• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾನತೆಯ, ರಾಮರಾಜ್ಯದ ಸಂದೇಶ ಸಾರಿದ ವಿಶ್ವ ಹಿಂದೂ ಧರ್ಮ ಸಂಸದ್

TNN Correspondent Posted On November 27, 2017
0


0
Shares
  • Share On Facebook
  • Tweet It

ಉಡುಪಿ: ಹಿಂದೂ ಸಮಾಜಕ್ಕೆ ಕಂಟಕವಾಗಿರುವ ಅಸಮಾನತೆಯನ್ನು ಹೊಡೆದೊಡಿಸಬೇಕು. ಎಲ್ಲರೂ ಸೌಖ್ಯದಿಂದ ಬಾಳುವಂತ ರಾಮರಾಜ್ಯದ ಕನಸನ್ನು ಸಾಕಾರಗೊಳಿಸಬೇಕು ಎಂಬ ಮಹತ್ತರ ಸಂದೇಶವನ್ನು ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಧರ್ಮ ಸಂಸದ್ ಸಾರಿತು.

ಹಿಂದೂ ಸಂಘಟನೆಗಳೆಂದರೆ ದಲಿತ ವಿರೋಧಿಗಳು ಎಂಬ ಪಟ್ಟ ಕಳಚಲು ವೇದಿಕೆ ಮೇಲೆಯೇ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ ಭಾಯಿ ತೊಗಾಡಿಯಾ ಹೇಳಿದ ಮಾತುಗಳು ಗಮನಾರ್ಹ. ‘ಅಸಮಾನತೆ ತೊಲಗಿಸುವ ಕಾರ್ಯ ಇಲ್ಲಿಂದಲೇ ಆರಂಭವಾಗಬೇಕು. ಇಲ್ಲಿರುವ ಎಲ್ಲ ಸಾಧುಗಳು, ಸಂತರು ಪ್ರತ್ಯೇಕವಾಗಿ ಭೋಜನ ಮಾಡುವುದು ಬಿಟ್ಟು, ಉಳಿದ ಎಲ್ಲ ಸಾಧು, ಸಂತರೊಂದಿಗೆ ಭೋಜನ ಸ್ವೀಕರಿಸಬೇಕು ಎಂದು ಹೇಳಿದ್ದು ಮಹತ್ತ ಘಟನೆ.

ಅಲ್ಲದೇ ಸಂಸದ್ ನ ನಿರ್ಣಯಗಳಲ್ಲೂ ಹಿಂದೂ ಧರ್ಮಕ್ಕೆ ಕಾರ್ಕೋಟಕ ವಿಷದಂತೆ ಕಾಡುತ್ತಿರುವ ಅಸಮಾನತೆ ಹೊಡೆದೋಡಿಸಬೇಕು ಎಂದು ನಿರ್ಣಯ ಕೈಗೊಂಡಿದ್ದು ಶ್ಲಾಘನೀಯ. ಧರ್ಮ ಸಂಸದ್ ಕೇಂದ್ರ ಬಿಂದುವಾಗಿದ್ದ 97ರ ಹರೆಯದ ವಿಶ್ವೇಶ ತೀರ್ಥ ಶ್ರೀಗಳು ಕೈಗೊಂಡ ದಲಿತ ಕಾಲೋನಿಗಳ ಭೇಟಿಯ ಕ್ರಾಂತಿಕಾರಕ ನಡೆಯನ್ನು ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಎಲ್ಲರೂ ಶ್ಲಾಘಿಸಿದ್ದು, ಅಸಮಾನತೆ ನಿರ್ನಾಮಕ್ಕೆ ಹೊಸ ಮುನ್ನುಡಿ ಬರೆದಂತಿತ್ತು.

ಹಿಂದೂ ಧರ್ಮದ ಎಲ್ಲ ಜಾತಿಯ ಜನರಿಗೆ ಎಲ್ಲ ದೇವಸ್ಥಾನಗಳಲ್ಲಿ, ಹಿಂದೂಗಳ ಮನೆಯಲ್ಲಿ ಮುಕ್ತ ಪ್ರವೇಶ ನೀಡಬೇಕು, ಜಾತಿಗೊಂದು ಸ್ಮಶಾನ ಮಾಡದೇ, ಇಡೀ ಗ್ರಾಮದ ಸಮಸ್ತ ಹಿಂದೂಗಳಿಗೆ ಒಂದೇ ಸ್ಮಶಾನ  ಆರಂಭಿಸಬೇಕು ಎಂಬ ಮಹತ್ತರ ನಿರ್ಣಯವನ್ನು ಮಂಡಿಸುವ ಮೂಲಕ ಧರ್ಮ ಸಂಸದ್ ಹೊಸ ಮುನ್ನುಡಿಯನ್ನು, ಇತಿಹಾಸವನ್ನು ಬರೆಯಿತು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search