• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಆರ್ಥಿಕ ಸ್ಥಿತಿ ಬುಡಮೇಲಾಯಿತು ಎಂದವರೇ, ಈಗೆಲ್ಲಿದ್ದೀರಿ?

TNN Correspondent Posted On December 1, 2017
0


0
Shares
  • Share On Facebook
  • Tweet It

ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ನೋಟು ನಿಷೇಧ ಮಾಡುತ್ತಲೇ, ಕಾಂಗ್ರೆಸ್ ಸೇರಿ ಹಲವು ವಿರೋಧ ಪಕ್ಷಗಳು, ಎಡಬಿಡಂಗಿಗಳು, ಬುದ್ಧಿಜೀವಿಗಳು, ಮೋದಿ ವಿರುದ್ಧ ಟೀಕಿಸಿದರು. ಇದು ಜನರಿಗೆ ತೊಂದರೆ ನೀಡುವ ನಿರ್ಧಾರ ಎಂದರು. ಆದರೂ ಜನ ಬ್ಯಾಂಕುಗಳ ಎದುರು ಸಾಲು ನಿಂತು ಮೋದಿ ನಿರ್ಧಾರವನ್ನು ಬೆಂಬಲಿಸಿದರು.

ಬಳಿಕ ಕೇಂದ್ರ ಸರ್ಕಾರ ತೆರಿಗೆ ಪದ್ಧತಿ ಸುಧಾರಣೆಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದರೂ. ಆಗಲೂ ಇವರು ಇದು ದೇಶದ ವಿತ್ತೀಯ ಪರಿಸ್ಥಿತಿ ಬುಡಮೇಲಾಗುತ್ತದೆ ಎಂದೇ ಬೊಬ್ಬೆ ಹಾಕಿದರು. ಜಿಎಸ್ಟಿ ಜಾರಿಯಾದ ಬಳಿಕ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) 5.7ಕ್ಕೆ ಇಳಿಯಿತೋ, ಈ ಕೇಂದ್ರ ಸರ್ಕಾರದ ವಿರೋಧಿಗಳಿಗೆ ಸಕ್ಕರೆ ತಿಂದಷ್ಟೇ ಖುಷಿಯಾಯಿತು. ಆಳಿಗೊಂದು ಎಂಬಂತೆ ಕೇಂದ್ರದ ವಿರುದ್ಧ ಕಲ್ಲೆಸೆದರು.

ಆದರೆ ಇನ್ನು ಮುಂದೆ ಕೇಂದ್ರ ಸರ್ಕಾರವನ್ನು ಸುಖಾಸುಮ್ಮನೆ ತೆಗಳಲು ಅವರಿಗಿದ್ದ ಒಂದು ಕಾರಣವೂ ಇಲ್ಲದಂತಾಗಿದ್ದು, ಜುಲೈ-ಸೆಪ್ಟೆಂಬರ್ ನಲ್ಲಿ ದೇಶದ ಜಿಡಿಪಿ 6.3ಕ್ಕೆ ಏರಿಕೆಯಾಗಿದೆ. ಆರ್ಥಿಕ ತಜ್ಞರ ಪ್ರಕಾರ ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿದುಬಂದಿದೆ. ಏಪ್ರಿಲ್ ಜೂನ್ ನಲ್ಲಿ ಜಿಡಿಪಿ 5.7ಕ್ಕೆ ಕುಸಿದಿದ್ದು, ಪ್ರಸ್ತುತ 0.6ರಷ್ಟು ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರಕಾರ ಭಾರತ 2022ರ ವೇಳೆಗೆ ಜಿಡಿಪಿಯಲ್ಲಿ ಜಪಾನ್ ಅನ್ನು ಸಹ ಮೀರಿಸಲಿದೆ ಎಂದು ತಿಳಿದುಬಂದಿದ್ದು, ಭಾರತದ ಆರ್ಥಿಕ ಸ್ಥಿತಿ ಉಚ್ಛ್ರಾಯ ಸ್ಥಿತಿ ತಲುಪಲಿದೆ ಎಂದೇ ಹೇಳಲಾಗುತ್ತಿದೆ. ಅಲ್ಲದೆ ಇದು, ಗುಜರಾತ್ ಚುನಾವಣೆ ಮೇಲೂ ಬಿಜೆಪಿಗೆ ಸಕಾರಾತ್ಮಕವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ನೋಟ್ಯಂತರ,  ಜಿಎಸ್ಟಿ ಬಳಿಕ ಕಾಳಧನಿಕರಿಗೆ ಅಂಕುಶ ಸೇರಿ ದೇಶದ ಜಿಡಿಪಿ ಸಹ ವೃದ್ಧಿಸುತ್ತಿರುವುದು ಸಕಾರಾತ್ಮಕವಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search