• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನ್ಯಾಯಮೂರ್ತಿ ಸಾವು ಸಹಜ ಎಂದ ಕುಟುಂಬ, ಶಾ ವಿರೋಧಿಗಳಿಗೊಂದು ಶಾಕ್

TNN Correspondent Posted On November 29, 2017
0


0
Shares
  • Share On Facebook
  • Tweet It

ಮುಂಬೈ: ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಆರೋಪ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರು ತಳುಕು ಬೀಳುತ್ತಲೇ ಧುಲ್ಯೋ ಎಂದು ಎದ್ದು ನಿಂತ ಎಡಬಿಡಂಗಿಗಳು, ಕಾಂಗಿಗಳು ಅಮಿತ್ ಶಾ ಅವರೇ ಎನ್ ಕೌಂಟರ್ ಮಾಡಿದ್ದಾರೆ ಎಂಬ ರೀತಿ ವರ್ತಿಸಿದರು. ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಬ್ರಿಜ್ ಮೋಹನ್ ಲೋಯಾ ನಿಧನರಾದಾಗಲಂತೂ ಶಾ ಅವರೇ ಕೊಲೆ ಮಾಡಿದ್ದರು ಎಂಬ ರೀತಿ ವರ್ತಿಸಿದ್ದರು.

ಆದರೆ ನ್ಯಾಯಮೂರ್ತಿ ಸಾವಿನ ಪ್ರಕರಣದಲ್ಲಿ ಅಮಿತ್ ಶಾ ಪಾತ್ರ ಏನೂ ಇಲ್ಲ ಎಂಬುದು ಸಾಬೀತಾಗುವ ಕಾಲ ಸನ್ನಿಹಿತವಾಗಿದ್ದು, ನ್ಯಾಯಮೂರ್ತಿ ಸಾವಿನ ಕುರಿತು ಯಾವುದೇ ಅನುಮಾನ ಇಲ್ಲ. ಅವರದ್ದು ಸಹಜ ಸಾವು ನ್ಯಾಯಮೂರ್ತಿ ಕುಟುಂಬದವರೇ ಹೇಳಿದ್ದಾರೆ ಎಂದು ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹೇಳಿದ್ದಾರೆ.

ನನ್ನ ತಂದೆ ನಾಗಪುರದಲ್ಲಿ ಸಹ ನ್ಯಾಯಮೂರ್ತಿಯೊಬ್ಬರ ಮಗಳ ಮದುವೆಗೆ ಹೋಗುವಾಗ ಮೃತಪಟ್ಟಿದ್ದಾರೆ. ತಂದೆ ಮೃತಪಟ್ಟ ನ.30ರಂದು ಅವರ ಜತೆಗಿದ್ದ ನ್ಯಾಯಮೂರ್ತಿಗಳ ಮೇಲೆ ನಂಬಿಕೆ ಇದೆ. ನನ್ನ ತಂದೆಯದ್ದು ಸಹಜ ಸಾವು ಎಂದು ಬ್ರಿಜ್ ಮೋಹನ್ ಲೋಯಾ ಪುತ್ರ ಅನುಜ್ ಬಾಂಬೇ ಹೈಕೋರ್ಟ್ ನ್ಯಾಯಮೂರ್ತಿ ಮಂಜುಳಾ ಅವರಿಗೆ ಪತ್ರ ಸಲ್ಲಿಸಿದ್ದಾರೆ.

ಅಲ್ಲದೆ ತಂದೆಯ ಸಾವಿನ ಕುರಿತು ತನಿಖೆ ನಡೆಸಿದ ತಂಡದ ಸಮಗ್ರತೆ ಬಗ್ಗೆ ಯಾವುದೇ ಅನುಮಾನ ಇಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

2014ರಲ್ಲಿ ಬ್ರಿಜ್ ಮೋಹನ್ ಲೋಹಿಯಾ ಮೃತಪಟ್ಟಾಗ, ಅವರು ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಸಾವಿನ ಹಿಂದೆ ಅಮಿತ್ ಶಾ ಸೇರಿ ಹಲವರ ಕೈವಾಡ ಇದೆ ಎಂಬ ಆರೋಪ ಕೇಳಿಬಂದಿದ್ದವು. ಇದೇ ಆರೋಪದ ಮೇಲೆ ಅಮಿತ್ ಶಾ ವಿರುದ್ಧ ಮನಬಂದಂತೆ ಟೀಕಿಸಲಾಗಿತ್ತು. ಈಗ ನ್ಯಾಯಮೂರ್ತಿ ಸಹಜವಾಗಿಯೇ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರೇ ನ್ಯಾಯಾಲಯಕ್ಕೆ ತಿಳಿಸಿದ್ದು, ಪ್ರಕರಣದಲ್ಲಿ ಅಮಿತ್ ಶಾ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search