• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ತೆಗಳಿದರೇನು, ಇವಾಂಕಾ ಟ್ರಾಂಪ್ ಚಾಯ್ ವಾಲಾರನ್ನು ಹೊಗಳಿದರಲ್ಲ!

TNN Correspondent Posted On November 28, 2017
0


0
Shares
  • Share On Facebook
  • Tweet It

ಹೈದರಾಬಾದ್: ಯಾವ ಡೊನಾಲ್ಡ್ ಟ್ರಂಪ್ ಎದುರು ಮೋದಿ ಅವರ ವ್ಯಕಿತ್ವವನ್ನು ಕುಂದಿಸಲು ಕಾಂಗ್ರೆಸ್ ಕೀಳುಮಟ್ಟಕ್ಕೆ ಇಳಿಯಿತೋ, ಅದೇ ಡೊನಾಲ್ಡ್ ಟ್ರಂಪ್ ಮಗಳು ಇಂದು ಮೋದಿ ಅವರನ್ನು ಹೊಗಳಿದ್ದಾರೆ.

ಯುವ ಕಾಂಗ್ರೆಸ್ ಕಳೆದ ವಾರ ಮೋದಿ ಅವರ ಇಂಗ್ಲಿಷ್ ಪ್ರಶ್ನಿಸಿ, ಜಾಗತಿಕ ನಾಯಕರ ಎದುರು ಚಾಯ್ ವಾಲಾ ಎಂದು ಬಿಂಬಿಸಲು ಹೊರಟು ಟೀಕೆಗೆ ಗುರಿಯಾಗಿತ್ತು. ಈಗ ಇವಾಂಕಾ ಟ್ರಂಪ್ ಕಾಂಗ್ರೆಸ್ಸಿನ ಗಾಯಕ್ಕೆ ಉಪ್ಪು ಸುರಿದ್ದಿದ್ದು, “ಟೀ ಮಾರುವ ವ್ಯಕ್ತಿಯೊಬ್ಬ ದೇಶದ ಪ್ರಧಾನಿಯಾಗಿದ್ದು ಹೆಮ್ಮೆಯ ವಿಚಾರ” ಎಂದಿದ್ದಾರೆ.

ಹೈದರಾಬಾದಿನಲ್ಲಿ ನಡೆಯುತ್ತಿರುವ ಜಾಗತಿಕ ವಾಣಿಜ್ಯೋದ್ಯಮದಲ್ಲಿ ಪಾಲ್ಗೊಂಡು, ನರೇಂದ್ರ ಮೋದಿ ಅವರ ಆಡಳಿತ ಮೆಚ್ಚುವ ಜತೆಗೆ, ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಸಹ ಮೆಚ್ಚುಗೆ ವ್ಯಕ್ತಪಡಿಸಿದ ಇವಾಂಕಾ, “ನಿಜಕ್ಕೂ ನಿಮ್ಮ ಬೆಳವಣಿಗೆ ನೋಡಿದರೆ ಖುಷಿಯಾಗುತ್ತದೆ. ಒಬ್ಬ ಚಹ ಮಾರುವ ವ್ಯಕ್ತಿ ದೇಶದ ಪ್ರಧಾನಿಯಾಗುವುದು ಹೆಮ್ಮೆಯ ವಿಚಾರ. ಇದರಲ್ಲೇ ಮೋದಿ ಅವರ ರೂಪಾಂತರ ಶಕ್ತಿ ಅಡಗಿದೆ. ಇದು ದೇಶದ ಅಭಿವೃದ್ಧಿಗೂ ಸಹಕಾರಿ” ಎಂದು ಶ್ಲಾಘಿಸಿದ್ದಾರೆ.

ಅಲ್ಲದೆ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಾರೆ. ಅಭಿವೃದ್ಧಿಗೂ ಅಷ್ಟೇ ಆದ್ಯತೆ ನೀಡಿದ್ದಾರೆ. ಈ ಎಲ್ಲ ದೃಷ್ಟಿಯಿಂದ ಭಾರತ ಜಾಗತಿಕ ಮಟ್ಟದಲ್ಲಿ ಉಚ್ಛ್ರಾಯ ಸ್ಥಿತಿ ತಲುಪುವುದರಲ್ಲಿ ಎರಡು ಮಾತಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಶೃಂಗಸಭೆಯಲ್ಲಿ ಇವಾಂಕಾ ಟ್ರಂಪ್ ನರೇಂದ್ರ ಮೋದಿ ಅವರ ಶಕ್ತಿ ಅರಿತು ಮೆಚ್ಚುಗೆ ಸೂಚಿಸಿರುವುದು ಹೆಮ್ಮೆಯ ವಿಚಾರದ ಜತೆಗೆ ಮೋದಿ ಅವರನ್ನು ಟೀಕಿಸುವವರಿಗೂ ಒಂದು ಪಾಠ ಹೇಳಿದ್ದಂತೂ ಸುಳ್ಳಲ್ಲ. ಅಷ್ಟಕ್ಕೂ, ಇಡೀ ವಿಶ್ವವೇ ಮೋದಿ ಅವರನ್ನು ಹೊಗಳುತ್ತಿರಬೇಕಾದರೆ, ನಮ್ಮಲ್ಲೇ ಇದ್ದು ಅವರನ್ನು ಕೀಳಾಗಿ ಚಿತ್ರಿಸುವವರಿಗೆ ಏನೆನ್ನಬೇಕೋ?

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search