• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಆರ್ಥಿಕ ಸ್ಥಿತಿ ಬುಡಮೇಲಾಯಿತು ಎಂದವರೇ, ಈಗೆಲ್ಲಿದ್ದೀರಿ?

TNN Correspondent Posted On December 1, 2017
0


0
Shares
  • Share On Facebook
  • Tweet It

ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ನೋಟು ನಿಷೇಧ ಮಾಡುತ್ತಲೇ, ಕಾಂಗ್ರೆಸ್ ಸೇರಿ ಹಲವು ವಿರೋಧ ಪಕ್ಷಗಳು, ಎಡಬಿಡಂಗಿಗಳು, ಬುದ್ಧಿಜೀವಿಗಳು, ಮೋದಿ ವಿರುದ್ಧ ಟೀಕಿಸಿದರು. ಇದು ಜನರಿಗೆ ತೊಂದರೆ ನೀಡುವ ನಿರ್ಧಾರ ಎಂದರು. ಆದರೂ ಜನ ಬ್ಯಾಂಕುಗಳ ಎದುರು ಸಾಲು ನಿಂತು ಮೋದಿ ನಿರ್ಧಾರವನ್ನು ಬೆಂಬಲಿಸಿದರು.

ಬಳಿಕ ಕೇಂದ್ರ ಸರ್ಕಾರ ತೆರಿಗೆ ಪದ್ಧತಿ ಸುಧಾರಣೆಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೊಳಿಸಿದರೂ. ಆಗಲೂ ಇವರು ಇದು ದೇಶದ ವಿತ್ತೀಯ ಪರಿಸ್ಥಿತಿ ಬುಡಮೇಲಾಗುತ್ತದೆ ಎಂದೇ ಬೊಬ್ಬೆ ಹಾಕಿದರು. ಜಿಎಸ್ಟಿ ಜಾರಿಯಾದ ಬಳಿಕ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) 5.7ಕ್ಕೆ ಇಳಿಯಿತೋ, ಈ ಕೇಂದ್ರ ಸರ್ಕಾರದ ವಿರೋಧಿಗಳಿಗೆ ಸಕ್ಕರೆ ತಿಂದಷ್ಟೇ ಖುಷಿಯಾಯಿತು. ಆಳಿಗೊಂದು ಎಂಬಂತೆ ಕೇಂದ್ರದ ವಿರುದ್ಧ ಕಲ್ಲೆಸೆದರು.

ಆದರೆ ಇನ್ನು ಮುಂದೆ ಕೇಂದ್ರ ಸರ್ಕಾರವನ್ನು ಸುಖಾಸುಮ್ಮನೆ ತೆಗಳಲು ಅವರಿಗಿದ್ದ ಒಂದು ಕಾರಣವೂ ಇಲ್ಲದಂತಾಗಿದ್ದು, ಜುಲೈ-ಸೆಪ್ಟೆಂಬರ್ ನಲ್ಲಿ ದೇಶದ ಜಿಡಿಪಿ 6.3ಕ್ಕೆ ಏರಿಕೆಯಾಗಿದೆ. ಆರ್ಥಿಕ ತಜ್ಞರ ಪ್ರಕಾರ ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿದುಬಂದಿದೆ. ಏಪ್ರಿಲ್ ಜೂನ್ ನಲ್ಲಿ ಜಿಡಿಪಿ 5.7ಕ್ಕೆ ಕುಸಿದಿದ್ದು, ಪ್ರಸ್ತುತ 0.6ರಷ್ಟು ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರಕಾರ ಭಾರತ 2022ರ ವೇಳೆಗೆ ಜಿಡಿಪಿಯಲ್ಲಿ ಜಪಾನ್ ಅನ್ನು ಸಹ ಮೀರಿಸಲಿದೆ ಎಂದು ತಿಳಿದುಬಂದಿದ್ದು, ಭಾರತದ ಆರ್ಥಿಕ ಸ್ಥಿತಿ ಉಚ್ಛ್ರಾಯ ಸ್ಥಿತಿ ತಲುಪಲಿದೆ ಎಂದೇ ಹೇಳಲಾಗುತ್ತಿದೆ. ಅಲ್ಲದೆ ಇದು, ಗುಜರಾತ್ ಚುನಾವಣೆ ಮೇಲೂ ಬಿಜೆಪಿಗೆ ಸಕಾರಾತ್ಮಕವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ನೋಟ್ಯಂತರ,  ಜಿಎಸ್ಟಿ ಬಳಿಕ ಕಾಳಧನಿಕರಿಗೆ ಅಂಕುಶ ಸೇರಿ ದೇಶದ ಜಿಡಿಪಿ ಸಹ ವೃದ್ಧಿಸುತ್ತಿರುವುದು ಸಕಾರಾತ್ಮಕವಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search