• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾನತೆಯ, ರಾಮರಾಜ್ಯದ ಸಂದೇಶ ಸಾರಿದ ವಿಶ್ವ ಹಿಂದೂ ಧರ್ಮ ಸಂಸದ್

TNN Correspondent Posted On November 27, 2017
0


0
Shares
  • Share On Facebook
  • Tweet It

ಉಡುಪಿ: ಹಿಂದೂ ಸಮಾಜಕ್ಕೆ ಕಂಟಕವಾಗಿರುವ ಅಸಮಾನತೆಯನ್ನು ಹೊಡೆದೊಡಿಸಬೇಕು. ಎಲ್ಲರೂ ಸೌಖ್ಯದಿಂದ ಬಾಳುವಂತ ರಾಮರಾಜ್ಯದ ಕನಸನ್ನು ಸಾಕಾರಗೊಳಿಸಬೇಕು ಎಂಬ ಮಹತ್ತರ ಸಂದೇಶವನ್ನು ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಧರ್ಮ ಸಂಸದ್ ಸಾರಿತು.

ಹಿಂದೂ ಸಂಘಟನೆಗಳೆಂದರೆ ದಲಿತ ವಿರೋಧಿಗಳು ಎಂಬ ಪಟ್ಟ ಕಳಚಲು ವೇದಿಕೆ ಮೇಲೆಯೇ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ ಭಾಯಿ ತೊಗಾಡಿಯಾ ಹೇಳಿದ ಮಾತುಗಳು ಗಮನಾರ್ಹ. ‘ಅಸಮಾನತೆ ತೊಲಗಿಸುವ ಕಾರ್ಯ ಇಲ್ಲಿಂದಲೇ ಆರಂಭವಾಗಬೇಕು. ಇಲ್ಲಿರುವ ಎಲ್ಲ ಸಾಧುಗಳು, ಸಂತರು ಪ್ರತ್ಯೇಕವಾಗಿ ಭೋಜನ ಮಾಡುವುದು ಬಿಟ್ಟು, ಉಳಿದ ಎಲ್ಲ ಸಾಧು, ಸಂತರೊಂದಿಗೆ ಭೋಜನ ಸ್ವೀಕರಿಸಬೇಕು ಎಂದು ಹೇಳಿದ್ದು ಮಹತ್ತ ಘಟನೆ.

ಅಲ್ಲದೇ ಸಂಸದ್ ನ ನಿರ್ಣಯಗಳಲ್ಲೂ ಹಿಂದೂ ಧರ್ಮಕ್ಕೆ ಕಾರ್ಕೋಟಕ ವಿಷದಂತೆ ಕಾಡುತ್ತಿರುವ ಅಸಮಾನತೆ ಹೊಡೆದೋಡಿಸಬೇಕು ಎಂದು ನಿರ್ಣಯ ಕೈಗೊಂಡಿದ್ದು ಶ್ಲಾಘನೀಯ. ಧರ್ಮ ಸಂಸದ್ ಕೇಂದ್ರ ಬಿಂದುವಾಗಿದ್ದ 97ರ ಹರೆಯದ ವಿಶ್ವೇಶ ತೀರ್ಥ ಶ್ರೀಗಳು ಕೈಗೊಂಡ ದಲಿತ ಕಾಲೋನಿಗಳ ಭೇಟಿಯ ಕ್ರಾಂತಿಕಾರಕ ನಡೆಯನ್ನು ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಎಲ್ಲರೂ ಶ್ಲಾಘಿಸಿದ್ದು, ಅಸಮಾನತೆ ನಿರ್ನಾಮಕ್ಕೆ ಹೊಸ ಮುನ್ನುಡಿ ಬರೆದಂತಿತ್ತು.

ಹಿಂದೂ ಧರ್ಮದ ಎಲ್ಲ ಜಾತಿಯ ಜನರಿಗೆ ಎಲ್ಲ ದೇವಸ್ಥಾನಗಳಲ್ಲಿ, ಹಿಂದೂಗಳ ಮನೆಯಲ್ಲಿ ಮುಕ್ತ ಪ್ರವೇಶ ನೀಡಬೇಕು, ಜಾತಿಗೊಂದು ಸ್ಮಶಾನ ಮಾಡದೇ, ಇಡೀ ಗ್ರಾಮದ ಸಮಸ್ತ ಹಿಂದೂಗಳಿಗೆ ಒಂದೇ ಸ್ಮಶಾನ  ಆರಂಭಿಸಬೇಕು ಎಂಬ ಮಹತ್ತರ ನಿರ್ಣಯವನ್ನು ಮಂಡಿಸುವ ಮೂಲಕ ಧರ್ಮ ಸಂಸದ್ ಹೊಸ ಮುನ್ನುಡಿಯನ್ನು, ಇತಿಹಾಸವನ್ನು ಬರೆಯಿತು.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search