• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಧರ್ಮದಿಂದ ಮುಕ್ತಿಗೊಳಿಸಲು ಎನ್ ಜಿಒಗಳಿಗೆ ಅಮೆರಿಕ ಘೋಷಿಸಿರುವ ಹಣ ಎಷ್ಟು ಗೊತ್ತಾ?

TNN Correspondent Posted On November 28, 2017
0


0
Shares
  • Share On Facebook
  • Tweet It

ವಾಷಿಂಗ್ಟನ್: ಭಾರತದಲ್ಲಿ ಧರ್ಮದಿಂದ ಮುಕ್ತಿಗೊಳಿಸುತ್ತೇವೆ, ದೇಶದಲ್ಲಿ ಧರ್ಮದ ಹೆಸರಲ್ಲಿ ನಡೆಯುತ್ತಿರುವ ಹಿಂಸೆ ನಿಲ್ಲಿಸುತ್ತೇವೆ ಎಂದು ಮೆಲ್ಲಗೆ ಕ್ರಿಸ್ತನ ಜಪ ಪಠಿಸುವ ಸರ್ಕಾರೇತರ ಸಂಸ್ಥೆ (ಎನ್ ಜಿಒ)ಗಳಿಗೆ ಅಮೆರಿಕ ಭಾರೀ ಹಣದ ಆಮಿಷ ನೀಡಿದೆ.

ಅದೂ ಎಷ್ಟು ಗೊತ್ತಾ? ಬರೋಬ್ಬರಿ 5 ಲಕ್ಷ ಡಾಲರ್. 3.22 ಕೋಟಿ ರುಪಾಯಿ!

ಅಮೆರಿಕದ ಕಾರ್ಮಿಕ ಹಾಗೂ ಮಾನವ ಹಕ್ಕುಗಳ ಸಚಿವಾಲಯ ಘೋಷಣೆ ಮಾಡಿದ್ದು, ಭಾರತದಲ್ಲಿ ಯಾವ ಸಂಸ್ಥೆ ಬಹು ಹಾಗೂ ಅಲ್ಪಸಂಖ್ಯಾತ ಜನರನ್ನು ಧರ್ಮದಿಂದ ಮುಕ್ತಿಗೊಳಿಸುತ್ತೇವೆ, ಹಿಂಸೆ ನಿಲ್ಲಿಸುತ್ತೇವೆ ಎಂದು ಕಾರ್ಯನಿರ್ವಹಿಸುವುದಾಗಿ ಘೋಷಣೆ ಹಾಗೂ ಆ ದಿಸೆಯಲ್ಲಿ ಕಾರ್ಯೋನ್ಮುಖವಾಗುತ್ತದೆಯೋ, ಅಂಥ ಸಂಸ್ಥೆಗಳಿಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡುವುದಾಗಿ ಘೋಷಿಸಿದೆ.

ಧರ್ಮದ ಹಿಂಸೆಯಿಂದ ಮುಕ್ತಿಗೊಳಿಸುವುದು ಹೇಗೆ, ಅದರಲ್ಲೂ ಅಲ್ಪಸಂಖ್ಯಾತರಲ್ಲಿರುವ ಒಡಕನ್ನು ಬಂಡವಾಳವಾಗಿಟ್ಟುಕೊಂಡು, ಅವರಿಗೆ ಶಿಕ್ಷಣ ನೀಡುವ ಆಮಿಷ ಒಡ್ಡಿ, ಮಾನವ ಹಕ್ಕುಗಳ ರಕ್ಷಣೆ ಹೆಸರಲ್ಲಿ ಯಾವ ಸಂಸ್ಥೆ ಕಾರ್ಯನಿರ್ವಹಿಸುವ ಮನವಿ ಸಲ್ಲಿಸಿದರೆ ಅವರಿಗೆ ಅಮೆರಿಕ ಹಣ ನೀಡಲಿದೆ ಎಂದು ತಿಳಿಸಿದೆ.

ಅಲ್ಲದೆ ಇದು ಭಾರತದಲ್ಲಿ ಕ್ರಿಶ್ಚಿಯನ್ನರ ಮತಾಂತರದ ದೊಡ್ಡ ಅಸ್ತ್ರವಾಗಿದೆ ಎಂದು ತಿಳಿದುಬಂದಿದೆ, ಧರ್ಮದಿಂದ ಮುಕ್ತಿಗೊಳಿಸುವ ಹೆಸರಲ್ಲಿ, ಶಾಂತಿ ಸ್ಥಾಪನೆ ಹೆಸರಲ್ಲಿ ಜನರನ್ನು ಕ್ರೈಸ್ತ ಧರ್ಮದತ್ತ ಸೆಳೆಯುವುದು ಇದರ ಉದ್ದೇಶವಾಗಿದೆ ಎಂಬ ಆರೋಪ ಕೇಳಿಬಂದಿವೆ.

ಅಷ್ಟೇ ಅಲ್ಲ, ಹಿಂದುಳಿದಿರುವ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಕಜಕಿಸ್ತಾನ, ಪಾಕಿಸ್ತಾನ, ಉಜ್ಬೇಕಿಸ್ತಾನ ಸೇರಿ ಸುಮಾರು 28 ರಾಷ್ಟ್ರಗಳ ಎನ್ ಜಿಒಗಳಿಗೂ ಅಮೆರಿಕ ಹೆಚ್ಚಿನ ಹಣ ನೀಡಿ ಮತಾಂತರ ಪರ್ವ ನಡೆಸಲು ಉತ್ತೇಜನ ನೀಡುತ್ತಿದೆ.

ಆದಾಗ್ಯೂ, ಭಾರತದಲ್ಲಿ ಎನ್ ಜಿಒ ಹೆಸರಲ್ಲಿ ಮತಾಂತರ ಮಾಡುವ, ವಿಷ ಬೀಜ ಬಿತ್ತುವ ನಕಲಿ ಸರ್ಕಾರೇತರ ಸಂಸ್ಥೆಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಅಸ್ತ್ರ ಹೂಡಿದ್ದು, ಅಮೆರಿಕದಿಂದ ಹಣ ಪಡೆದು ಕ್ರಿಸ್ತನ ಪ್ರಚಾರ ಮಾಡುವ ಇಂಥ ಸಂಸ್ಥೆಗಳನ್ನೂ ನಿಷೇಧಿಸಬೇಕು ಎಂಬ ಮಾತುಕೇಳಿಬಂದಿವೆ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search