• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನ್ಯಾಯಮೂರ್ತಿ ಸಾವು ಸಹಜ ಎಂದ ಕುಟುಂಬ, ಶಾ ವಿರೋಧಿಗಳಿಗೊಂದು ಶಾಕ್

TNN Correspondent Posted On November 29, 2017


  • Share On Facebook
  • Tweet It

ಮುಂಬೈ: ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಆರೋಪ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರು ತಳುಕು ಬೀಳುತ್ತಲೇ ಧುಲ್ಯೋ ಎಂದು ಎದ್ದು ನಿಂತ ಎಡಬಿಡಂಗಿಗಳು, ಕಾಂಗಿಗಳು ಅಮಿತ್ ಶಾ ಅವರೇ ಎನ್ ಕೌಂಟರ್ ಮಾಡಿದ್ದಾರೆ ಎಂಬ ರೀತಿ ವರ್ತಿಸಿದರು. ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬ್ರಿಜ್ ಮೋಹನ್ ಲೋಯಾ ನಿಧನರಾದಾಗಲಂತೂ ಶಾ ಅವರೇ ಕೊಲೆ ಮಾಡಿದ್ದರು ಎಂಬ ರೀತಿ ವರ್ತಿಸಿದ್ದರು.

ಆದರೆ ನ್ಯಾಯಮೂರ್ತಿ ಸಾವಿನ ಪ್ರಕರಣದಲ್ಲಿ ಅಮಿತ್ ಶಾ ಪಾತ್ರ ಏನೂ ಇಲ್ಲ ಎಂಬುದು ಸಾಬೀತಾಗುವ ಕಾಲ ಸನ್ನಿಹಿತವಾಗಿದ್ದು, ನ್ಯಾಯಮೂರ್ತಿ ಸಾವಿನ ಕುರಿತು ಯಾವುದೇ ಅನುಮಾನ ಇಲ್ಲ. ಅವರದ್ದು ಸಹಜ ಸಾವು ನ್ಯಾಯಮೂರ್ತಿ ಕುಟುಂಬದವರೇ ಹೇಳಿದ್ದಾರೆ ಎಂದು ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹೇಳಿದ್ದಾರೆ.

ನನ್ನ ತಂದೆ ನಾಗಪುರದಲ್ಲಿ ಸಹ ನ್ಯಾಯಮೂರ್ತಿಯೊಬ್ಬರ ಮಗಳ ಮದುವೆಗೆ ಹೋಗುವಾಗ ಮೃತಪಟ್ಟಿದ್ದಾರೆ. ತಂದೆ ಮೃತಪಟ್ಟ ನ.30ರಂದು ಅವರ ಜತೆಗಿದ್ದ ನ್ಯಾಯಮೂರ್ತಿಗಳ ಮೇಲೆ ನಂಬಿಕೆ ಇದೆ. ನನ್ನ ತಂದೆಯದ್ದು ಸಹಜ ಸಾವು ಎಂದು ಬ್ರಿಜ್ ಮೋಹನ್ ಲೋಯಾ ಪುತ್ರ ಅನುಜ್ ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಅವರಿಗೆ ಪತ್ರ ಸಲ್ಲಿಸಿದ್ದಾರೆ.

ಅಲ್ಲದೆ ತಂದೆಯ ಸಾವಿನ ಕುರಿತು ತನಿಖೆ ನಡೆಸಿದ ತಂಡದ ಸಮಗ್ರತೆ ಬಗ್ಗೆ ಯಾವುದೇ ಅನುಮಾನ ಇಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

2014ರಲ್ಲಿ ಬ್ರಿಜ್ ಮೋಹನ್ ಲೋಹಿಯಾ ಮೃತಪಟ್ಟಾಗ, ಅವರು ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸಾವಿನ ಹಿಂದೆ ಅಮಿತ್ ಶಾ ಸೇರಿ ಹಲವರ ಕೈವಾಡ ಇದೆ ಎಂಬ ಆರೋಪ ಕೇಳಿಬಂದಿದ್ದವು. ಇದೇ ಆರೋಪದ ಮೇಲೆ ಅಮಿತ್ ಶಾ ವಿರುದ್ಧ ಮನಬಂದಂತೆ ಟೀಕಿಸಲಾಗಿತ್ತು. ಈಗ ನ್ಯಾಯಮೂರ್ತಿ ಸಹಜವಾಗಿಯೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರೇ ನ್ಯಾಯಾಲಯಕ್ಕೆ ತಿಳಿಸಿದ್ದು, ಪ್ರಕರಣದಲ್ಲಿ ಅಮಿತ್ ಶಾ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search