• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಆರೋಗ್ಯ

  ತಲೆಗೂದಲಿನ ಅರೋಗ್ಯ

TNN Correspondent Posted On July 4, 2017
0


0
Shares
  • Share On Facebook
  • Tweet It

ಮುಖ ಮನಸ್ಸಿನ ಕನ್ನಡಿ ಅನ್ನುತ್ತಾರೆ ,ಈ ಮುಖಕ್ಕೆ ಅಂದ ನೀಡುವುದು ತಲೆಗೂದಲು .ಸ್ತ್ರೀ-ಪುರುಷ ಯಾರೇ ಆಗಲಿ ತಲೆಗೂದಲಿನ ಬಗ್ಗೆ ಕಾಳಜಿ ವಹಿಸಲೇ ಬೇಕು.ಮಾರುಕಟ್ಟೆಯಲ್ಲಿ ಸಿಗುವ ಜೆಲ್ ,ಶ್ಯಾಂಪೂ ,ಕಂಡಿಷನರ್ ,ಎಣ್ಣೆ ಎಲ್ಲವೂ ಕೇಶ ಸಂರಕ್ಷಕಗಳೇ ,ಆದ್ರೂ ತುಂಬ ಕೆಮಿಕಲ್ ಗಳನ್ನು ಉಪಯೋಗಿಸಿದ್ರೆ ಕೇಶ ಸಂಹಾರವಾಗೋದು ಖಂಡಿತಾ .ಇದಕ್ಕಾಗಿ ನಮ್ಮ ಮನೆಯಲ್ಲೇ ಸಿಗುವ ,ಹಿತ್ತಲಲ್ಲೇ ದೊರಕುವ ಗಿಡಮೂಲಿಕೆಗಳನ್ನು ಬಳಸಿ ಸುಂದರ ಕೇಶರಾಶಿಯನ್ನು ಪಡೆಯುವ ಕೆಲ ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ದಾಸವಾಳ ಹೂವಿನ ಗಿಡದ ಎಲೆಗಳು ತಲೆಗೂದಲಿಗೆ ಬಹಳ ಒಳ್ಳೆಯದು.ಯಾವುದೇ ದಾಸವಾಳ ಎಲೆಗಳನ್ನು ಮುಷ್ಟಿಯಷ್ಟು ತೆಗೆದುಕೊಂಡು ,ಬಿಸಿನೀರಿನಲ್ಲಿ ಅರ್ಧ ಗಂಟೆ ನೆನೆಸಿಡಿ.ನಂತರ ಅವನ್ನು ಕೈಯಿಂದಲೇ ಹಿಸುಕಿ ಆ ಲೋಳೆ ರಸವನ್ನು ತಲೆ ಸ್ನಾನವಾದ ನಂತರ ಕಂಡಿಷನರ್ ನಂತೆ ಹಚ್ಚಿಕೊಂಡು ಕೆಲವು ನಿಮಿಷ ಮಸಾಜು ಮಾಡಿ ನಂತರ ತಲೆ ತೊಳೆಯಿರಿ .ಇದರಿಂದ ಕೂದಲು ನುಣುಪು  ,ಹೊಳಪು ಪಡೆಯುತ್ತದೆ ,ಉದ್ದ ಬೆಳೆಯುತ್ತದೆ,ಅಕಾಲ ನೆರೆಯನ್ನು ತಡೆಯುತ್ತದೆ.

ತೆಂಗಿನ ಎಣ್ಣೆಗೆ ಭ್ರಿಂಗರಾಜ ಗಿಡದ ಎಲೆಗಳು,ಒಂದೆಲಗ ಗಿಡದ ಎಲೆಗಳು ಮತ್ತು ಮೆಂತೆಯನ್ನು ಸೇರಿಸಿ ಚೆನ್ನಾಗಿ ಕುದಿಸಿ.ನಂತರ ಶೋಧಿಸಿ ಗಾಜಿನ ಬಾಟಲಿನಲ್ಲಿ ತುಂಬಿಡಿ .ಇದನ್ನು ನಿರಂತರವಾಗಿ ತಲೆಗೆ ಹಾಕಿ ಮಸಾಜು ಮಾಡುವುದರಿಂದ ಹೊಟ್ಟು ಆಗುವುದಿಲ್ಲ ಮತ್ತು ನೆನಪಿನ ಶಕ್ತಿ ಜಾಸ್ತಿಯಾಗುತ್ತದೆ.

ಕೆಲವರಿಗೆ ತಲೆಗೂದಲು ಸಿನಿಮಾ ನಟಿಯರಂತೆ ಉದ್ದವಾಗಿ ,ಗುಂಗುರು ಇಲ್ಲದೆ ಇರಬೇಕು ಎಂಬ ಆಸೆಯಿರುತ್ತದೆ.ಇದಕ್ಕಾಗಿ ದುಬಾರಿ ಹೇರ್ ಸ್ಟ್ರೇಟ್ ನಿಂಗ್ ಚಿಕಿತ್ಸೆ ಮಾಡಿಸಿಕೊಳ್ಳುತ್ತಾರೆ ,ಇದು ಅಷ್ಟು ಒಳ್ಳೆಯದಲ್ಲ.ಮನೆಯಲ್ಲೇ ಕೂದಲು ಸ್ಟ್ರೇಟ್ ನಿಂಗ್ ಮಾಡಿಕೊಳ್ಳಬಹುದು.ಒಂದು ಕಪ್ ಮುಲ್ತಾನಿ ಮಿಟ್ಟಿ ,ಅಷ್ಟೇ ಪ್ರಮಾಣದ ಅಕ್ಕಿ ಹಿಟ್ಟು ಬೆರೆಸಿ ಎರಡು ಮೊಟ್ಟೆಯ ಬಿಳಿ ಭಾಗವನ್ನು ಸೇರಿಸಿ ಸ್ವಲ್ಪ ನೀರೂ ಸೇರಿಸಿ ತಲೆಗೂದಲನ್ನು ಎಳೆ ಎಳೆಯಾಗಿ ಬಿಡಿಸಿಕೊಂಡು ಹಚ್ಚಿಕೊಳ್ಳಿ ,ಒಂದು ಗಂಟೆಯ ನಂತರ ತಲೆ ತೊಳೆಯಿರಿ .ವಾರಕ್ಕೆರಡು ಬಾರಿ ಈ ಪ್ರಕ್ರಿಯೆಯನ್ನು ಮಾಡುವುದರಿಂದ ತಲೆ ಕೂದಲು ಉದ್ದವಾಗಿ ,ನೀಳವಾಗಿ ,ನವಿರಾಗಿರುತ್ತದೆ

ತಲೆಗೂದಲನ್ನು ತೊಳೆಯಲು ವಾರಕ್ಕೊಮ್ಮೆ ಮನೆಯಲ್ಲೇ ಮಾಡುವ ಪುಡಿ ತಯಾರಿಸಿಕೊಳ್ಳಬಹುದು .ಸೀಗೆ ಪುಡಿ ,ಮೆಂತೆ ಪುಡಿ,ಅಂಟುವಾಳದ ಪುಡಿ ಸೇರಿಸಿ ಗಾಳಿ ಆಡದ ಡಬ್ಬದಲ್ಲಿ ತುಂಬಿಸಿಟ್ಟು ಉಪಯೋಗಿಸಿದರೆ ತಲೆ ಹೊಟ್ಟು ,ತಲೆ ಉರಿಯುವಿಕೆ,ಕಜ್ಜಿಗಳಿಂದ ದೂರವಿರಬಹುದು.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search