• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಟೀ ಮಾರಿದ್ದು ನಿಜ, ದೇಶವನ್ನಲ್ಲ: ಕಾಂಗ್ರೆಸ್ಸಿಗೆ ಮೋದಿ ಟಾಂಗ್

TNN Correspondent Posted On November 28, 2017
0


0
Shares
  • Share On Facebook
  • Tweet It

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಾಯ್ ವಾಲಾ ಎಂದು ಟೀಕಿಸಿದ್ದ ಕಾಂಗ್ರೆಸ್ಸಿಗರಿಗೆ ಮೋದಿ ಅವರು ಟಾಂಗ್ ನೀಡಿದ್ದು, ನಾನು ಚಹ ಮಾರಿದ್ದು ನಿಜ, ಆದರೆ ದೇಶವನ್ನು ಮಾರಿಲ್ಲ ಎಂದು ಗುಡುಗಿದ್ದಾರೆ.

ಗುಜರಾತಿನ ರಾಜ್ ಕೋಟ್ ನಲ್ಲಿ ಆಯೋಜಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಚಹ ಮಾರಿದ್ದೆ, ಮಾರುವವ ಕೂಡ ಹೌದು. ಆದರೆ ಪ್ರತಿಪಕ್ಷಗಳಂತೆ ಕೀಳುಮಟ್ಟಕ್ಕೆ ಇಳಿದಿಲ್ಲ ಹಾಗೂ ದೇಶವನ್ನು ಮಾರಿಲ್ಲ ಎಂದು ಟೀಕಿಸಿದ್ದಾರೆ.

ನಾನು ಬಡತನದ ಹಿನ್ನೆಲೆಯಿಂದ ಬಂದವನು ಎಂಬ ಕಾರಣಕ್ಕಾಗಿ ನನ್ನನ್ನು ಕಾಂಗ್ರೆಸ್ ಟೀಕಿಸುತ್ತದೆ. ನನ್ನನ್ನು ಕಂಡರೇನೇ ಅವರಿಗೆ ಆಗುವುದಿಲ್ಲ. ಒಬ್ಬ ಬಡವ ಪ್ರಧಾನಿಯಾದನಲ್ಲ ಎಂಬುದೇ ಕಾಂಗ್ರೆಸ್ಸಿನವರ ಹೊಟ್ಟೆ ಉರಿಯಲು ಕಾರಣವಾಗಿದೆ ಎಂದಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷ ಇಂಥ ಕೀಳುಮಟ್ಟಕ್ಕೆ ಇಳಿಯುತ್ತದೆ ಎಂದು ನಾನು ಭಾವಿಸಿರಲಿಲ್ಲ. ಕಾಂಗ್ರೆಸ್ಸಿನವರಿಗೆ ಯಾರಿಗೇ ಆಗಲಿ ಗೌರವ ಕೊಡುವುದು ಗೊತ್ತಿಲ್ಲ. ಪಡೆಯುವುದು ಸಹ ಗೊತ್ತಿಲ್ಲ. ಕಾಂಗ್ರೆಸ್ಸಿನ ಹಿಂದಿನ ತಲೆಮಾರಿನವರೂ ನನ್ನನ್ನು ಕೀಳಾಗಿ ಕಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರಿಟನ್ ಪ್ರಧಾನಿ ಥೆರೇಸಾ ಮೇ ಅವರ ಮುಂದೆ ಚಹಾ ಮಾರುವವ ಎಂಬಂತೆ ಬಿಂಬಿಸಿದ ಚಿತ್ರವನ್ನು ಕಾಂಗ್ರೆಸ್ ಯುವಘಟಕ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿತ್ತು. ಇದಕ್ಕೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search