• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ತೆಗಳಿದರೇನು, ಇವಾಂಕಾ ಟ್ರಾಂಪ್ ಚಾಯ್ ವಾಲಾರನ್ನು ಹೊಗಳಿದರಲ್ಲ!

TNN Correspondent Posted On November 28, 2017
0


0
Shares
  • Share On Facebook
  • Tweet It

ಹೈದರಾಬಾದ್: ಯಾವ ಡೊನಾಲ್ಡ್ ಟ್ರಂಪ್ ಎದುರು ಮೋದಿ ಅವರ ವ್ಯಕಿತ್ವವನ್ನು ಕುಂದಿಸಲು ಕಾಂಗ್ರೆಸ್ ಕೀಳುಮಟ್ಟಕ್ಕೆ ಇಳಿಯಿತೋ, ಅದೇ ಡೊನಾಲ್ಡ್ ಟ್ರಂಪ್ ಮಗಳು ಇಂದು ಮೋದಿ ಅವರನ್ನು ಹೊಗಳಿದ್ದಾರೆ.

ಯುವ ಕಾಂಗ್ರೆಸ್ ಕಳೆದ ವಾರ ಮೋದಿ ಅವರ ಇಂಗ್ಲಿಷ್ ಪ್ರಶ್ನಿಸಿ, ಜಾಗತಿಕ ನಾಯಕರ ಎದುರು ಚಾಯ್ ವಾಲಾ ಎಂದು ಬಿಂಬಿಸಲು ಹೊರಟು ಟೀಕೆಗೆ ಗುರಿಯಾಗಿತ್ತು. ಈಗ ಇವಾಂಕಾ ಟ್ರಂಪ್ ಕಾಂಗ್ರೆಸ್ಸಿನ ಗಾಯಕ್ಕೆ ಉಪ್ಪು ಸುರಿದ್ದಿದ್ದು, “ಟೀ ಮಾರುವ ವ್ಯಕ್ತಿಯೊಬ್ಬ ದೇಶದ ಪ್ರಧಾನಿಯಾಗಿದ್ದು ಹೆಮ್ಮೆಯ ವಿಚಾರ” ಎಂದಿದ್ದಾರೆ.

ಹೈದರಾಬಾದಿನಲ್ಲಿ ನಡೆಯುತ್ತಿರುವ ಜಾಗತಿಕ ವಾಣಿಜ್ಯೋದ್ಯಮದಲ್ಲಿ ಪಾಲ್ಗೊಂಡು, ನರೇಂದ್ರ ಮೋದಿ ಅವರ ಆಡಳಿತ ಮೆಚ್ಚುವ ಜತೆಗೆ, ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಸಹ ಮೆಚ್ಚುಗೆ ವ್ಯಕ್ತಪಡಿಸಿದ ಇವಾಂಕಾ, “ನಿಜಕ್ಕೂ ನಿಮ್ಮ ಬೆಳವಣಿಗೆ ನೋಡಿದರೆ ಖುಷಿಯಾಗುತ್ತದೆ. ಒಬ್ಬ ಚಹ ಮಾರುವ ವ್ಯಕ್ತಿ ದೇಶದ ಪ್ರಧಾನಿಯಾಗುವುದು ಹೆಮ್ಮೆಯ ವಿಚಾರ. ಇದರಲ್ಲೇ ಮೋದಿ ಅವರ ರೂಪಾಂತರ ಶಕ್ತಿ ಅಡಗಿದೆ. ಇದು ದೇಶದ ಅಭಿವೃದ್ಧಿಗೂ ಸಹಕಾರಿ” ಎಂದು ಶ್ಲಾಘಿಸಿದ್ದಾರೆ.

ಅಲ್ಲದೆ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಾರೆ. ಅಭಿವೃದ್ಧಿಗೂ ಅಷ್ಟೇ ಆದ್ಯತೆ ನೀಡಿದ್ದಾರೆ. ಈ ಎಲ್ಲ ದೃಷ್ಟಿಯಿಂದ ಭಾರತ ಜಾಗತಿಕ ಮಟ್ಟದಲ್ಲಿ ಉಚ್ಛ್ರಾಯ ಸ್ಥಿತಿ ತಲುಪುವುದರಲ್ಲಿ ಎರಡು ಮಾತಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಈ ಶೃಂಗಸಭೆಯಲ್ಲಿ ಇವಾಂಕಾ ಟ್ರಂಪ್ ನರೇಂದ್ರ ಮೋದಿ ಅವರ ಶಕ್ತಿ ಅರಿತು ಮೆಚ್ಚುಗೆ ಸೂಚಿಸಿರುವುದು ಹೆಮ್ಮೆಯ ವಿಚಾರದ ಜತೆಗೆ ಮೋದಿ ಅವರನ್ನು ಟೀಕಿಸುವವರಿಗೂ ಒಂದು ಪಾಠ ಹೇಳಿದ್ದಂತೂ ಸುಳ್ಳಲ್ಲ. ಅಷ್ಟಕ್ಕೂ, ಇಡೀ ವಿಶ್ವವೇ ಮೋದಿ ಅವರನ್ನು ಹೊಗಳುತ್ತಿರಬೇಕಾದರೆ, ನಮ್ಮಲ್ಲೇ ಇದ್ದು ಅವರನ್ನು ಕೀಳಾಗಿ ಚಿತ್ರಿಸುವವರಿಗೆ ಏನೆನ್ನಬೇಕೋ?

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search