• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಟೀ ಮಾರಿದ್ದು ನಿಜ, ದೇಶವನ್ನಲ್ಲ: ಕಾಂಗ್ರೆಸ್ಸಿಗೆ ಮೋದಿ ಟಾಂಗ್

TNN Correspondent Posted On November 28, 2017
0


0
Shares
  • Share On Facebook
  • Tweet It

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಾಯ್ ವಾಲಾ ಎಂದು ಟೀಕಿಸಿದ್ದ ಕಾಂಗ್ರೆಸ್ಸಿಗರಿಗೆ ಮೋದಿ ಅವರು ಟಾಂಗ್ ನೀಡಿದ್ದು, ನಾನು ಚಹ ಮಾರಿದ್ದು ನಿಜ, ಆದರೆ ದೇಶವನ್ನು ಮಾರಿಲ್ಲ ಎಂದು ಗುಡುಗಿದ್ದಾರೆ.

ಗುಜರಾತಿನ ರಾಜ್ ಕೋಟ್ ನಲ್ಲಿ ಆಯೋಜಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಚಹ ಮಾರಿದ್ದೆ, ಮಾರುವವ ಕೂಡ ಹೌದು. ಆದರೆ ಪ್ರತಿಪಕ್ಷಗಳಂತೆ ಕೀಳುಮಟ್ಟಕ್ಕೆ ಇಳಿದಿಲ್ಲ ಹಾಗೂ ದೇಶವನ್ನು ಮಾರಿಲ್ಲ ಎಂದು ಟೀಕಿಸಿದ್ದಾರೆ.

ನಾನು ಬಡತನದ ಹಿನ್ನೆಲೆಯಿಂದ ಬಂದವನು ಎಂಬ ಕಾರಣಕ್ಕಾಗಿ ನನ್ನನ್ನು ಕಾಂಗ್ರೆಸ್ ಟೀಕಿಸುತ್ತದೆ. ನನ್ನನ್ನು ಕಂಡರೇನೇ ಅವರಿಗೆ ಆಗುವುದಿಲ್ಲ. ಒಬ್ಬ ಬಡವ ಪ್ರಧಾನಿಯಾದನಲ್ಲ ಎಂಬುದೇ ಕಾಂಗ್ರೆಸ್ಸಿನವರ ಹೊಟ್ಟೆ ಉರಿಯಲು ಕಾರಣವಾಗಿದೆ ಎಂದಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷ ಇಂಥ ಕೀಳುಮಟ್ಟಕ್ಕೆ ಇಳಿಯುತ್ತದೆ ಎಂದು ನಾನು ಭಾವಿಸಿರಲಿಲ್ಲ. ಕಾಂಗ್ರೆಸ್ಸಿನವರಿಗೆ ಯಾರಿಗೇ ಆಗಲಿ ಗೌರವ ಕೊಡುವುದು ಗೊತ್ತಿಲ್ಲ. ಪಡೆಯುವುದು ಸಹ ಗೊತ್ತಿಲ್ಲ. ಕಾಂಗ್ರೆಸ್ಸಿನ ಹಿಂದಿನ ತಲೆಮಾರಿನವರೂ ನನ್ನನ್ನು ಕೀಳಾಗಿ ಕಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರಿಟನ್ ಪ್ರಧಾನಿ ಥೆರೇಸಾ ಮೇ ಅವರ ಮುಂದೆ ಚಹಾ ಮಾರುವವ ಎಂಬಂತೆ ಬಿಂಬಿಸಿದ ಚಿತ್ರವನ್ನು ಕಾಂಗ್ರೆಸ್ ಯುವಘಟಕ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿತ್ತು. ಇದಕ್ಕೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search