• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತವರು ರಾಜ್ಯದಲ್ಲಿ ಮೋದಿ ಪ್ರಚಾರ, ಜನಬೆಂಬಲದ ಅಬ್ಬರ

TNN Correspondent Posted On November 27, 2017
0


0
Shares
  • Share On Facebook
  • Tweet It

ಗಾಂಧಿನಗರ: 2019ರ ಲೋಕಸಭೆ ಚುನಾವಣೆಯ ಮುನ್ನುಡಿ ಎಂದೇ ಬಿಂಬಿಸಲಾಗಿರುವ ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗುಜರಾತ್ ತಲುಪಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಕಾಂಗ್ರೆಸ್ ಉಪಾಧ್ಯಕ್ಷ ರಾಹಲ್ ಗಾಂಧಿ ಈಗಾಗಲೇ ಗುಜರಾತಿನಲ್ಲಿ ಸಭೆ ನಡೆಸಿದ್ದರೂ, ಹಿಮಾಚಲ ಪ್ರದೇಶ ಚುನಾವಣೆ, ಫಿಲಿಪ್ಪೈನ್ಸ್ ನಲ್ಲಿ ನಡೆದ ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗಿ ಸೇರಿ ಬಿಡುವಿಲ್ಲದ ವೇಳಾಪಟ್ಟಿ ಹಿನ್ನೆಲೆ ತವರು ರಾಜ್ಯಕ್ಕೇ ತೆರಳಿರಲಿಲ್ಲ.

ಈಗ ಗುಜರಾತ್ ತಲುಪಿರುವ ಪ್ರಧಾನಿ ಮೋದಿ ಸೋಮವಾರ ಒಂದೇ ದಿನ ಭುಜ್, ಕಚ್, ಜಸ್ಡನ್, ಕಮ್ರೇಜ್ ಹಾಗೂ ಧಾರಿ ಪ್ರದೇಶಳಲ್ಲಿ ನಡೆಯುವ ಸಾಲು ಸಾಲು ಸಭೆಗಳಲ್ಲಿ ಭಾಷಣ ಮಾಡಲಿದ್ದು, ಅಪಾರ ಜನ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಮೋದಿ ಕಚ್ ನ ಆಶಾಪುರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಆವರಣದಲ್ಲಿ ಪ್ರಚಾರದ ಭಾಗವಾಗಿ ಸ್ಥಳೀಯರ ಜತೆ ಮಾತುಕತೆ ನಡೆಸಿದ್ದಾರೆ.

ಮುಂದಿನ 15 ದಿನಗಳಲ್ಲಿ ಮೋದಿ ಅವರು ಸುಮಾರು 20 ಸಮಾವೇಶಗಳಲ್ಲಿ ಭಾಗವಹಿಸಲಿದ್ದು, ಕಳೆದ 22 ವರ್ಷಗಳಲ್ಲಿ ಗುಜರಾತಿನಲ್ಲಿ ಕೈಗೊಂಡ ಅಭಿವೃದ್ಧಿ, ಕೇಂದ್ರ ಸರ್ಕಾರದ ಯೋಜನೆ, ಕಾಂಗ್ರೆಸ್ ವೈಫಲ್ಯವನ್ನು ಚುನಾವಣೆ ಅಸ್ತ್ರವನ್ನಾಗಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search