• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಮಾನತೆಯ, ರಾಮರಾಜ್ಯದ ಸಂದೇಶ ಸಾರಿದ ವಿಶ್ವ ಹಿಂದೂ ಧರ್ಮ ಸಂಸದ್

TNN Correspondent Posted On November 27, 2017


  • Share On Facebook
  • Tweet It

ಉಡುಪಿ: ಹಿಂದೂ ಸಮಾಜಕ್ಕೆ ಕಂಟಕವಾಗಿರುವ ಅಸಮಾನತೆಯನ್ನು ಹೊಡೆದೊಡಿಸಬೇಕು. ಎಲ್ಲರೂ ಸೌಖ್ಯದಿಂದ ಬಾಳುವಂತ ರಾಮರಾಜ್ಯದ ಕನಸನ್ನು ಸಾಕಾರಗೊಳಿಸಬೇಕು ಎಂಬ ಮಹತ್ತರ ಸಂದೇಶವನ್ನು ಉಡುಪಿಯಲ್ಲಿ ನಡೆದ ವಿಶ್ವ ಹಿಂದೂ ಧರ್ಮ ಸಂಸದ್ ಸಾರಿತು.

ಹಿಂದೂ ಸಂಘಟನೆಗಳೆಂದರೆ ದಲಿತ ವಿರೋಧಿಗಳು ಎಂಬ ಪಟ್ಟ ಕಳಚಲು ವೇದಿಕೆ ಮೇಲೆಯೇ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ ಭಾಯಿ ತೊಗಾಡಿಯಾ ಹೇಳಿದ ಮಾತುಗಳು ಗಮನಾರ್ಹ. ‘ಅಸಮಾನತೆ ತೊಲಗಿಸುವ ಕಾರ್ಯ ಇಲ್ಲಿಂದಲೇ ಆರಂಭವಾಗಬೇಕು. ಇಲ್ಲಿರುವ ಎಲ್ಲ ಸಾಧುಗಳು, ಸಂತರು ಪ್ರತ್ಯೇಕವಾಗಿ ಭೋಜನ ಮಾಡುವುದು ಬಿಟ್ಟು, ಉಳಿದ ಎಲ್ಲ ಸಾಧು, ಸಂತರೊಂದಿಗೆ ಭೋಜನ ಸ್ವೀಕರಿಸಬೇಕು ಎಂದು ಹೇಳಿದ್ದು ಮಹತ್ತ ಘಟನೆ.

ಅಲ್ಲದೇ ಸಂಸದ್ ನ ನಿರ್ಣಯಗಳಲ್ಲೂ ಹಿಂದೂ ಧರ್ಮಕ್ಕೆ ಕಾರ್ಕೋಟಕ ವಿಷದಂತೆ ಕಾಡುತ್ತಿರುವ ಅಸಮಾನತೆ ಹೊಡೆದೋಡಿಸಬೇಕು ಎಂದು ನಿರ್ಣಯ ಕೈಗೊಂಡಿದ್ದು ಶ್ಲಾಘನೀಯ. ಧರ್ಮ ಸಂಸದ್ ಕೇಂದ್ರ ಬಿಂದುವಾಗಿದ್ದ 97ರ ಹರೆಯದ ವಿಶ್ವೇಶ ತೀರ್ಥ ಶ್ರೀಗಳು ಕೈಗೊಂಡ ದಲಿತ ಕಾಲೋನಿಗಳ ಭೇಟಿಯ ಕ್ರಾಂತಿಕಾರಕ ನಡೆಯನ್ನು ವಿರಾಟ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಎಲ್ಲರೂ ಶ್ಲಾಘಿಸಿದ್ದು, ಅಸಮಾನತೆ ನಿರ್ನಾಮಕ್ಕೆ ಹೊಸ ಮುನ್ನುಡಿ ಬರೆದಂತಿತ್ತು.

ಹಿಂದೂ ಧರ್ಮದ ಎಲ್ಲ ಜಾತಿಯ ಜನರಿಗೆ ಎಲ್ಲ ದೇವಸ್ಥಾನಗಳಲ್ಲಿ, ಹಿಂದೂಗಳ ಮನೆಯಲ್ಲಿ ಮುಕ್ತ ಪ್ರವೇಶ ನೀಡಬೇಕು, ಜಾತಿಗೊಂದು ಸ್ಮಶಾನ ಮಾಡದೇ, ಇಡೀ ಗ್ರಾಮದ ಸಮಸ್ತ ಹಿಂದೂಗಳಿಗೆ ಒಂದೇ ಸ್ಮಶಾನ  ಆರಂಭಿಸಬೇಕು ಎಂಬ ಮಹತ್ತರ ನಿರ್ಣಯವನ್ನು ಮಂಡಿಸುವ ಮೂಲಕ ಧರ್ಮ ಸಂಸದ್ ಹೊಸ ಮುನ್ನುಡಿಯನ್ನು, ಇತಿಹಾಸವನ್ನು ಬರೆಯಿತು.

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search