• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಸತ್ತಿದೆ ಎಂದ ಕಾಂಗ್ರೆಸ್ ನಾಯಕನ ಮನದಾಳ ಹೈಕಮಾಂಡ್ ಕೇಳುವುದೇ?

TNN Correspondent Posted On November 30, 2017


  • Share On Facebook
  • Tweet It

ಮುಂಬೈ: ‘ಮುಂದೆ ನಡೆಯಲಿರವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಅದು ಚುನಾವಣೆಯೇ ಅಲ್ಲ, ಅದೊಂದು ನಾಚಿಕೆಗೇಡಿನ ಚುನಾವಣೆ ಪ್ರಕ್ರಿಯೆ. ಅಲ್ಲಿ ಒಂದು ಕುಟುಂಬದ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ಅವರೇ ವಿಜಯಿಯಾಗುತ್ತಾರೆ ಎಂಬ ಪ್ರಕ್ರಿಯೇ ಹೀನವಾದದ್ದು’

ಹೀಗೆ ಕಾಂಗ್ರೆಸ್ ಕುಟುಂಬ ಪ್ರಾಬಲ್ಯಕ್ಕೆ ಸಿಡಿದೆದ್ದವರು ಪ್ರತಿಪಕ್ಷದವರಲ್ಲ. ಮಹಾರಾಷ್ಟ್ರದ ಕಾಂಗ್ರೆಸ್ ನ ಹಿರಿಯ ನಾಯಕ ಶಾಹಾಜಾದ್ ಪೂನಾವಾಲಾ. ನಾನು ಹೇಳುವುದರಲ್ಲಿ ಸ್ಪಷ್ಟತೆ ಇದೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಹೈಕಮಾಂಡ್ ವಿರುದ್ಧವೇ ಶಾಹಾಜಾದ್ ಗುಡುಗಿದ್ದಾರೆ.

ಕೆಲವು ಮುಖಂಡರು ಸುಮ್ಮನೇ ಹೋಗಿ ವೋಟ್ ಹಾಕಿ ಬರುತ್ತಾರೆ. ಅವರೆಲ್ಲರೂ ಇವರಿಗೆ ವೋಟ್ ಹಾಕಬೇಕು ಎಂದು ನಿರ್ಧಾರವಾಗಿರುತ್ತದೆ. ಅವರು ತಮ್ಮ ನಿಷ್ಠೆಯನ್ನು ಮಿತಿಮೀರಿ ತೋರಿಸುತ್ತಾರೆ. ನಾನು ಧೈರ್ಯದಿಂದ ಮಾತನಾಡಿದರೆ. ನನ್ನ ವಿರುದ್ಧವೇ ಎಲ್ಲ ನಾಯಕರು ಮುಗಿ ಬೀಳುತ್ತಾರೆ. ಆದರೆ ನಾನು ವಾಸ್ತವವನ್ನು ಮಾತನಾಡುತ್ತಾನೆ. ಇಡಿ ಪ್ರಕ್ರಿಯೇ ಬಗ್ಗೆ ದಾಖಲೆ ಹೊಂದಿದ್ದೇನೆ ಎಂದು ಹೈಕಮಾಂಡ್ ಸಂಸ್ಕೃತಿ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಮೊದಲು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಅಡ್ಡ ಮಾರ್ಗ ಬಿಟ್ಟು ನೇರವಾಗಿ ಚುನಾವಣೆ ಎದುರಿಸಲಿ. ಮತ್ತೊಬ್ಬರಿಗೂ ಅವಕಾಶ ನೀಡಲಿ. ಆಗ ನಾನು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಈ ಕುರಿತು ರಾಹುಲ್ ಗಾಂಧಿಗೆ ಪತ್ರ ಬರೆದಿರುವ ಪೂನಾವಾಲ್ ‘ನಾನು ಪೂರ್ವಾಗ್ರಹ ಪೀಡಿತ, ಕಾಟಾಚಾರದ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ನೇರವಾಗಿ, ನ್ಯಾಯಯುತವಾಗಿ ಚುನಾವಣೆ ನಡೆಸಿದರೆ, ನಾನು ಸ್ಪರ್ಧಿಸುತ್ತೇನೆ. ಮತದಾನ ಮಾಡಲು ಬರುವ ನಾಯಕರು ಮತ್ತೊಬ್ಬರ ಕೈಗೊಂಬೆಯಾಗಿದ್ದರೆ, ಚುನಾವಣೆ ನಡೆಸುವುದೇ ವ್ಯರ್ಥ ಎಂದು ಹೇಳಿದ್ದಾರೆ.

ಅಲ್ಲದೇ ತಳಮಟ್ಟದಿಂದ ಪಕ್ಷ ಸಂಘಟಿಸಿ, ಪಕ್ಷಕ್ಕಾಗಿ ಶ್ರಮಿಸುತ್ತಿರುವ ಕಾರ್ಯಕರ್ತರಿಗೆ ಸೂಕ್ತ ಸ್ಥಾನ, ಮಾನ ದೊರೆಯುತ್ತಿಲ್ಲ. ಪಕ್ಷದಲ್ಲಿ ಕೆಲವೇ ಕುಟುಂಬಗಳು ಅಧಿಕಾರ ಅನುಭವಿಸುತ್ತೀವೆ. ರಾಹುಲ್ ಗಾಂಧಿ ಅವರೇ ನೀವು ಒಂದೇ ಒಂದು ಸ್ಥಾನವನ್ನು ಚುನಾವಣೆ ಮೂಲಕ ಪಡೆದಿಲ್ಲ. ಬರೀ ನಿಮ್ಮ ಕುಟುಂಬದ ಹೆಸರಿನಿಂದಲೇ ಸ್ಥಾನ ಪಡೆದಿದ್ದೀರಿ. ಅಲ್ಲದೇ ಇತರ ನಾಯಕರಂತೆ ಆಕರ್ಷಕ ಮಾತುಗಾರಿಕೆಯೂ ಇಲ್ಲ. ಉಪಾಧ್ಯಕ್ಷನಾಗಿ, ಕುಟುಂಬದ ಕುಡಿಯಾಗಿ ಸ್ಪರ್ಧಿಸದೇ ಸಾಮಾನ್ಯ ಕಾರ್ಯಕರ್ತನಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಎಂದು ರಾಹುಲ್ ಗಾಂಧಿಗೆ ಬುದ್ಧಿವಾದ ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search