• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಗೀತೆ ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ ನೀಡಿದ ಕಾರಣವೇ ಸ್ಫೂರ್ತಿದಾಯಕ, ಇದನ್ನೇ ಎಲ್ಲರೂ ಅನುಸರಿಸಬೇಕಲ್ಲವೇ?

TNN Correspondent Posted On November 28, 2017
0


0
Shares
  • Share On Facebook
  • Tweet It

ಜೈಪುರ: ಭವ್ಯ ಭಾರತದ ಕಣ ಕಣದ ಅಂತಶಕ್ತಿಯನ್ನು ಹೊರಹೊಮ್ಮಿಸುವ ರಾಷ್ಟ್ರಗೀತೆಯನ್ನು ಮಕ್ಕಳು ನಿತ್ಯ ಹಾಡುವುದರಿಂದ ನವ ಚೈತನ್ಯ ಮೂಡುತ್ತದೆ. ಆ ಗೀತೆ ಹಾಡುವುದರಿಂದ ದೇಶ ಭಕ್ತಿ ಹೊರಹೊಮ್ಮುತ್ತದೆ. ದೇಶದ ಶಕ್ತಿ, ಏಕತೆ, ಭಾವೈಕ್ಯತೆಯನ್ನು ಮೂಡಿಸುತ್ತದೆ. ಅದನ್ನು ಎಲ್ಲ ಶಾಲೆಗಳ ಮಕ್ಕಳು ನಿತ್ಯ ಪಠಿಸಬೇಕು. ಇದರಲ್ಲಿ ಅನರ್ಥ ಹುಡುಕುವುದರಲ್ಲಿ ಅರ್ಥವಿಲ್ಲ.

ರಾಷ್ಟ್ರಗೀತೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಕಡ್ಡಾಯ ಮಾಡಿದ್ದಕ್ಕೆ ರಾಜಸ್ಥಾನ ಸರ್ಕಾರ ನೀಡಿದ ಸ್ಫೂರ್ತಿದಾಯಕ ಕಾರಣ ಇದು. ಹೀಗೆ ಕಾರಣ ಸಹಿತ ರಾಷ್ಟ್ರಗೀತೆಯ ಮಹತ್ವ ತಿಳಿಸಿದರೇ, ಎಂತಹ ಅನಕ್ಷರಸ್ಥನು ರಾಷ್ಟ್ರಗೀತೆಯ ಪದ ಕಿವಿಗೆ ಬಿದ್ದರೆ ಎದೆ ಉಬ್ಬಿಸಿ ನಿಲ್ಲುವುದರಲ್ಲಿ ಅನುಮಾನವಿಲ್ಲ.

ಒಂದು ನಿಯಮ ಜಾರಿಗೆ ತಂದು ಕಾಟಾಚಾರಕ್ಕೆ ನೆಪ ಹೇಳಿ, ಜನರ ಮೇಲೋ, ವಿದ್ಯಾರ್ಥಿಗಳ ಮೇಲೋ ಹೇರುವ ಬದಲು ಸ್ಪಷ್ಟ ನಿರ್ಧಾರದೊಂದಿಗೆ, ಸಾಮಾನ್ಯರಿಗೆ ಏಕೆ ಈ ನಿಯಮ ಜಾರಿಗೆ ತರುತ್ತಿದ್ದೇವೆ ಎಂಬುದನ್ನು ತಿಳಿಸುವ ರಾಜಸ್ಥಾನ ಸರ್ಕಾರದ ಕಾರ್ಯ ಶ್ಲಾಘನೀಯ.

ರಾಜಸ್ಥಾನದ ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ರಾಜ್ಯದ ಎಲ್ಲ ವಸತಿ ನಿಲಯಗಳಲ್ಲಿ ಬೆಳಗ್ಗೆಯ ಪ್ರಾರ್ಥನೆಯಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಈಗಾಗಲೇ ಹಲವು ವಸತಿ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆಯನ್ನು ಹಾಡುವ ಪದ್ಧತಿ ಜಾರಿಯಲ್ಲಿದೆ ಎಂದು ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ನಿರ್ದೇಶಕ ಸುಮಂತ ಶರ್ಮಾ ಹೇಳುತ್ತಾರೆ. ಇನ್ನು ಮುಂದೆ ರಾಜಸ್ಥಾನದ 800 ವಸತಿ ಶಾಲೆಗಳ 40,000 ವಿದ್ಯಾರ್ಥಿಗಳಿಂದ ನಿತ್ಯ ಬೆಳಗ್ಗೆ 7 ಗಂಟೆಗೆ ರಾಷ್ಟ್ರಗೀತೆ ಅನುರಣಿಸಲಿದೆ.

ಅಕ್ಟೋಬರ್ ನಲ್ಲಿ ಜೈಪುರ ಮಹಾನಗರ ಪಾಲಿಕೆಯ ಸಿಬ್ಬಂದಿಗೆ ಬೆಳಗ್ಗೆ ರಾಷ್ಟ್ರಗೀತೆ ಮತ್ತು ಸಾಯಂಕಾಲ ವಂದೆ ಮಾತರಂ ಕಡ್ಡಾಯವಾಗಿ ಹಾಡಬೇಕು ಎಂಬ ನಿಯಮ ಜಾರಿ ತಂದಿತ್ತು. ಅಲ್ಲದೇ ಅಲ್ಲಿನ ಮೇಯರ್ ಅಶೋಕ್ ಲಾಹೋಟಿ ‘ವಂದೆ ಮಾತರಂ ಹಾಡಲು ಇಷ್ಟವಿಲ್ಲದವರು ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಹೇಳುವ ಮೂಲಕ ರಾಷ್ಟ್ರ ಭಕ್ತಿ ಸಾರುವ ಗೀತೆಗಳ ಮಹತ್ವ ತಿಳಿಸಿದ್ದರು.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search