• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರವಾಗುವ ತನಕ ಮದುವೆಯಾಗಲ್ಲ ಎಂದ ದಿಟ್ಟೆ ಯಾರು ಗೊತ್ತಾ?

TNN Correspondent Posted On December 1, 2017
0


0
Shares
  • Share On Facebook
  • Tweet It

ಜೈಪುರ: ಕೇರಳ, ಮುಂಬೈ ಸೇರಿ ದೇಶದ ಹಲವೆಡೆ ಹಿಂದೂ ಯುವತಿಯರನ್ನು ಮತಾಂತರಗೊಳಿಸಿ ಮದುವೆಯಾಗುವ, ಅವರಿಗೆ ಕಿರಕುಳ ನೀಡುವ ಸೇರಿ ಹಲವು ಜಿಹಾದ್ ಪ್ರಕರಣ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ರಾಜಸ್ಥಾನದ ಜೋಧ್ ಪುರದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯತಮ ಹಿಂದೂ ಧರ್ಮಕ್ಕೆ ಮತಾಂತರವಾಗದ ಹೊರತು ಆತನನ್ನು ಮದುವೆಯಾಗುವುದಿಲ್ಲ ಎಂದು ದಿಟ್ಟತನ ಮೆರೆದಿದ್ದಾಳೆ.

20 ವರ್ಷದ ಪೂಜಾ ಜೋಷಿ ಹಾಗೂ ಟ್ಯಾಕ್ಸಿ ಡ್ರೈವರ್ ಮೊಹ್ಶಿನ್ ಖಾನ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಇಬ್ಬರೂ ಕಾಣೆಯಾಗಿದ್ದು, ಇದು ಲವ್ ಜಿಹಾದ್ ಎಂದೇ ಎಲ್ಲರೂ ಭಾವಿಸಿದ್ದರು.

ಆದರೆ ಪೂಜಾ ತಂದೆ ನೀಡಿದ ದೂರಿನ ಅನ್ವಯ ಬಿಕಾನೆರ್ ಎಂಬಲ್ಲಿ ಇಬ್ಬರೂ ಪ್ರಣಯ ಪಕ್ಷಿಗಳನ್ನು ಪೊಲೀಸರು ಬಂಧಿಸಿದ್ದು, ಏನಾಗಿದೆ ಎಂದು ವಿಚಾರಣೆ ನಡೆಸಿದ್ದಾರೆ. ಇದು ಲವ್ ಜಿಹಾದ್ ಎಂದು ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಇಬ್ಬರನ್ನೂ ವಿಚಾರಿಸಿದ ಬಳಿಕ ಎಸಿಪಿ ಪೂಜಾ ಯಾದವ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, “ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರಾಗುವವರೆಗೂ ಆತನನ್ನು ಮದುವೆಯಾಗುವುದಿಲ್ಲ ಎಂದು ಪೂಜಾ ಜೋಷಿ ತಿಳಿಸಿದ್ದಾರೆ” ಎಂದಿದ್ದಾರೆ.

ಅಲ್ಲದೆ, ಆತ ಮತಾಂತರವಾಗುವವರೆಗೂ ತನ್ನ ಸಂಬಂಧಿಕರ ಮನೆಯಲ್ಲೇ ವಾಸವಾಗಿರುವುದಾಗಿ ತಿಳಿಸಿದ್ದು, ಆಕೆ ಇನ್ನೂ ಬಾಲಕಿಯಲ್ಲದ ಹಾಗೂ ಆಕೆ ಎಲ್ಲಾದರೂ ವಾಸಿಸುವ ಹಕ್ಕು ಹೊಂದಿದ್ದಾಳೆ ಎಂದು ಎಸಿಪಿ ಹೇಳಿದ್ದಾರೆ.

ಒಟ್ಟಿನಲ್ಲಿ ಲವ್ ಜಿಹಾದ್ ಬಲೆಗೆ ಬಿದ್ದು ಜೀವನ ಪೂರ್ತಿ ನರಕ ಅನುಭವಿಸುವವರಿಗಿಂತ, ಆತ ಪ್ರೀತಿಗಾಗಿ ಮತಾಂತರವಾಗುವವರೆಗೂ ಮದುವೆಯಾಗಲ್ಲ ಎಂದು ಪೂಜಾ ಜೋಷಿ ಹಠ ಹಿಡಿದಿರುವುದು ದಿಟ್ಟತನವಾಗಿದ್ದು, ಯುವಕ ಯಾವ ಹಾದಿ ತುಳಿಯಲಿದ್ದಾನೆ ಎಂಬುದು ಕುತೂಹಲ ಕೆರಳಿಸಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search