• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2017ರಲ್ಲಿ ಕಾಶ್ಮೀರದ 193 ಉಗ್ರರಷ್ಟೇ ಅಲ್ಲ.. ಅರಣ್ಯದಲ್ಲಿ ಅವಿತಿದ್ದ 155 ಕೆಂಪು ಉಗ್ರರು ಮಟಾಶ್

TNN Correspondent Posted On November 28, 2017
0


0
Shares
  • Share On Facebook
  • Tweet It

 ದೆಹಲಿ: ಭಾರತಕ್ಕೆ ಕಂಟಕವಾಗಿರುವ ಮುಸ್ಲಿಂ ಭಯೋತ್ಪಾದಕರು ಮತ್ತು ಅರಣ್ಯದಲ್ಲಿ ಅವಿತು ದೇಶದ ವಿರುದ್ಧವೇ ಹುನ್ನಾರ ನಡೆಸುವ ಕೆಂಪು ಉಗ್ರರ ಪಾಲಿಗೆ ಕರಾಳ ವರ್ಷ 2017. ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ರಕ್ಷಣೆಗೆ ಅಡ್ಡಗಾಲಾಗಿರುವ ಸಂಘಟನೆಗಳನ್ನು ಸದೆಬಡೆಯುವ ಕಾರ್ಯ ನಿರಂತರವಾಗಿ ಮುಂದುವರಿಸಿದೆ. ಅದಕ್ಕೆ ಸಾಕ್ಷಿಯಾಗಿ 2017ರಲ್ಲೇ ಕಾಶ್ಮೀರದಲ್ಲಿ 193 ಉಗ್ರರನ್ನು ಸೇನೆ ಹತ್ಯೆ ಮಾಡಿದ್ದರೆ. ಇದೇ ವರ್ಷ 155 ನಕ್ಸಲರನ್ನು ನರಕಕ್ಕೆ ಕಳುಹಿಸಿದೆ.

ಇದನ್ನು ಯಾವುದೋ ಸರ್ಕಾರಿ ಸಂಸ್ಥೆಯೋ ಅಥವಾ ಸರಕಾರೇತರ ಸಂಸ್ಥೆ ಹೇಳುತ್ತಿಲ್ಲ. ಮಾವೋವಾದಿಗಳೇ ತಮ್ಮ ವಾರ್ಷಿಕ ವರದಿಯಲ್ಲಿ ಡಿಸೆಂಬರ್ 2 ರವೇಳೆಗೆ 155 ಕೆಂಪು ಉಗ್ರರ ಹತ್ಯೆಯಾಗಿದ್ದಾರೆ ಎಂದು ಕಣ್ಣಿರಿಟ್ಟಿದ್ದಾರೆ. ಪಿಪಲ್ ಲಿಬರೇಷನ್ ಗೋರಿಲ್ಲಾ ಆರ್ಮಿ ಈ ವರದಿಯನ್ನು ಸಿಪಿಐಎಂಎಲ್ ಸಂಸ್ಥಾಪನೆ ದಿನವಾದ ಡಿಸೆಂಬರ್ 2ರಂದು ಬಿಡುಗಡೆ ಮಾಡಿದೆ.

ಮಾವೋವಾದಿಗಳ ದಕ್ಷಿಣ ವಲಯ ಬ್ಯೂರೋ ವರದಿ ಪ್ರಕಾರ ‘ದಂಡಕಾರಣ್ಯ ಪ್ರದೇಶ ಒಂದರಲ್ಲೇ 115 ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಈ ದಂಡಕಾರಣ್ಯ ಆಂಧ್ರ ಪ್ರದೇಶ, ಮಹಾರಾಷ್ಟ್ರ, ಓಡಿಶಾ, ತೆಲಂಗಾಣ ಮತ್ತು ಛತ್ತಿಸಗಡ್ ಪ್ರದೇಶವನ್ನು ಒಳಗೊಂಡಿದೆ. ಇನ್ನು 45 ಉಗ್ರರು ಛತ್ತಿಸಗಡ್ ರಾಜ್ಯದಲ್ಲಿ ಸೈನಿಕ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದಾರೆ. ಇದರಲ್ಲಿ 30 ಮಹಿಳೆಯರು ಇದ್ದಾರೆ ಎಂಬುದು ಗಮನಾರ್ಹ.

ಮಾವೋವಾದಿಗಳ ಕೇಂದ್ರೀಯ ಮಂಡಳಿ ಸದಸ್ಯ ನಾರಾಯಣ ಸನ್ಯಾಲ್ ಮತ್ತು ಆತನ ಸಹಚರ ಕುಪ್ಪು ಡಿಯೋರಾಜ್ ಹತ್ಯೆಯಾದವರಲ್ಲಿ ಪ್ರಮುಖರು.

ಕೆಂಪು ಉಗ್ರರ ಗುಂಡಿಗೆ ಸೈನಿಕರು, ಸಾರ್ವಜನಿಕರೂ ಬಲಿ

ಗೃಹ ಇಲಾಖೆ ಮಾಹಿತಿ ಪ್ರಕಾರ 2017ರ ಅಕ್ಟೋಬರ್ 31 ರ ಹೊತ್ತಿಗೆ 70 ಸೈನಿಕರು ಮಾವೋವಾದಿಗಳ ಗುಂಡಿಗೆ ಬಲಿಯಾಗಿದ್ದರೆ. 122 ಸೈನಿಕರು ಗಾಯಾಳುಗಳಾಗಿದ್ದಾರೆ. ಅಲ್ಲದೇ 156 ಮುಗ್ದ ಸಾರ್ವಜನಿಕರು ನಕ್ಸಲರ ಗುಂಡಿಗೆ ಬಲಿಯಾಗಿದ್ದಾರೆ. ದೇಶದ 10 ರಾಜ್ಯಗಳ 106 ಜಿಲ್ಲೆಗಳಲ್ಲಿ ನಕ್ಸಲರು ಸಕ್ರಿಯವಾಗಿದ್ದಾರೆ. ಈ ಎಲ್ಲ ಜಿಲ್ಲೆಗಳನ್ನು ಹೊಂದಿರುವ ರೆಡ್ ಕಾರಿಡಾರ್ ರೂಪಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಗೃಹ ಇಲಾಖೆ ತಿಳಿಸಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search