• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನ್ಯಾಯಮೂರ್ತಿ ಸಾವು ಸಹಜ ಎಂದ ಕುಟುಂಬ, ಶಾ ವಿರೋಧಿಗಳಿಗೊಂದು ಶಾಕ್

TNN Correspondent Posted On November 29, 2017
0


0
Shares
  • Share On Facebook
  • Tweet It

ಮುಂಬೈ: ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಆರೋಪ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರು ತಳುಕು ಬೀಳುತ್ತಲೇ ಧುಲ್ಯೋ ಎಂದು ಎದ್ದು ನಿಂತ ಎಡಬಿಡಂಗಿಗಳು, ಕಾಂಗಿಗಳು ಅಮಿತ್ ಶಾ ಅವರೇ ಎನ್ ಕೌಂಟರ್ ಮಾಡಿದ್ದಾರೆ ಎಂಬ ರೀತಿ ವರ್ತಿಸಿದರು. ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬ್ರಿಜ್ ಮೋಹನ್ ಲೋಯಾ ನಿಧನರಾದಾಗಲಂತೂ ಶಾ ಅವರೇ ಕೊಲೆ ಮಾಡಿದ್ದರು ಎಂಬ ರೀತಿ ವರ್ತಿಸಿದ್ದರು.

ಆದರೆ ನ್ಯಾಯಮೂರ್ತಿ ಸಾವಿನ ಪ್ರಕರಣದಲ್ಲಿ ಅಮಿತ್ ಶಾ ಪಾತ್ರ ಏನೂ ಇಲ್ಲ ಎಂಬುದು ಸಾಬೀತಾಗುವ ಕಾಲ ಸನ್ನಿಹಿತವಾಗಿದ್ದು, ನ್ಯಾಯಮೂರ್ತಿ ಸಾವಿನ ಕುರಿತು ಯಾವುದೇ ಅನುಮಾನ ಇಲ್ಲ. ಅವರದ್ದು ಸಹಜ ಸಾವು ನ್ಯಾಯಮೂರ್ತಿ ಕುಟುಂಬದವರೇ ಹೇಳಿದ್ದಾರೆ ಎಂದು ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹೇಳಿದ್ದಾರೆ.

ನನ್ನ ತಂದೆ ನಾಗಪುರದಲ್ಲಿ ಸಹ ನ್ಯಾಯಮೂರ್ತಿಯೊಬ್ಬರ ಮಗಳ ಮದುವೆಗೆ ಹೋಗುವಾಗ ಮೃತಪಟ್ಟಿದ್ದಾರೆ. ತಂದೆ ಮೃತಪಟ್ಟ ನ.30ರಂದು ಅವರ ಜತೆಗಿದ್ದ ನ್ಯಾಯಮೂರ್ತಿಗಳ ಮೇಲೆ ನಂಬಿಕೆ ಇದೆ. ನನ್ನ ತಂದೆಯದ್ದು ಸಹಜ ಸಾವು ಎಂದು ಬ್ರಿಜ್ ಮೋಹನ್ ಲೋಯಾ ಪುತ್ರ ಅನುಜ್ ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಅವರಿಗೆ ಪತ್ರ ಸಲ್ಲಿಸಿದ್ದಾರೆ.

ಅಲ್ಲದೆ ತಂದೆಯ ಸಾವಿನ ಕುರಿತು ತನಿಖೆ ನಡೆಸಿದ ತಂಡದ ಸಮಗ್ರತೆ ಬಗ್ಗೆ ಯಾವುದೇ ಅನುಮಾನ ಇಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

2014ರಲ್ಲಿ ಬ್ರಿಜ್ ಮೋಹನ್ ಲೋಹಿಯಾ ಮೃತಪಟ್ಟಾಗ, ಅವರು ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸಾವಿನ ಹಿಂದೆ ಅಮಿತ್ ಶಾ ಸೇರಿ ಹಲವರ ಕೈವಾಡ ಇದೆ ಎಂಬ ಆರೋಪ ಕೇಳಿಬಂದಿದ್ದವು. ಇದೇ ಆರೋಪದ ಮೇಲೆ ಅಮಿತ್ ಶಾ ವಿರುದ್ಧ ಮನಬಂದಂತೆ ಟೀಕಿಸಲಾಗಿತ್ತು. ಈಗ ನ್ಯಾಯಮೂರ್ತಿ ಸಹಜವಾಗಿಯೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರೇ ನ್ಯಾಯಾಲಯಕ್ಕೆ ತಿಳಿಸಿದ್ದು, ಪ್ರಕರಣದಲ್ಲಿ ಅಮಿತ್ ಶಾ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search