• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜಗತ್ತಿಗೇ ನಿಷ್ಠೆಯ ಪಾಠ ಹೇಳುವ ಕೇಜ್ರಿವಾಲ್ ಆಪ್ ಆದಾಯ ಘೋಷಿಸಿಲ್ಲ, ಐಟಿ ನೋಟಿಸ್

TNN Correspondent Posted On November 28, 2017
0


0
Shares
  • Share On Facebook
  • Tweet It

ದೆಹಲಿ: ಇಡೀ ದೇಶದ ವ್ಯವಸ್ಥೆಯೇ ಸರಿ ಇಲ್ಲ, ಪ್ರಧಾನಿ ಮೋದಿ ಅವರ ಕಾರ್ಯವೈಖರಿ ವಿಫಲ, ಕೇಂದ್ರ ಸರ್ಕಾರ ಮಾಡಿದ ತಪ್ಪು ಇದು, ಅದು ತಪ್ಪು, ಯಾರೂ ಸರಿಯಿಲ್ಲ ಎಂದು ಹೇಳುವುದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ನಿಸ್ಸೀಮರು.

ಇಂಥಾ ಕೇಜ್ರಿವಾಲರು ಆಮ್ ಆದ್ಮಿ ಪಕ್ಷದ 13.16 ಕೋಟಿ ರೂಪಾಯಿ ಆದಾಯವನ್ನೇ ಘೋಷಿಸಿರಲಿಲ್ಲ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಆದಾಯ ತೆರಿಗೆ ಕಾಯಿದೆ 156ರ ಅನ್ವಯ ಆದಾಯ ತೆರಿಗೆ ಇಲಾಖೆ ಆಮ್ ಆದ್ಮಿ ಪಕ್ಷದ ಎಲ್ಲ ಆದಾಯದ ದಾಖಲೆ ಪರಿಶೀಲಿಸಿದ್ದು, 30.67 ಕೋಟಿ ರೂಪಾಯಿ ತೆರಿಗೆ ನೋಟಿಸ್ ನೀಡಿದೆ.

2014-15, 2015-16ರಲ್ಲಿ ಆಪ್ ಪಕ್ಷದ ತೆರಿಗೆ ಸಹಿತ ಆದಾಯ 68.44 ಕೋಟಿ ರೂಪಾಯಿ. ಇಷ್ಟಾದರೂ ಆಮ್ ಆದ್ಮಿ ಪಕ್ಷದ ಅಕೌಂಟ್ ಪುಸ್ತಕದಲ್ಲಿ ದೇಣಿಗೆ ಆದಾಯದ ಕುರಿತು ಉಲ್ಲೇಖಿಸಿರಲಿಲ್ಲ ಎಂದು ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತೆರಿಗೆ ಅಧಿಕಾರಿಗಳು ಕಾನೂನಿನ ಅನ್ವಯ ದಾಖಲೆ ಪರಿಶೀಲಿಸಿ, 30 ಕೋಟಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಿದ್ದು, ಇದರಲ್ಲೂ ಮೋದಿ ಅವರನ್ನು ಟೀಕಿಸಲು ಹೊರಟ ಕೇಜ್ರಿವಾಲ್, ಇದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸಿದ್ದಾರೆ. ನೀವು ಅಕೌಂಟ್ ಪುಸ್ತಕದಲ್ಲಿ ಸರಿಯಾದ ಮಾಹಿತಿ ಇಟ್ಟಿದ್ದರೆ, ಆದಾಯ ಘೋಷಿಸಿದ್ದರೆ ಆದಾಯ ತೆರಿಗೆ ಇಲಾಖೆಯವರೇಕೆ ದಾಳಿ ಮಾಡುತ್ತಿದ್ದರು ಎಂಬುದು ಸಾಮಾನ್ಯರ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
Tulunadu News March 11, 2026
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
  • Popular Posts

    • 1
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 2
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search