• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನ್ಯಾಯಮೂರ್ತಿ ಸಾವು ಸಹಜ ಎಂದ ಕುಟುಂಬ, ಶಾ ವಿರೋಧಿಗಳಿಗೊಂದು ಶಾಕ್

TNN Correspondent Posted On November 29, 2017
0


0
Shares
  • Share On Facebook
  • Tweet It

ಮುಂಬೈ: ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಆರೋಪ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರು ತಳುಕು ಬೀಳುತ್ತಲೇ ಧುಲ್ಯೋ ಎಂದು ಎದ್ದು ನಿಂತ ಎಡಬಿಡಂಗಿಗಳು, ಕಾಂಗಿಗಳು ಅಮಿತ್ ಶಾ ಅವರೇ ಎನ್ ಕೌಂಟರ್ ಮಾಡಿದ್ದಾರೆ ಎಂಬ ರೀತಿ ವರ್ತಿಸಿದರು. ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬ್ರಿಜ್ ಮೋಹನ್ ಲೋಯಾ ನಿಧನರಾದಾಗಲಂತೂ ಶಾ ಅವರೇ ಕೊಲೆ ಮಾಡಿದ್ದರು ಎಂಬ ರೀತಿ ವರ್ತಿಸಿದ್ದರು.

ಆದರೆ ನ್ಯಾಯಮೂರ್ತಿ ಸಾವಿನ ಪ್ರಕರಣದಲ್ಲಿ ಅಮಿತ್ ಶಾ ಪಾತ್ರ ಏನೂ ಇಲ್ಲ ಎಂಬುದು ಸಾಬೀತಾಗುವ ಕಾಲ ಸನ್ನಿಹಿತವಾಗಿದ್ದು, ನ್ಯಾಯಮೂರ್ತಿ ಸಾವಿನ ಕುರಿತು ಯಾವುದೇ ಅನುಮಾನ ಇಲ್ಲ. ಅವರದ್ದು ಸಹಜ ಸಾವು ನ್ಯಾಯಮೂರ್ತಿ ಕುಟುಂಬದವರೇ ಹೇಳಿದ್ದಾರೆ ಎಂದು ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹೇಳಿದ್ದಾರೆ.

ನನ್ನ ತಂದೆ ನಾಗಪುರದಲ್ಲಿ ಸಹ ನ್ಯಾಯಮೂರ್ತಿಯೊಬ್ಬರ ಮಗಳ ಮದುವೆಗೆ ಹೋಗುವಾಗ ಮೃತಪಟ್ಟಿದ್ದಾರೆ. ತಂದೆ ಮೃತಪಟ್ಟ ನ.30ರಂದು ಅವರ ಜತೆಗಿದ್ದ ನ್ಯಾಯಮೂರ್ತಿಗಳ ಮೇಲೆ ನಂಬಿಕೆ ಇದೆ. ನನ್ನ ತಂದೆಯದ್ದು ಸಹಜ ಸಾವು ಎಂದು ಬ್ರಿಜ್ ಮೋಹನ್ ಲೋಯಾ ಪುತ್ರ ಅನುಜ್ ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಅವರಿಗೆ ಪತ್ರ ಸಲ್ಲಿಸಿದ್ದಾರೆ.

ಅಲ್ಲದೆ ತಂದೆಯ ಸಾವಿನ ಕುರಿತು ತನಿಖೆ ನಡೆಸಿದ ತಂಡದ ಸಮಗ್ರತೆ ಬಗ್ಗೆ ಯಾವುದೇ ಅನುಮಾನ ಇಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

2014ರಲ್ಲಿ ಬ್ರಿಜ್ ಮೋಹನ್ ಲೋಹಿಯಾ ಮೃತಪಟ್ಟಾಗ, ಅವರು ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸಾವಿನ ಹಿಂದೆ ಅಮಿತ್ ಶಾ ಸೇರಿ ಹಲವರ ಕೈವಾಡ ಇದೆ ಎಂಬ ಆರೋಪ ಕೇಳಿಬಂದಿದ್ದವು. ಇದೇ ಆರೋಪದ ಮೇಲೆ ಅಮಿತ್ ಶಾ ವಿರುದ್ಧ ಮನಬಂದಂತೆ ಟೀಕಿಸಲಾಗಿತ್ತು. ಈಗ ನ್ಯಾಯಮೂರ್ತಿ ಸಹಜವಾಗಿಯೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರೇ ನ್ಯಾಯಾಲಯಕ್ಕೆ ತಿಳಿಸಿದ್ದು, ಪ್ರಕರಣದಲ್ಲಿ ಅಮಿತ್ ಶಾ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 3
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search