• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಗೀತೆ ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ ನೀಡಿದ ಕಾರಣವೇ ಸ್ಫೂರ್ತಿದಾಯಕ, ಇದನ್ನೇ ಎಲ್ಲರೂ ಅನುಸರಿಸಬೇಕಲ್ಲವೇ?

TNN Correspondent Posted On November 28, 2017
0


0
Shares
  • Share On Facebook
  • Tweet It

ಜೈಪುರ: ಭವ್ಯ ಭಾರತದ ಕಣ ಕಣದ ಅಂತಶಕ್ತಿಯನ್ನು ಹೊರಹೊಮ್ಮಿಸುವ ರಾಷ್ಟ್ರಗೀತೆಯನ್ನು ಮಕ್ಕಳು ನಿತ್ಯ ಹಾಡುವುದರಿಂದ ನವ ಚೈತನ್ಯ ಮೂಡುತ್ತದೆ. ಆ ಗೀತೆ ಹಾಡುವುದರಿಂದ ದೇಶ ಭಕ್ತಿ ಹೊರಹೊಮ್ಮುತ್ತದೆ. ದೇಶದ ಶಕ್ತಿ, ಏಕತೆ, ಭಾವೈಕ್ಯತೆಯನ್ನು ಮೂಡಿಸುತ್ತದೆ. ಅದನ್ನು ಎಲ್ಲ ಶಾಲೆಗಳ ಮಕ್ಕಳು ನಿತ್ಯ ಪಠಿಸಬೇಕು. ಇದರಲ್ಲಿ ಅನರ್ಥ ಹುಡುಕುವುದರಲ್ಲಿ ಅರ್ಥವಿಲ್ಲ.

ರಾಷ್ಟ್ರಗೀತೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಕಡ್ಡಾಯ ಮಾಡಿದ್ದಕ್ಕೆ ರಾಜಸ್ಥಾನ ಸರ್ಕಾರ ನೀಡಿದ ಸ್ಫೂರ್ತಿದಾಯಕ ಕಾರಣ ಇದು. ಹೀಗೆ ಕಾರಣ ಸಹಿತ ರಾಷ್ಟ್ರಗೀತೆಯ ಮಹತ್ವ ತಿಳಿಸಿದರೇ, ಎಂತಹ ಅನಕ್ಷರಸ್ಥನು ರಾಷ್ಟ್ರಗೀತೆಯ ಪದ ಕಿವಿಗೆ ಬಿದ್ದರೆ ಎದೆ ಉಬ್ಬಿಸಿ ನಿಲ್ಲುವುದರಲ್ಲಿ ಅನುಮಾನವಿಲ್ಲ.

ಒಂದು ನಿಯಮ ಜಾರಿಗೆ ತಂದು ಕಾಟಾಚಾರಕ್ಕೆ ನೆಪ ಹೇಳಿ, ಜನರ ಮೇಲೋ, ವಿದ್ಯಾರ್ಥಿಗಳ ಮೇಲೋ ಹೇರುವ ಬದಲು ಸ್ಪಷ್ಟ ನಿರ್ಧಾರದೊಂದಿಗೆ, ಸಾಮಾನ್ಯರಿಗೆ ಏಕೆ ಈ ನಿಯಮ ಜಾರಿಗೆ ತರುತ್ತಿದ್ದೇವೆ ಎಂಬುದನ್ನು ತಿಳಿಸುವ ರಾಜಸ್ಥಾನ ಸರ್ಕಾರದ ಕಾರ್ಯ ಶ್ಲಾಘನೀಯ.

ರಾಜಸ್ಥಾನದ ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ರಾಜ್ಯದ ಎಲ್ಲ ವಸತಿ ನಿಲಯಗಳಲ್ಲಿ ಬೆಳಗ್ಗೆಯ ಪ್ರಾರ್ಥನೆಯಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಈಗಾಗಲೇ ಹಲವು ವಸತಿ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆಯನ್ನು ಹಾಡುವ ಪದ್ಧತಿ ಜಾರಿಯಲ್ಲಿದೆ ಎಂದು ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ನಿರ್ದೇಶಕ ಸುಮಂತ ಶರ್ಮಾ ಹೇಳುತ್ತಾರೆ. ಇನ್ನು ಮುಂದೆ ರಾಜಸ್ಥಾನದ 800 ವಸತಿ ಶಾಲೆಗಳ 40,000 ವಿದ್ಯಾರ್ಥಿಗಳಿಂದ ನಿತ್ಯ ಬೆಳಗ್ಗೆ 7 ಗಂಟೆಗೆ ರಾಷ್ಟ್ರಗೀತೆ ಅನುರಣಿಸಲಿದೆ.

ಅಕ್ಟೋಬರ್ ನಲ್ಲಿ ಜೈಪುರ ಮಹಾನಗರ ಪಾಲಿಕೆಯ ಸಿಬ್ಬಂದಿಗೆ ಬೆಳಗ್ಗೆ ರಾಷ್ಟ್ರಗೀತೆ ಮತ್ತು ಸಾಯಂಕಾಲ ವಂದೆ ಮಾತರಂ ಕಡ್ಡಾಯವಾಗಿ ಹಾಡಬೇಕು ಎಂಬ ನಿಯಮ ಜಾರಿ ತಂದಿತ್ತು. ಅಲ್ಲದೇ ಅಲ್ಲಿನ ಮೇಯರ್ ಅಶೋಕ್ ಲಾಹೋಟಿ ‘ವಂದೆ ಮಾತರಂ ಹಾಡಲು ಇಷ್ಟವಿಲ್ಲದವರು ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಹೇಳುವ ಮೂಲಕ ರಾಷ್ಟ್ರ ಭಕ್ತಿ ಸಾರುವ ಗೀತೆಗಳ ಮಹತ್ವ ತಿಳಿಸಿದ್ದರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search