• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ವೈದ್ಯ ದಂಪತಿಗಳಿಂದ ಯಶಸ್ವಿ ಹೈನುಗಾರಿಕೆ!

TNN Correspondent Posted On July 4, 2017
0


0
Shares
  • Share On Facebook
  • Tweet It

ದನಗಳನ್ನು ಸಾಕುವುದರಿಂದ ಏನು ಸಿಗುತ್ತದೆ ಮಹಾ? ಅದರಿಂದ ಖರ್ಚು ವಿನ: ಬೇರೆ ಏನೂ ಲಾಭ ಇಲ್ಲ ಎಂದು ಅಂದುಕೊಳ್ಳುವವರೇ ಹೆಚ್ಚು. ದನಗಳನ್ನು ಸಾಕುವುದಕ್ಕಿಂತ ಎಲ್ಲಿಯಾದರೂ ಕೆಲಸಕ್ಕೆ ನಿಂತರೆ ಸಂಬಳವಾದರೂ ಸಿಗುತ್ತದೆ ಎಂದು ಹಲವಾರು ಜನ ಯುವಕರು ತಮ್ಮ ಹಳ್ಳಿಗಳಲ್ಲಿರುವ ಮನೆಗಳನ್ನು ಬಿಟ್ಟು ಪೇಟೆಗೆ ವಲಸೆ ಬರುತ್ತಾರೆ. ಕೃಷಿಯನ್ನು ಬಿಟ್ಟು ಬೇರೆ ವೃತ್ತಿಗೆ ವಲಸೆ ಹೋಗುವುದು ಇಂದಿನ ದಿನಗಳಲ್ಲಿ ಸಾಮಾನ್ಯ. ಆದರೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಮತ್ತೊಂದೆಡೆ ಪೂರ್ಣ ಪ್ರಮಾಣದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ಎರಡೂ ಕ್ಷೇತ್ರಗಳಲ್ಲಿಯೂ ಯಶಸ್ವಿಯಾದ ದಂಪತಿಗಳು ಮಂಗಳೂರಿನಲ್ಲಿದ್ದಾರೆ.
ಸುರತ್ಕಲ್ ನ ಎಲಿಫಾಡರ್್ ಜಾರ್ಜ ಅವರು ಮೂಲತ: ಕೃಷಿ ಕುಟುಂಬದಿಂದ ಬಂದವರು. ಆದರೆ ನಂತರ ವಿದ್ಯಾಭ್ಯಾಸದ ದೃಷ್ಟಿಯಿಂದ ವೈದ್ಯ ಡಿಗ್ರಿಯನ್ನು ಪಡೆದರು. ಅದರ ಬಳಿಕ ಅವರಿಗೆ ತಮ್ಮ ಮೂಲ ಕಸುಬು ನೆನಪಾಯಿತು. ಅದಕ್ಕೆ ಸರಿಯಾಗಿ ಹೈನುಗಾರಿಕೆಯಲ್ಲಿಯೂ ಏನಾದರೂ ಸಾಧಿಸಬೇಕೆಂಬ ಅವರ ಅದಮ್ಯ ಉತ್ಸಾಹಕ್ಕೆ ಅವರ ಪತ್ನಿ ಸಾಥ್ ನೀಡಿದರು. ಅವರ ಮಡದಿ ಡಾ|ರಚನಾ ಎನಾಟಿಮಿಕ್ ನಲ್ಲಿ ಪಿಎಚ್ ಡಿ ಮಾಡಿದ್ದಾರೆ. ದಂಪತಿಗಳು ಪ್ರಾರಂಭದಲ್ಲಿ ಎರಡು ದನಗಳಿಂದ ಹೈನುಗಾರಿಕೆಯನ್ನು ಪ್ರಾರಂಭಿಸಿದರು. ಅದರ ನಂತರ ಒಂದೊಂದೆ ದನ ಹೆಚ್ಚಾಗುತ್ತಾ ಈಗ ಇವರ ಈಗ ಒಟ್ಟು ಮೂವತ್ತು ದನಗಳಿವೆ. ಅದರಲ್ಲಿ ಜಸರ್ಿ ಮತ್ತು ಹೆಚ್ ಎಫ್ ತಳಿಗಳು ಕೂಡ ಇದ್ದು, ಇನ್ನೊಂದು ಆಶ್ಚರ್ಯ ಎಂದರೆ ಅದರ ಜೊತೆಗೆ ಸಿರೋಬಿ ಮತ್ತು ಜಮ್ಲಪುರ ಎಂಬ ಎರಡು ತಳಿಗಳ ಮೇಕೆ ಸಾಕಾಣಿಕೆಯನ್ನು ಕೂಡ ಇವರು ಮಾಡುತ್ತಿದ್ದಾರೆ.


ವೈದ್ಯ ದಂಪತಿಗಳು ತಮ್ಮ ಹವ್ಯಾಸದಿಂದ ಸಾಕಷ್ಟು ಲಾಭವನ್ನು ಗಳಿಸುತ್ತಿದ್ದಾರೆ. ಹೈನುಗಾರಿಕೆಯಿಂದ ಸಿಗುವ ಗೊಬ್ಬರಕ್ಕೆ ಅತೀವ ಬೇಡಿಕೆ ಇದ್ದು ಇದರಿಂದಲೇ ಗೊಬರ್ ಗ್ಯಾಸ್ ಕೂಡ ಉತ್ಪತ್ತಿ ಮಾಡಿ ಮನೆಯ ದಿನಕೆಲಸಕ್ಕೆ ಉಪಯೋಗಿಸುತ್ತಿದ್ದಾರೆ.
ಈ ಬಗ್ಗೆ ತಮ್ಮ ಸಂತಸವನ್ನು ಹಂಚಿಕೊಳ್ಳುವ ಎಲಿಫಡರ್್ ಜಾರ್ಜ ಅವರು ಯುವ ಜನತೆ ಹೆಚ್ಚಾಗಿ ಹೈನುಗಾರಿಕೆಗೆ ಒಲವನ್ನು ತೋರಿಸಿದರೆ ಅದರಿಂದ ಸ್ವ ಉದ್ಯೋಗಕ್ಕೂ ಪ್ರಾಶಸ್ತ್ಯ ನೀಡಿದಂತೆ ಆಗುತ್ತದೆ. ಅದರರೊಂದಿಗೆ ಪುರಾತನ ಶೈಲಿಯನ್ನು ಅಳವಡಿಸುವುದನ್ನು ಬಿಟ್ಟು ಆಧುನಿಕ ಶೈಲಿಗೆ ಒಗ್ಗಿಕೊಳ್ಳುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದರು. ಸಂತಾನೋತ್ಪತ್ತಿಗೆ ಕೃತಕ ಶೈಲಿಯನ್ನು ಬಳಸುವುದರಿಂದ ಒಳ್ಳೆಯ ಕರುಗಳನ್ನು ನಾವು ಹೊಂದಿದ್ದೇವೆ ಎಂದು ಅವರು ತಿಳಿಸಿದರು. ಹೈನುಗಾರಿಕೆಯಿಂದ ಸಿಕ್ಕಿದ ಹಾಲನ್ನು ಸ್ಥಳೀಯರಿಗೆ ಮಾರಾಟ ಮಾಡಿ ಉಳಿದ ಹಾಲನ್ನು ಕೆಎಂಎಫ್ ಗೆ ಮಾರುತ್ತೇವೆ ಎಂದು ಅವರು ತಿಳಿಸಿದರು.
ತಮ್ಮ ಮನೆಯ ಆವರಣದಲ್ಲಿರುವ ಕೊಟ್ಟಿಗೆಯನ್ನು ಆಧುನಿಕ ಶೈಲಿಗೆ ಬದಲಾಯಿಸಿಕೊಂಡಿರುವ ಜಾರ್ಜ ಪ್ರತಿದಿನ ಕೊಟ್ಟಿಗೆಯನ್ನು ಸ್ವಚ್ಛಗೊಳಿಸಲು ಮತ್ತು ದನಗಳ ಸಾಕಾಣಿಕೆಗೆ ಮೂರು ಜನರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ಸುಮಾರು ಹತ್ತು ಎಕರೆ ಜಾಗ ಹೊಂದಿರುವ ಜಾರ್ಜ ದಂಪತಿಗಳು ಅದರಲ್ಲಿ ಒಂದು ಎಕರೆಯಲ್ಲಿ ಕೇವಲ ಹುಲ್ಲನ್ನೇ ಬೆಳೆಯುತ್ತಿದ್ದಾರೆ. ಡಾ|ರಚನಾ ಅವರು ತಮ್ಮ ಪತಿಗೆ ಹೈನುಗಾರಿಕೆಯಲ್ಲಿ ಸಂಪೂರ್ಣವಾಗಿ ಸಹಾಯ ಮಾಡುತ್ತಾ ಆದರ್ಶ ಸತಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search