• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಿಂಗಳಿಗೊಂದು ರಾಕೆಟ್, ಆಕಾಶಕ್ಕೇ ಗುರಿ ಇಡುವ ಇಸ್ರೋ ಸಂಸ್ಥೆಯದು ಗ್ರೇಟ್!

TNN Correspondent Posted On November 30, 2017


  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ, ವಿಜ್ಞಾನಿಗಳ ಪರಿಶ್ರಮದಿಂದ ಇಸ್ರೋ ಈಗಾಗಲೇ ಏಕಕಾಲದಲ್ಲಿ ನೂರಕ್ಕೂ ಅಧಿಕ ರಾಕೆಟ್ ಉಡಾಯಿಸಿ ದಾಖಲೆ ಬರೆದಿದ್ದು, ಈಗ ಮತ್ತೊಂದು ದಾಖಲೆಗೆ ಮುಂದಾಗಿದೆ.

ಹೌದು, 2018ರಲ್ಲಿ ಇಸ್ರೋ ತಿಂಗಳಿಗೆ ಒಂದು ರಾಕೆಟ್ ಉಡಾವಣೆ ಮಾಡುವುದಾಗಿ ತಿಳಿಸಿದ್ದು, ಪ್ರತಿ ತಿಂಗಳು ದೇಶದ ರಾಕೆಟ್ ಒಂದು ನಭಕ್ಕೆ ಹಾರಲಿದೆ.

ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್, “ಮುಂದಿನ ವರ್ಷ ಪ್ರತಿ ತಿಂಗಳು ಒಂದು ರಾಕೆಟ್ ಉಡಾವಣೆ ಮಾಡಲು ನಿರ್ಧರಿಸಲಾಗಿದೆ. ಆ ಮೂಲಕ ರಾಕೆಟ್ ಗಳನ್ನು ಕಕ್ಷೆ ಸೇರಿಸಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಏಳಿಗೆ ಸಾಧಿಸುವುದು ಗುರಿಯಾಗಿದೆ” ಎಂದು ತಿಳಿಸಿದ್ದಾರೆ.

2018-19, 2019-20ರ ವಿತ್ತೀಯ ವರ್ಷ ಇಸ್ರೋಗೆ ಮಹತ್ತರವಾಗಿ ಪರಿಣಮಿಸಿದ್ದು, ಕೇಂದ್ರ ಸರ್ಕಾರ ಹೆಚ್ಚಿನ ಬಜೆಟ್ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಿರಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಸ್ರೋಗೆ 9 ಸಾವಿರ ಕೋಟಿ ರೂಪಾಯಿ ನೀಡಿದೆ. 2018ರ ಜನವರಿಯಲ್ಲಿ ಕಾರ್ಟೋಸ್ಯಾಟ್ -2 ಎಂಬ ರಾಕೆಟ್ ಸುಮಾರು 28 ನ್ಯಾನೋ ಉಪಗ್ರಹ ಹೊತ್ತು ನಭಕ್ಕೆ ಹಾರಲಿದೆ.

ಎಲ್ಲ ರಾಕೆಟ್ ಗಳು ಆಂಧ್ರಪ್ರದೇಶದ ಶ್ರೀ ಹರಿಕೋಟಾ ಉಡಾವಣೆ ಕೇಂದ್ರದಿಂದ ಹಾರಲಿವೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮತ್ತೊಂದು ಮೈಲಿಗಲ್ಲು ಇಡಲು ಮುಂದಾಗಿದ್ದು, ಉಡಾಯಿಸುವ ಪ್ರತಿ ರಾಕೆಟ್ ಯಶಸ್ವಿಯಾಗಲಿ, ಬಾಹ್ಯಾಕಾಶದಲ್ಲಿ ಭಾರತ ಮತ್ತಷ್ಟು ಏಳಿಗೆ ಸಾಧಿಸಲಿ ಎಂಬುದೇ ನಮ್ಮ ಆಶಯ.

ಆಲ್ ದಿ ಬೆಸ್ಟ್ ಇಸ್ರೋ…

  • Share On Facebook
  • Tweet It


- Advertisement -


Trending Now
ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
Tulunadu News March 31, 2023
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
Leave A Reply

  • Recent Posts

    • ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
  • Popular Posts

    • 1
      ಮೇ 15 ರ ತನಕ ಫ್ಲೆಕ್ಸ್ ರಹಿತ ಸುಂದರ ಮಂಗಳೂರು, ನಂತರ!!
    • 2
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 3
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 4
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 5
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search