• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅಪ್ಪನ ಕಳೆದುಕೊಂಡ ಅಪರಿಜಿತಾ ರೈ ಸಿಕ್ಕಿಂನ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾದ ದಿಟ್ಟ ಕತೆಯಿದು…

-ವಿನೂತನ್ ಜೋಷಿ ಬೆಂಗಳೂರು Posted On November 30, 2017
0


0
Shares
  • Share On Facebook
  • Tweet It

ಹಾಗೆ ಸುಮ್ಮನೆ ಯೋಚಿಸಿ ನೋಡಿ. 8ನೇ ವಯಸ್ಸಿಗೆ ತಂದೆಯನ್ನು ಕಳೆದುಕೊಂಡ ಮಕ್ಕಳ ಮನಸ್ಥಿತಿಗೆ ಹೇಗಿರುತ್ತದೆ? ಅಪ್ಪನ ಕುರಿತು ಅವರಿಗೆ ಯಾವ ಕಲ್ಪನೆ ಇರುತ್ತದೆ? ಅಪ್ಪನೇ ಇಲ್ಲದ ಅವರು ಹೇಗೆ ಬದುಕುತ್ತಾರೆ? ಅವರ ಭವಿಷ್ಯ ಹೇಗಿರುತ್ತದೆ? ಒಂದೋ ಅವರು ಸಮಾಜದ ಕರುಣೆ, ಸಿಂಪತಿ ಮೇಲೆ ಬದುಕುತ್ತಾರೆ. ಇಲ್ಲ ಹೆಣಗುತ್ತಲೇ ಜೀವನ ಸಾಗಿಸುತ್ತಾರೆ.

ಅದರಲ್ಲೂ, ಒಬ್ಬ ಬಾಲಕ ಅಥವಾ ಬಾಲಕಿಯ ತಂದೆ ಸೈನ್ಯದಲ್ಲಿದ್ದು, ಆತ ದೇಶಕ್ಕಾಗಿ ಮೃತಪಟ್ಟರೆ ಇದಕ್ಕಿಂತಲೂ ವಿಷಯ ಪರಿಸ್ಥಿತಿ ಎದುರಾಗುತ್ತದೆ. ಒಂದೆಡೆ ದೇಶಕ್ಕಾಗಿ ತಂದೆ ಪ್ರಾಣ ಕೊಟ್ಟನಲ್ಲ ಎಂಬ ಹೆಮ್ಮೆ, ಇನ್ನೊಂದೆಡೆ ಆತನೇ ಹೋದ ಮೇಲೆ ಇನ್ನೇನು ಎಂಬ ಜುಗುಪ್ಸೆ.

ಸಿಕ್ಕಿಂನ ಅಪರಜಿತಾ ರೈ ಎಂಬಾಕೆಗೆ ಆಗಿದ್ದೂ ಇದೆ. ಆದರೆ, ಆಕೆ ಅಪ್ಪ ಹೋದನಲ್ಲ ಎಂದು ಹಣೆ ಮೇಲೆ ಕೈ ಹೊತ್ತು ಕೂರಲಿಲ್ಲ. ಮನೆಯಲ್ಲಿ ಅಮ್ಮನಿಗೆ ಭಾರವಾಗಲಿಲ್ಲ. ಬದಲಿಗೆ ಚೆನ್ನಾಗಿ ಓದಿ ಪ್ರತಿ ಹಂತದಲ್ಲೂ ಮುನ್ನಡೆ ಸಾಧಿಸಿದಳು. ಕೊನೆಗೆ ಅಪ್ಪನಂತೆಯೇ ಆಕೆ ಅಧಿಕಾರಿಯೂ ಆದಳು. ಬರೀ ಅಧಿಕಾರಿ ಅಲ್ಲ, ಐಪಿಎಸ್ ಆಫಿಸರ್. ಅಷ್ಟೇ ಅಲ್ಲ, ಅಪರಿಜಿತಾ ರೈ ಸಿಕ್ಕಿಂನ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.

ಹೌದು, ಅಪರಿಜಿತಾ ರೈಗೆ ಆಗ ಬರೀ ಎಂಟು ವರ್ಷ. ಡಿವಿಷನಲ್ ಪ್ರಾದೇಶಿಕ ಅರಣ್ಯ ಅಧಿಕಾರಿಯಾಗಿದ್ದ ಅಪ್ಪ ನಿಧನರಾದರು. ಅಂದಿನಿಂದ ಅಮ್ಮ ರೋಮಾ ರೈ ಅವಳೇ ತಂದೆಯೂ ಆದಳು. ಟೀಚರ್ ಆಗಿದ್ದ ಆಕೆಗೆ ಮಗಳನ್ನೂ ಗಂಡನಂತೆ ಅಧಿಕಾರಿ ಮಾಡುವ ಆಸೆ.

ಅದರಂತೆ ಅಪರಿಜಿತಾ ರೈ ಚೆನ್ನಾಗಿ ಓದಿದಳು. ಪಶ್ಚಿಮ ಬಂಗಾಳದ ನ್ಯಾಯಾಂಗ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬಿಎ ಎಲ್ಎಲ್ ಬಿ ಪದವಿ ಪಡೆದಳು. 2010ರಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆದ ಆಕೆ ಮೊದಲ ಯತ್ನದಲ್ಲಿ ವಿಫಲವಾದಳು. ಆದರೇನಂತೆ, ಸಾಧಿಸುವ ಛಲ ಇತ್ತಲ್ಲ, ಮತ್ತೆ ಪರೀಕ್ಷೆ ಬರೆದಳು, ಅದರಲ್ಲಿ ಯಶಸ್ವಿಯೂ ಆಗಿ ಈಗ ಸಿಕ್ಕಿಂನ ಮೊದಲ ಮಹಿಳಾ ಐಪಿಎಸ್ ಆಫೀಸರ್ ಆಗಿದ್ದಾಳೆ. ಛಲ, ಸಾಧನೆ, ಹಠ ಎಂದರೆ ಇದೇ ಅಲ್ಲವೇ?

 

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
-ವಿನೂತನ್ ಜೋಷಿ ಬೆಂಗಳೂರು January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
-ವಿನೂತನ್ ಜೋಷಿ ಬೆಂಗಳೂರು January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search