡಿದ್ದಾರೆ. ದಂಪತಿಗಳು ಪ್ರಾರಂಭದಲ್ಲಿ ಎರಡು ದನಗಳಿಂದ ಹೈನುಗಾರಿಕೆಯನ್ನು ಪ್ರಾರಂಭಿಸಿದರು. ಅದರ ನಂತರ ಒಂದೊಂದೆ ದನ ಹೆಚ್ಚಾಗುತ್ತಾ ಈಗ ಇವರ ಈಗ ಒಟ್ಟು ಮೂವತ್ತು ದನಗಳಿವೆ. ಅದರಲ್ಲಿ ಜಸರ್ಿ ಮತ್ತು ಹೆಚ್ ಎಫ್ ತಳಿಗಳು ಕೂಡ ಇದ್ದು, ಇನ್ನೊಂದು ಆಶ್ಚರ್ಯ ಎಂದರೆ ಅದರ ಜೊತೆಗೆ ಸಿರೋಬಿ ಮತ್ತು ಜಮ್ಲಪುರ ಎಂಬ ಎರಡು ತಳಿಗಳ ಮೇಕೆ ಸಾಕಾಣಿಕೆಯನ್ನು ಕೂಡ ಇವರು ಮಾಡುತ್ತಿದ್ದಾರೆ.


ವೈದ್ಯ ದಂಪತಿಗಳು ತಮ್ಮ ಹವ್ಯಾಸದಿಂದ ಸಾಕಷ್ಟು ಲಾಭವನ್ನು ಗಳಿಸುತ್ತಿದ್ದಾರೆ. ಹೈನುಗಾರಿಕೆಯಿಂದ ಸಿಗುವ ಗೊಬ್ಬರಕ್ಕೆ ಅತೀವ ಬೇಡಿಕೆ ಇದ್ದು ಇದರಿಂದಲೇ ಗೊಬರ್ ಗ್ಯಾಸ್ ಕೂಡ ಉತ್ಪತ್ತಿ ಮಾಡಿ ಮನೆಯ ದಿನಕೆಲಸಕ್ಕೆ ಉಪಯೋಗಿಸುತ್ತಿದ್ದಾರೆ.
ಈ ಬಗ್ಗೆ ತಮ್ಮ ಸಂತಸವನ್ನು ಹಂಚಿಕೊಳ್ಳುವ ಎಲಿಫಡರ್್ ಜಾರ್ಜ ಅವರು ಯುವ ಜನತೆ ಹೆಚ್ಚಾಗಿ ಹೈನುಗಾರಿಕೆಗೆ ಒಲವನ್ನು ತೋರಿಸಿದರೆ ಅದರಿಂದ ಸ್ವ ಉದ್ಯೋಗಕ್ಕೂ ಪ್ರಾಶಸ್ತ್ಯ ನೀಡಿದಂತೆ ಆಗುತ್ತದೆ. ಅದರರೊಂದಿಗೆ ಪುರಾತನ ಶೈಲಿಯನ್ನು ಅಳವಡಿಸುವುದನ್ನು ಬಿಟ್ಟು ಆಧುನಿಕ ಶೈಲಿಗೆ ಒಗ್ಗಿಕೊಳ್ಳುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದರು. ಸಂತಾನೋತ್ಪತ್ತಿಗೆ ಕೃತಕ ಶೈಲಿಯನ್ನು ಬಳಸುವುದರಿಂದ ಒಳ್ಳೆಯ ಕರುಗಳನ್ನು ನಾವು ಹೊಂದಿದ್ದೇವೆ ಎಂದು ಅವರು ತಿಳಿಸಿದರು. ಹೈನುಗಾರಿಕೆಯಿಂದ ಸಿಕ್ಕಿದ ಹಾಲನ್ನು ಸ್ಥಳೀಯರಿಗೆ ಮಾರಾಟ ಮಾಡಿ ಉಳಿದ ಹಾಲನ್ನು ಕೆಎಂಎಫ್ ಗೆ ಮಾರುತ್ತೇವೆ ಎಂದು ಅವರು ತಿಳಿಸಿದರು.
ತಮ್ಮ ಮನೆಯ ಆವರಣದಲ್ಲಿರುವ ಕೊಟ್ಟಿಗೆಯನ್ನು ಆಧುನಿಕ ಶೈಲಿಗೆ ಬದಲಾಯಿಸಿಕೊಂಡಿರುವ ಜಾರ್ಜ ಪ್ರತಿದಿನ ಕೊಟ್ಟಿಗೆಯನ್ನು ಸ್ವಚ್ಛಗೊಳಿಸಲು ಮತ್ತು ದನಗಳ ಸಾಕಾಣಿಕೆಗೆ ಮೂರು ಜನರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಸುಮಾರು ಹತ್ತು ಎಕರೆ ಜಾಗ ಹೊಂದಿರುವ ಜಾರ್ಜ ದಂಪತಿಗಳು ಅದರಲ್ಲಿ ಒಂದು ಎಕರೆಯಲ್ಲಿ ಕೇವಲ ಹುಲ್ಲನ್ನೇ ಬೆಳೆಯುತ್ತಿದ್ದಾರೆ. ಡಾ|ರಚನಾ ಅವರು ತಮ್ಮ ಪತಿಗೆ ಹೈನುಗಾರಿಕೆಯಲ್ಲಿ ಸಂಪೂರ್ಣವಾಗಿ ಸಹಾಯ ಮಾಡುತ್ತಾ ಆದರ್ಶ ಸತಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search