• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ತೆಗಳಿದರೇನು, ಇವಾಂಕಾ ಟ್ರಾಂಪ್ ಚಾಯ್ ವಾಲಾರನ್ನು ಹೊಗಳಿದರಲ್ಲ!

TNN Correspondent Posted On November 28, 2017
0


0
Shares
  • Share On Facebook
  • Tweet It

ಹೈದರಾಬಾದ್: ಯಾವ ಡೊನಾಲ್ಡ್ ಟ್ರಂಪ್ ಎದುರು ಮೋದಿ ಅವರ ವ್ಯಕಿತ್ವವನ್ನು ಕುಂದಿಸಲು ಕಾಂಗ್ರೆಸ್ ಕೀಳುಮಟ್ಟಕ್ಕೆ ಇಳಿಯಿತೋ, ಅದೇ ಡೊನಾಲ್ಡ್ ಟ್ರಂಪ್ ಮಗಳು ಇಂದು ಮೋದಿ ಅವರನ್ನು ಹೊಗಳಿದ್ದಾರೆ.

ಯುವ ಕಾಂಗ್ರೆಸ್ ಕಳೆದ ವಾರ ಮೋದಿ ಅವರ ಇಂಗ್ಲಿಷ್ ಪ್ರಶ್ನಿಸಿ, ಜಾಗತಿಕ ನಾಯಕರ ಎದುರು ಚಾಯ್ ವಾಲಾ ಎಂದು ಬಿಂಬಿಸಲು ಹೊರಟು ಟೀಕೆಗೆ ಗುರಿಯಾಗಿತ್ತು. ಈಗ ಇವಾಂಕಾ ಟ್ರಂಪ್ ಕಾಂಗ್ರೆಸ್ಸಿನ ಗಾಯಕ್ಕೆ ಉಪ್ಪು ಸುರಿದ್ದಿದ್ದು, “ಟೀ ಮಾರುವ ವ್ಯಕ್ತಿಯೊಬ್ಬ ದೇಶದ ಪ್ರಧಾನಿಯಾಗಿದ್ದು ಹೆಮ್ಮೆಯ ವಿಚಾರ” ಎಂದಿದ್ದಾರೆ.

ಹೈದರಾಬಾದಿನಲ್ಲಿ ನಡೆಯುತ್ತಿರುವ ಜಾಗತಿಕ ವಾಣಿಜ್ಯೋದ್ಯಮದಲ್ಲಿ ಪಾಲ್ಗೊಂಡು, ನರೇಂದ್ರ ಮೋದಿ ಅವರ ಆಡಳಿತ ಮೆಚ್ಚುವ ಜತೆಗೆ, ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಸಹ ಮೆಚ್ಚುಗೆ ವ್ಯಕ್ತಪಡಿಸಿದ ಇವಾಂಕಾ, “ನಿಜಕ್ಕೂ ನಿಮ್ಮ ಬೆಳವಣಿಗೆ ನೋಡಿದರೆ ಖುಷಿಯಾಗುತ್ತದೆ. ಒಬ್ಬ ಚಹ ಮಾರುವ ವ್ಯಕ್ತಿ ದೇಶದ ಪ್ರಧಾನಿಯಾಗುವುದು ಹೆಮ್ಮೆಯ ವಿಚಾರ. ಇದರಲ್ಲೇ ಮೋದಿ ಅವರ ರೂಪಾಂತರ ಶಕ್ತಿ ಅಡಗಿದೆ. ಇದು ದೇಶದ ಅಭಿವೃದ್ಧಿಗೂ ಸಹಕಾರಿ” ಎಂದು ಶ್ಲಾಘಿಸಿದ್ದಾರೆ.

ಅಲ್ಲದೆ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಾರೆ. ಅಭಿವೃದ್ಧಿಗೂ ಅಷ್ಟೇ ಆದ್ಯತೆ ನೀಡಿದ್ದಾರೆ. ಈ ಎಲ್ಲ ದೃಷ್ಟಿಯಿಂದ ಭಾರತ ಜಾಗತಿಕ ಮಟ್ಟದಲ್ಲಿ ಉಚ್ಛ್ರಾಯ ಸ್ಥಿತಿ ತಲುಪುವುದರಲ್ಲಿ ಎರಡು ಮಾತಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಶೃಂಗಸಭೆಯಲ್ಲಿ ಇವಾಂಕಾ ಟ್ರಂಪ್ ನರೇಂದ್ರ ಮೋದಿ ಅವರ ಶಕ್ತಿ ಅರಿತು ಮೆಚ್ಚುಗೆ ಸೂಚಿಸಿರುವುದು ಹೆಮ್ಮೆಯ ವಿಚಾರದ ಜತೆಗೆ ಮೋದಿ ಅವರನ್ನು ಟೀಕಿಸುವವರಿಗೂ ಒಂದು ಪಾಠ ಹೇಳಿದ್ದಂತೂ ಸುಳ್ಳಲ್ಲ. ಅಷ್ಟಕ್ಕೂ, ಇಡೀ ವಿಶ್ವವೇ ಮೋದಿ ಅವರನ್ನು ಹೊಗಳುತ್ತಿರಬೇಕಾದರೆ, ನಮ್ಮಲ್ಲೇ ಇದ್ದು ಅವರನ್ನು ಕೀಳಾಗಿ ಚಿತ್ರಿಸುವವರಿಗೆ ಏನೆನ್ನಬೇಕೋ?

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search