• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಗೀತೆ ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ ನೀಡಿದ ಕಾರಣವೇ ಸ್ಫೂರ್ತಿದಾಯಕ, ಇದನ್ನೇ ಎಲ್ಲರೂ ಅನುಸರಿಸಬೇಕಲ್ಲವೇ?

TNN Correspondent Posted On November 28, 2017
0


0
Shares
  • Share On Facebook
  • Tweet It

ಜೈಪುರ: ಭವ್ಯ ಭಾರತದ ಕಣ ಕಣದ ಅಂತಶಕ್ತಿಯನ್ನು ಹೊರಹೊಮ್ಮಿಸುವ ರಾಷ್ಟ್ರಗೀತೆಯನ್ನು ಮಕ್ಕಳು ನಿತ್ಯ ಹಾಡುವುದರಿಂದ ನವ ಚೈತನ್ಯ ಮೂಡುತ್ತದೆ. ಆ ಗೀತೆ ಹಾಡುವುದರಿಂದ ದೇಶ ಭಕ್ತಿ ಹೊರಹೊಮ್ಮುತ್ತದೆ. ದೇಶದ ಶಕ್ತಿ, ಏಕತೆ, ಭಾವೈಕ್ಯತೆಯನ್ನು ಮೂಡಿಸುತ್ತದೆ. ಅದನ್ನು ಎಲ್ಲ ಶಾಲೆಗಳ ಮಕ್ಕಳು ನಿತ್ಯ ಪಠಿಸಬೇಕು. ಇದರಲ್ಲಿ ಅನರ್ಥ ಹುಡುಕುವುದರಲ್ಲಿ ಅರ್ಥವಿಲ್ಲ.

ರಾಷ್ಟ್ರಗೀತೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಕಡ್ಡಾಯ ಮಾಡಿದ್ದಕ್ಕೆ ರಾಜಸ್ಥಾನ ಸರ್ಕಾರ ನೀಡಿದ ಸ್ಫೂರ್ತಿದಾಯಕ ಕಾರಣ ಇದು. ಹೀಗೆ ಕಾರಣ ಸಹಿತ ರಾಷ್ಟ್ರಗೀತೆಯ ಮಹತ್ವ ತಿಳಿಸಿದರೇ, ಎಂತಹ ಅನಕ್ಷರಸ್ಥನು ರಾಷ್ಟ್ರಗೀತೆಯ ಪದ ಕಿವಿಗೆ ಬಿದ್ದರೆ ಎದೆ ಉಬ್ಬಿಸಿ ನಿಲ್ಲುವುದರಲ್ಲಿ ಅನುಮಾನವಿಲ್ಲ.

ಒಂದು ನಿಯಮ ಜಾರಿಗೆ ತಂದು ಕಾಟಾಚಾರಕ್ಕೆ ನೆಪ ಹೇಳಿ, ಜನರ ಮೇಲೋ, ವಿದ್ಯಾರ್ಥಿಗಳ ಮೇಲೋ ಹೇರುವ ಬದಲು ಸ್ಪಷ್ಟ ನಿರ್ಧಾರದೊಂದಿಗೆ, ಸಾಮಾನ್ಯರಿಗೆ ಏಕೆ ಈ ನಿಯಮ ಜಾರಿಗೆ ತರುತ್ತಿದ್ದೇವೆ ಎಂಬುದನ್ನು ತಿಳಿಸುವ ರಾಜಸ್ಥಾನ ಸರ್ಕಾರದ ಕಾರ್ಯ ಶ್ಲಾಘನೀಯ.

ರಾಜಸ್ಥಾನದ ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ರಾಜ್ಯದ ಎಲ್ಲ ವಸತಿ ನಿಲಯಗಳಲ್ಲಿ ಬೆಳಗ್ಗೆಯ ಪ್ರಾರ್ಥನೆಯಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಈಗಾಗಲೇ ಹಲವು ವಸತಿ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆಯನ್ನು ಹಾಡುವ ಪದ್ಧತಿ ಜಾರಿಯಲ್ಲಿದೆ ಎಂದು ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ನಿರ್ದೇಶಕ ಸುಮಂತ ಶರ್ಮಾ ಹೇಳುತ್ತಾರೆ. ಇನ್ನು ಮುಂದೆ ರಾಜಸ್ಥಾನದ 800 ವಸತಿ ಶಾಲೆಗಳ 40,000 ವಿದ್ಯಾರ್ಥಿಗಳಿಂದ ನಿತ್ಯ ಬೆಳಗ್ಗೆ 7 ಗಂಟೆಗೆ ರಾಷ್ಟ್ರಗೀತೆ ಅನುರಣಿಸಲಿದೆ.

ಅಕ್ಟೋಬರ್ ನಲ್ಲಿ ಜೈಪುರ ಮಹಾನಗರ ಪಾಲಿಕೆಯ ಸಿಬ್ಬಂದಿಗೆ ಬೆಳಗ್ಗೆ ರಾಷ್ಟ್ರಗೀತೆ ಮತ್ತು ಸಾಯಂಕಾಲ ವಂದೆ ಮಾತರಂ ಕಡ್ಡಾಯವಾಗಿ ಹಾಡಬೇಕು ಎಂಬ ನಿಯಮ ಜಾರಿ ತಂದಿತ್ತು. ಅಲ್ಲದೇ ಅಲ್ಲಿನ ಮೇಯರ್ ಅಶೋಕ್ ಲಾಹೋಟಿ ‘ವಂದೆ ಮಾತರಂ ಹಾಡಲು ಇಷ್ಟವಿಲ್ಲದವರು ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಹೇಳುವ ಮೂಲಕ ರಾಷ್ಟ್ರ ಭಕ್ತಿ ಸಾರುವ ಗೀತೆಗಳ ಮಹತ್ವ ತಿಳಿಸಿದ್ದರು.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search