• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಸತ್ತಿದೆ ಎಂದ ಕಾಂಗ್ರೆಸ್ ನಾಯಕನ ಮನದಾಳ ಹೈಕಮಾಂಡ್ ಕೇಳುವುದೇ?

TNN Correspondent Posted On November 30, 2017
0


0
Shares
  • Share On Facebook
  • Tweet It

ಮುಂಬೈ: ‘ಮುಂದೆ ನಡೆಯಲಿರವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಅದು ಚುನಾವಣೆಯೇ ಅಲ್ಲ, ಅದೊಂದು ನಾಚಿಕೆಗೇಡಿನ ಚುನಾವಣೆ ಪ್ರಕ್ರಿಯೆ. ಅಲ್ಲಿ ಒಂದು ಕುಟುಂಬದ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ಅವರೇ ವಿಜಯಿಯಾಗುತ್ತಾರೆ ಎಂಬ ಪ್ರಕ್ರಿಯೇ ಹೀನವಾದದ್ದು’

ಹೀಗೆ ಕಾಂಗ್ರೆಸ್ ಕುಟುಂಬ ಪ್ರಾಬಲ್ಯಕ್ಕೆ ಸಿಡಿದೆದ್ದವರು ಪ್ರತಿಪಕ್ಷದವರಲ್ಲ. ಮಹಾರಾಷ್ಟ್ರದ ಕಾಂಗ್ರೆಸ್ ನ ಹಿರಿಯ ನಾಯಕ ಶಾಹಾಜಾದ್ ಪೂನಾವಾಲಾ. ನಾನು ಹೇಳುವುದರಲ್ಲಿ ಸ್ಪಷ್ಟತೆ ಇದೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಹೈಕಮಾಂಡ್ ವಿರುದ್ಧವೇ ಶಾಹಾಜಾದ್ ಗುಡುಗಿದ್ದಾರೆ.

ಕೆಲವು ಮುಖಂಡರು ಸುಮ್ಮನೇ ಹೋಗಿ ವೋಟ್ ಹಾಕಿ ಬರುತ್ತಾರೆ. ಅವರೆಲ್ಲರೂ ಇವರಿಗೆ ವೋಟ್ ಹಾಕಬೇಕು ಎಂದು ನಿರ್ಧಾರವಾಗಿರುತ್ತದೆ. ಅವರು ತಮ್ಮ ನಿಷ್ಠೆಯನ್ನು ಮಿತಿಮೀರಿ ತೋರಿಸುತ್ತಾರೆ. ನಾನು ಧೈರ್ಯದಿಂದ ಮಾತನಾಡಿದರೆ. ನನ್ನ ವಿರುದ್ಧವೇ ಎಲ್ಲ ನಾಯಕರು ಮುಗಿ ಬೀಳುತ್ತಾರೆ. ಆದರೆ ನಾನು ವಾಸ್ತವವನ್ನು ಮಾತನಾಡುತ್ತಾನೆ. ಇಡಿ ಪ್ರಕ್ರಿಯೇ ಬಗ್ಗೆ ದಾಖಲೆ ಹೊಂದಿದ್ದೇನೆ ಎಂದು ಹೈಕಮಾಂಡ್ ಸಂಸ್ಕೃತಿ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಮೊದಲು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಅಡ್ಡ ಮಾರ್ಗ ಬಿಟ್ಟು ನೇರವಾಗಿ ಚುನಾವಣೆ ಎದುರಿಸಲಿ. ಮತ್ತೊಬ್ಬರಿಗೂ ಅವಕಾಶ ನೀಡಲಿ. ಆಗ ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಈ ಕುರಿತು ರಾಹುಲ್ ಗಾಂಧಿಗೆ ಪತ್ರ ಬರೆದಿರುವ ಪೂನಾವಾಲ್ ‘ನಾನು ಪೂರ್ವಾಗ್ರಹ ಪೀಡಿತ, ಕಾಟಾಚಾರದ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ನೇರವಾಗಿ, ನ್ಯಾಯಯುತವಾಗಿ ಚುನಾವಣೆ ನಡೆಸಿದರೆ, ನಾನು ಸ್ಪರ್ಧಿಸುತ್ತೇನೆ. ಮತದಾನ ಮಾಡಲು ಬರುವ ನಾಯಕರು ಮತ್ತೊಬ್ಬರ ಕೈಗೊಂಬೆಯಾಗಿದ್ದರೆ, ಚುನಾವಣೆ ನಡೆಸುವುದೇ ವ್ಯರ್ಥ ಎಂದು ಹೇಳಿದ್ದಾರೆ.

ಅಲ್ಲದೇ ತಳಮಟ್ಟದಿಂದ ಪಕ್ಷ ಸಂಘಟಿಸಿ, ಪಕ್ಷಕ್ಕಾಗಿ ಶ್ರಮಿಸುತ್ತಿರುವ ಕಾರ್ಯಕರ್ತರಿಗೆ ಸೂಕ್ತ ಸ್ಥಾನ, ಮಾನ ದೊರೆಯುತ್ತಿಲ್ಲ. ಪಕ್ಷದಲ್ಲಿ ಕೆಲವೇ ಕುಟುಂಬಗಳು ಅಧಿಕಾರ ಅನುಭವಿಸುತ್ತೀವೆ. ರಾಹುಲ್ ಗಾಂಧಿ ಅವರೇ ನೀವು ಒಂದೇ ಒಂದು ಸ್ಥಾನವನ್ನು ಚುನಾವಣೆ ಮೂಲಕ ಪಡೆದಿಲ್ಲ. ಬರೀ ನಿಮ್ಮ ಕುಟುಂಬದ ಹೆಸರಿನಿಂದಲೇ ಸ್ಥಾನ ಪಡೆದಿದ್ದೀರಿ. ಅಲ್ಲದೇ ಇತರ ನಾಯಕರಂತೆ ಆಕರ್ಷಕ ಮಾತುಗಾರಿಕೆಯೂ ಇಲ್ಲ. ಉಪಾಧ್ಯಕ್ಷನಾಗಿ, ಕುಟುಂಬದ ಕುಡಿಯಾಗಿ ಸ್ಪರ್ಧಿಸದೇ ಸಾಮಾನ್ಯ ಕಾರ್ಯಕರ್ತನಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಎಂದು ರಾಹುಲ್ ಗಾಂಧಿಗೆ ಬುದ್ಧಿವಾದ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search