• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕಾಶ್ಮೀರದಲ್ಲಿ ಉಗ್ರರ ಸಂಹಾರ, 11 ತಿಂಗಳಲ್ಲೇ ಸೇನೆಯ ಸ್ಕೋರ್ 200!

-ಅವಿನಾಶ್ ಭಟ್, ಬೆಂಗಳೂರು Posted On December 1, 2017
0


0
Shares
  • Share On Facebook
  • Tweet It

ಅದೊಂದು ಕಾಲವಿತ್ತು. ದಿನಬೆಳಗಾದರೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಅಷ್ಟು ಯೋಧರ ಸಾವು, ಇಷ್ಟು ಯೋಧರ ಸಾವು ಎಂಬ ಮಾತಿತ್ತು.

ಆದರೆ, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಯಾವಾಗ ಅಸ್ತಿತ್ವಕ್ಕೆ ಬಂದಿತೋ, ಸೇನೆಗೆ ಸ್ವಾತಂತ್ರ್ಯ, ಉಗ್ರರ ವಿರುದ್ಧದ ದಾಳಿಗೆ ಪ್ರೋತ್ಸಾಹ, ಸರ್ಜಿಕಲ್ ದಾಳಿಗೆ ಅನುಮತಿ ನೀಡಿತೋ, ಅಲ್ಲಿಂದ ಕಾಶ್ಮೀರದ ಪರಿಸ್ಥಿತಿಯೇ ಬದಲಾಗತೊಡಗಿತು.

ಅದರಲ್ಲೂ ಪ್ರಸಕ್ತ ವರ್ಷದಲ್ಲಂತೂ ಸೇನೆ ಅಮೋಘ ಸಾಧನೆ ಮೆರೆದಿದ್ದು, 11 ತಿಂಗಳಲ್ಲೇ 200 ಉಗ್ರರನ್ನು ಹತ್ಯೆಗೈಯುವ ಮೂಲಕ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಯಲ್ಲಿ ತೊಡಗುವವರಿಗೆ ಭಾರಿ ಆಘಾತ ನೀಡಿದೆ.

ಹಾಗೆ ನೋಡಿದರೆ ವರ್ಷದ ಆರಂಭದಿಂದಲೇ ಭಾರತೀಯ ಸೈನಿಕರು ಉಗ್ರರ ವಿರುದ್ಧ ಮುರಕೊಂಡು ಬಿದ್ದರು. ಕಂಡಲ್ಲಿ ಗುಂಡಿಟ್ಟುಕೊಂದರು. ಗಡಿಯಲ್ಲಿ ನುಸುಳುವವರ ಹೆಡೆಮುರಿಕಟ್ಟಿದರು.

ಬುರ್ಹಾನ್ ವನಿ ಹತ್ಯೆಯಾದ ಬಳಿಕ ಕಾಶ್ಮೀರದಲ್ಲಿ ಉಂಟಾದ ಗಲಭೆ ಹಾಗೂ ಉಗ್ರರ ಉಪಟಳ ತಡೆಯಲು ಸನ್ನದ್ಧವಾದ ಸೇನೆ, 2017ರ ಮೊದಲ 4 ನಾಲ್ಕು ತಿಂಗಳಲ್ಲೇ 42 ಉಗ್ರರನ್ನು ಹೊಡೆದುರುಳಿಸಿದ್ದರು. ಮೇನಲ್ಲಿ 17 ಉಗ್ರರನ್ನು ಹೊಡೆದುರುಳಿಸಿದರೆ, ಜೂನ್ ನಲ್ಲೇ ಬರೋಬ್ಬರಿ 30 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಒಟ್ಟಿನಲ್ಲಿ ಮೊದಲ ಏಳು ತಿಂಗಳು, ಅಂದರೆ ಜುಲೈ ವೇಳೆಗೆ 100 ಉಗ್ರರನ್ನು ಹತ್ಯೆಗೈದು, ಉಗ್ರರಿಗೆ ತಕ್ಕಪಾಠ ಕಲಿಸಿತ್ತು ಸೇನೆ.

ಯಾವಾಗ, ಕಳೆದ ಮೇ ತಿಂಗಳಲ್ಲಿ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿತೋ, ಅಲ್ಲಿಂದ ಉಗ್ರರು ಪತರಗುಟ್ಟಿದರು. ಅದರ ಪ್ರತಿಫಲವಾಗಿಯೇ ಜುಲೈನಿಂದ ನವೆಂಬರ್ ಅಂತ್ಯದ ವೇಳೆಗೆ, ಅಂದರೆ 4 ತಿಂಗಳಲ್ಲೇ ಸೇನೆ ಮತ್ತೆ 100 ಉಗ್ರರನ್ನು ಹತ್ಯೆ ಮಾಡಿದ್ದು, 11 ತಿಂಗಳಲ್ಲೇ 200 ಉಗ್ರರನ್ನು ಕೊಂದು ಹಾಕಿದೆ. ಇದು ಕಳೆದ ಏಳು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ವರ್ಷವೊಂದಲ್ಲೇ 200 ಉಗ್ರರನ್ನು ಹೊಡೆದುರುಳಿಸಿರುವುದು ದಾಖಲೆಯೇ ಸರಿ.

ಅಷ್ಟೇ ಅಲ್ಲ, ನೋಟು ನಿಷೇಧದಿಂದ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಹಣ ಬರದೆ ಉಗ್ರರ ಉಪಟಳ ಕಡಿಮೆಯಾಗಿದೆ. ಕೇಂದ್ರ ತನಿಖಾ ಸಂಸ್ಥೆ (ಎನ್ಐಎ) ದಾಳಿ ಮಾಡಿ ಪ್ರತ್ಯೇಕತಾವಾದಿಗಳನ್ನು ತಣ್ಣಗಾಗಿಸಿದೆ. ಒಳನುಸುಳುವಿಕೆಯನ್ನೂ ಹತ್ತಿಕ್ಕಲಾಗಿದೆ. ಇತ್ತೀಚೆಗಷ್ಟೇ, ಶಾಂತಿ-ಮಾತುಕತೆ ನಡೆಸಲು ಕೇಂದ್ರ ಸರ್ಕಾರ ದಿನೇಶ್ವರ್ ಮಿಶ್ರಾ ಎಂಬುವವರನ್ನು ನೇಮಿಸಿದೆ. ಕಲ್ಲು ತೂರಾಟ ಪ್ರಕರಣಗಳೂ ನಿಂತು ಹೋಗಿವೆ. ಲಷ್ಕರೆ ತಯ್ಯಬಾದಂಥ ಉಗ್ರ ಸಂಘಟನೆ ಸೇರಿದ ಯುವಕರು ವಾಪಸು ಮರಳುತ್ತಿದ್ದಾರೆ. ಕಲ್ಲು ತೂರಾಟಗಾರರ ಮನ ಪರಿವರ್ತಿಸಲು, ಅವರ ವಿರುದ್ಧ ದಾಖಲಿಸಿದ ಪ್ರಕರಣ ಕೈಬಿಟ್ಟ ರಾಜ್ಯ ಸರ್ಕಾರ ಸಕಾರಾತ್ಮಕ ಹೆಜ್ಜೆ ಇಟ್ಟಿದೆ. ಇದೆಲ್ಲದರ ಪರಿಣಾಮವಾಗಿ ಜಮ್ಮು-ಕಾಶ್ಮೀರದಲ್ಲಿ ಉಗ್ರರ, ಪ್ರತ್ಯೇಕತವಾದಿಗಳ, ಕಲ್ಲು ತೂರಾಟಗಾರರ ಹಾವಳಿ ಕಡಿಮೆಯಾಗಿದೆ.

ಒಟ್ಟಿನಲ್ಲಿ, ಕೇಂದ್ರ ಸರ್ಕಾರದ ಸಹಕಾರ, ರಾಜ್ಯ ಸರ್ಕಾರದ ನಿರ್ಧಾರ, ಸೇನೆಯ ಉಗ್ರರ ಸಂಹಾರಗಳು ಕಾಶ್ಮೀರದ ಪರಿಸ್ಥಿತಿ ಬದಲಾಯಿಸುತ್ತಿದ್ದು, ಅಲ್ಲಿ ಶಾಂತಿ ನೆಲೆಸಲಿ, ಉಗ್ರರೆಲ್ಲ ನಾಶವಾಗಲಿ ಎಂಬುದೇ ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
-ಅವಿನಾಶ್ ಭಟ್, ಬೆಂಗಳೂರು January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
-ಅವಿನಾಶ್ ಭಟ್, ಬೆಂಗಳೂರು January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search