• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಗೀತೆ ಕಡ್ಡಾಯ ಮಾಡಿದ ರಾಜಸ್ಥಾನ ಸರ್ಕಾರ ನೀಡಿದ ಕಾರಣವೇ ಸ್ಫೂರ್ತಿದಾಯಕ, ಇದನ್ನೇ ಎಲ್ಲರೂ ಅನುಸರಿಸಬೇಕಲ್ಲವೇ?

TNN Correspondent Posted On November 28, 2017
0


0
Shares
  • Share On Facebook
  • Tweet It

ಜೈಪುರ: ಭವ್ಯ ಭಾರತದ ಕಣ ಕಣದ ಅಂತಶಕ್ತಿಯನ್ನು ಹೊರಹೊಮ್ಮಿಸುವ ರಾಷ್ಟ್ರಗೀತೆಯನ್ನು ಮಕ್ಕಳು ನಿತ್ಯ ಹಾಡುವುದರಿಂದ ನವ ಚೈತನ್ಯ ಮೂಡುತ್ತದೆ. ಆ ಗೀತೆ ಹಾಡುವುದರಿಂದ ದೇಶ ಭಕ್ತಿ ಹೊರಹೊಮ್ಮುತ್ತದೆ. ದೇಶದ ಶಕ್ತಿ, ಏಕತೆ, ಭಾವೈಕ್ಯತೆಯನ್ನು ಮೂಡಿಸುತ್ತದೆ. ಅದನ್ನು ಎಲ್ಲ ಶಾಲೆಗಳ ಮಕ್ಕಳು ನಿತ್ಯ ಪಠಿಸಬೇಕು. ಇದರಲ್ಲಿ ಅನರ್ಥ ಹುಡುಕುವುದರಲ್ಲಿ ಅರ್ಥವಿಲ್ಲ.

ರಾಷ್ಟ್ರಗೀತೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಕಡ್ಡಾಯ ಮಾಡಿದ್ದಕ್ಕೆ ರಾಜಸ್ಥಾನ ಸರ್ಕಾರ ನೀಡಿದ ಸ್ಫೂರ್ತಿದಾಯಕ ಕಾರಣ ಇದು. ಹೀಗೆ ಕಾರಣ ಸಹಿತ ರಾಷ್ಟ್ರಗೀತೆಯ ಮಹತ್ವ ತಿಳಿಸಿದರೇ, ಎಂತಹ ಅನಕ್ಷರಸ್ಥನು ರಾಷ್ಟ್ರಗೀತೆಯ ಪದ ಕಿವಿಗೆ ಬಿದ್ದರೆ ಎದೆ ಉಬ್ಬಿಸಿ ನಿಲ್ಲುವುದರಲ್ಲಿ ಅನುಮಾನವಿಲ್ಲ.

ಒಂದು ನಿಯಮ ಜಾರಿಗೆ ತಂದು ಕಾಟಾಚಾರಕ್ಕೆ ನೆಪ ಹೇಳಿ, ಜನರ ಮೇಲೋ, ವಿದ್ಯಾರ್ಥಿಗಳ ಮೇಲೋ ಹೇರುವ ಬದಲು ಸ್ಪಷ್ಟ ನಿರ್ಧಾರದೊಂದಿಗೆ, ಸಾಮಾನ್ಯರಿಗೆ ಏಕೆ ಈ ನಿಯಮ ಜಾರಿಗೆ ತರುತ್ತಿದ್ದೇವೆ ಎಂಬುದನ್ನು ತಿಳಿಸುವ ರಾಜಸ್ಥಾನ ಸರ್ಕಾರದ ಕಾರ್ಯ ಶ್ಲಾಘನೀಯ.

ರಾಜಸ್ಥಾನದ ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ರಾಜ್ಯದ ಎಲ್ಲ ವಸತಿ ನಿಲಯಗಳಲ್ಲಿ ಬೆಳಗ್ಗೆಯ ಪ್ರಾರ್ಥನೆಯಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಈಗಾಗಲೇ ಹಲವು ವಸತಿ ಶಾಲೆಗಳಲ್ಲಿ ನಿತ್ಯ ರಾಷ್ಟ್ರಗೀತೆಯನ್ನು ಹಾಡುವ ಪದ್ಧತಿ ಜಾರಿಯಲ್ಲಿದೆ ಎಂದು ಸಮಾಜ ಕಲ್ಯಾಣ ಅಭಿವೃದ್ಧಿ ಇಲಾಖೆ ನಿರ್ದೇಶಕ ಸುಮಂತ ಶರ್ಮಾ ಹೇಳುತ್ತಾರೆ. ಇನ್ನು ಮುಂದೆ ರಾಜಸ್ಥಾನದ 800 ವಸತಿ ಶಾಲೆಗಳ 40,000 ವಿದ್ಯಾರ್ಥಿಗಳಿಂದ ನಿತ್ಯ ಬೆಳಗ್ಗೆ 7 ಗಂಟೆಗೆ ರಾಷ್ಟ್ರಗೀತೆ ಅನುರಣಿಸಲಿದೆ.

ಅಕ್ಟೋಬರ್ ನಲ್ಲಿ ಜೈಪುರ ಮಹಾನಗರ ಪಾಲಿಕೆಯ ಸಿಬ್ಬಂದಿಗೆ ಬೆಳಗ್ಗೆ ರಾಷ್ಟ್ರಗೀತೆ ಮತ್ತು ಸಾಯಂಕಾಲ ವಂದೆ ಮಾತರಂ ಕಡ್ಡಾಯವಾಗಿ ಹಾಡಬೇಕು ಎಂಬ ನಿಯಮ ಜಾರಿ ತಂದಿತ್ತು. ಅಲ್ಲದೇ ಅಲ್ಲಿನ ಮೇಯರ್ ಅಶೋಕ್ ಲಾಹೋಟಿ ‘ವಂದೆ ಮಾತರಂ ಹಾಡಲು ಇಷ್ಟವಿಲ್ಲದವರು ಪಾಕಿಸ್ತಾನಕ್ಕೆ ಹೋಗಬಹುದು’ ಎಂದು ಹೇಳುವ ಮೂಲಕ ರಾಷ್ಟ್ರ ಭಕ್ತಿ ಸಾರುವ ಗೀತೆಗಳ ಮಹತ್ವ ತಿಳಿಸಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search